AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ

ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ನಗರದ ಹಲವು ಪಬ್ ಹಾಗೂ ರೆಸ್ಟೋರೆಂಟ್​ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ
ಪಬ್​​, ರೆಸ್ಟೋರೆಂಟ್​ಗಳ ಮೇಲೆ ಬೆಂಗಳೂರು ಪೊಲೀಸರ ದಾಳಿ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Oct 02, 2022 | 6:42 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಮ ಮೀರಿ ಅತಿಯಾದ ಡಿಜೆ ಶಬ್ಧ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪ ಸಂಬಂಧ ಹಲವು ಪಬ್ ಹಾಗೂ ರೆಸ್ಟೋರೆಂಟ್ (Pub And Restaurants) ​ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಕಂಡುಬಂದಿರುವುದು ತಿಳಿದುಬಂದ ಹಿನ್ನೆಲೆ ಅಂತಹ ಪಬ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಗರದಲ್ಲಿ ಮೋಜು ಮಸ್ತಿ ಇದ್ದಿದ್ದೆ. ಆದರೆ ನಿಯಮ ಮೀರಿ ಯಾರೇ ಮೋಜು ಮಸ್ತಿ ಮಾಡಿದರೂ ಅದು ಅಪರಾಧವಾಗಿದೆ. ಹೀಗಾಗಿ ಇಂತಹ ಪಬ್ ಮತ್ತು ರೆಸ್ಟೋರೆಂಟ್​ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಪಬ್​​ಗಳಲ್ಲಿ ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ಪಬ್​​ಗೆ ಪ್ರವೇಶ, ಮದ್ಯ ಸೇವನೆ ಆರೋಪ ಹಿನ್ನೆಲೆ ಬೋ ಟೈ, ಇಕಿಗೈ, ಸ್ಕೈ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಅದರಂತೆ ನಿಯಮ ಉಲ್ಲಂಘಿಸಿರುವ ಪಬ್​ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್​​ ಠಾಣೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 am, Sun, 2 October 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ