AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ

Bangalore News: ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟ ಮಹಿಳೆಯೊಬ್ಬರು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಚ್​ಎಎಲ್​ನ ವಿಭೂತಿಪುರದಲ್ಲಿ ನಡೆದಿದೆ.

ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಮಗುವನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
ದಂಪತಿ ನರೇಂದ್ರ -ಗಾಯತ್ರಿ ಮತ್ತು ಮಗು
TV9 Web
| Updated By: Rakesh Nayak Manchi|

Updated on:Aug 23, 2022 | 7:16 AM

Share

ಬೆಂಗಳೂರು: ಬಂದ ಕಷ್ಟಗಳನ್ನ ಎದುರಿಸುವ ಶಕ್ತಿ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟ ಮಹಿಳೆಯೊಬ್ಬರು ತನ್ನ ಮಗುವನ್ನು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಎಚ್​ಎಎಲ್​ನ ವಿಭೂತಿಪುರದಲ್ಲಿ ನಡೆದಿದೆ. ಮೂರು ವರ್ಷದ ಸಂಯುಕ್ತಾ ತಾಯಿಯಿಂದ ಕೊಲೆಯಾದವಳು. ಘಟನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಗಾಯತ್ರಿಯನ್ನು ಪತಿ ನರೇಂದ್ರ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಂಪತಿಗಳು ತಮಿಳುನಾಡಿನ ಮೂಲದವರಾಗಿದ್ದು, ಘಟನೆ ಸಂಬಂಧ ಎಚ್​​ಎಎಲ್​ ಲೇಔಟ್​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನರೇಂದ್ರ ಹಾಗೂ ಗಾಯತ್ರಿ ದಂಪತಿ ಎಚ್​ಎಎಲ್​ನ ವಿಭೂತಿಪುರದಲ್ಲಿ  ನೆಲೆಸಿ ಜೀವನ ಸಾಗಿಸುತ್ತಿದ್ದರು. ಇಪ್ಪತ್ತು ದಿನಗಳಲ್ಲಿ ಹಿಂದೆ ನೇರಂದ್ರ ತಾಯಿ ತಮಿಳುನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ಆಘಾತದಲ್ಲಿದ್ದ ನರೇಂದ್ರ ಅವರಿಗೆ ಇದೀಗ ಮಗುವನ್ನು ಕಳೆದುಕೊಂಡು ದುಃಖತಪ್ತರಾಗಿದ್ದಾರೆ.

ನಿನ್ನೆಯಷ್ಟೇ ತಮಿಳುನಾಡಿನಿಂದ ಬೆಂಗಳೂರಿಗೆ ನರೇಂದ್ರ ಅವರು ಹಿಂದಿರುಗಿದ್ದರು. ಬೆಳಗ್ಗೆ ಮನೆ ಬಾಗಿಲು ತಟ್ಟಿದಾಗ ಪತ್ನಿ ಗಾಯತ್ರಿ ಬಾಗಿಲು ತೆಗೆಯಲಿಲ್ಲ. ಎಷ್ಟು ಕರೆದರೂ ಬಾಗಿಗಲು ತೆರೆಯದ್ದನ್ನು ಅನುಮಾನಿಸಿದ ನರೇಂದ್ರ ಅವರು ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಪತ್ನಿ ನೇಣು ಬಿಗಿದುಕೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವುದನ್ನು ಕಂಡಿದ್ದಾರೆ. ಇನ್ನೊಂದೆಡೆ ಮಗುವನ್ನು ನೀರು ತುಂಬಿದ ಟಬ್​ನಲ್ಲಿ ಮುಳುಗಿಸಿ ಹತ್ಯೆ ಮಾಡಲಾಗಿದೆ.

ಜ್ಞಾಹೀನ ಸ್ಥಿತಿಯಲ್ಲಿದ್ದ ತನ್ನ ಪತ್ನಿಯನ್ನು ನರೇಂದ್ರ ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಇದರಲ್ಲಿ “ಬಂದಿರುವ ಕಷ್ಟಗಳನ್ನು ನಿಭಾಯಿಸುವ ಶಕ್ತಿ ಇಲ್ಲ, ತನ್ನ ಸಾವಿನ ನಂತರ ಮಗು ನೋಡಿಕೊಳ್ಳಲು ಯಾರೂ ಇಲ್ಲ, ನನ್ನ ಸಾವಿಗೆ ನಾನೇ ಕಾರಣ” ಎಂದು ಬರೆಯಲಾಗಿದೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821 ಅಥವಾ https://icallhelpline.org/ ವೆಬ್​ಸೈಟ್​ಗೆ ಭೇಟಿ ಕೊಡಿ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:16 am, Tue, 23 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?