AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ಅಪರಾಧ ಚಟುವಟಿಕೆ ನಿಯಂತ್ರಣಕ್ಕೆ ಪೊಲೀಸರ ಹೊಸ ‘ನೈಟ್’ ಪ್ಲ್ಯಾನ್

ಬೆಂಗಳೂರು ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚುತ್ತಿದ್ದು, ಹೊರ ಜಿಲ್ಲೆಗಳ ಅಪರಾಧಿಗಳಿಂದ ಕೃತ್ಯ ಹೆಚ್ಚಾಗಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ರಾತ್ರಿ ವೇಳೆ ಬೆಂಗಳೂರು ಪ್ರವೇಶಿಸುವ ವಾಹನಗಳ ತಪಾಸಣೆ ನಡೆಸಲು ಪೊಲೀಸ್ ಇಲಾಖೆ ಮುಂದಾಗಿದೆ.

Bangalore: ಅಪರಾಧ ಚಟುವಟಿಕೆ ನಿಯಂತ್ರಣಕ್ಕೆ ಪೊಲೀಸರ ಹೊಸ 'ನೈಟ್' ಪ್ಲ್ಯಾನ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 10, 2022 | 7:19 AM

Share

ಬೆಂಗಳೂರು: ಹೊರ ಜಿಲ್ಲೆಗಳಿಂದ ನಗರಗಳಿಂದ ಬಂದು ಅಪರಾಧ ಎಸಗುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅಪರಾಧ ಚಟುವಟಿಕೆ ನಿಯಂತ್ರಿಸಲು ನಗರ ಪೊಲೀಸರು ಹೊಸ ಯೋಜನೆಯೊಂದನ್ನು ಹಾಕಿದ್ದಾರೆ. ಹೊರ ಜಿಲ್ಲೆಗಳಿಂದ ಅಪರಾಧ ಕೃತ್ಯ ಎಸಗಲು ಬರುತ್ತಿರುವವರನ್ನು ಮಟ್ಟಹಾಕಲು ಸಜ್ಜಾಗಿರುವ ಪೊಲೀಸರು, ರಾತ್ರಿ ವೇಳೆ ನಗರದ ಹೊರವಲಯದಲ್ಲಿ ಕಣ್ಗಾವಲಿನಲ್ಲಿ ಇರಲಿದ್ದು, ನಗರ ಪ್ರವೇಶಿಸುವ ಪ್ರತಿಯೊಂದು ವಾಹನಗಳನ್ನು ತಪಾಸಣೆ ನಡೆಸಲಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸೂಚನೆ ಮೇರೆಗೆ ಪ್ರತಿದಿನ ರಾತ್ರಿ 11ರಿಂದ ಬೆಳಗ್ಗೆ 5ಗಂಟೆಯವರೆಗೂ ತಪಾಸಣೆ ನಡೆಸಲಿದ್ದು, ಓರ್ವ ಇನ್ಸ್​​ಪೆಕ್ಟರ್​ ನೇತೃತ್ವದಲ್ಲಿ ತಪಾಸಣೆ ನಡೆಯಲಿದೆ.

ಠಾಣೆ ಮುಂದೆ ಕುಡುಕನ ರಂಪಾಟ

ನಗರದ ಉಪ್ಪಾರಪೇಟೆ ಪೊಲೀಸ್ ಠಾಣೆ ಮುಂದೆ ಪಾನಮತ್ತನಾಗಿದ್ದ ಯುವಕನೊಬ್ಬ ರಂಪಾಟ ನಡೆಸಿದ ಪ್ರಸಂಗವೊಂದು ನಡೆದಿದೆ. ಕುಡಿದ ಅಮಲಿನಲ್ಲಿ ಬಂದು ತನ್ನ ಕಂಪ್ಲೈಂಟ್ ತೆಗೆದುಕೊಳ್ಳುವಂತೆ ಪೊಲೀಸರೊಂದಿಗೆ ಕಿರಿಕ್ ಮಾಡಿಕೊಂಡಿದ್ದು, ನನ್ನ ಸಹೋದರ ಕಳೆದು ಹೋಗಿದ್ದಾನೆ ಹುಡುಕಿಕೊಡಿ ಎಂದು ಒತ್ತಾಯಿಸಿದ್ದಾನೆ. ಯುವಕ ಪಾನಪತ್ತನಾಗಿರುವುದರಿಂದ ಪೊಲೀಸರು ಬೆಳಿಗ್ಗೆ ಬಂದು ಸೂಕ್ತ ಮಾಹಿತಿ ಕೊಡುವಂತೆ ಹೇಳಿದ್ದಾರೆ. ಆದರೂ ಕೇಳದ ಕುಡುಕ ಜೇಬಿನಲ್ಲಿ ಇದ್ದ ದುಡ್ಡು ಎಸೆದು ಸ್ಟೇಷನ್ ಮುಂದೆ ರಂಪಾಟ ನಡೆಸಿದ್ದಾನೆ. ಇದರಿಂದ ಬೇಸತ್ತ ಪೊಲೀಸರು ತಾವೇ ಹೊಯ್ಸಳ ವಾಹನದಲ್ಲಿ ಕರೆದೊಯ್ದು ಮನೆಗೆ ಬಿಟ್ಟುಬಂದಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 am, Sat, 10 September 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ