AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ

ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ನಗರದ ಹಲವು ಪಬ್ ಹಾಗೂ ರೆಸ್ಟೋರೆಂಟ್​ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Bangalore: ನಗರದ ಪಬ್​​, ರೆಸ್ಟೋರೆಂಟ್​ಗಳ ಮೇಲೆ ಪೊಲೀಸರ ದಾಳಿ
ಪಬ್​​, ರೆಸ್ಟೋರೆಂಟ್​ಗಳ ಮೇಲೆ ಬೆಂಗಳೂರು ಪೊಲೀಸರ ದಾಳಿ (ಸಾಂದರ್ಭಿಕ ಚಿತ್ರ)
TV9 Web
| Edited By: Rakesh Nayak Manchi|

Updated on:Oct 02, 2022 | 6:42 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿಯಮ ಮೀರಿ ಅತಿಯಾದ ಡಿಜೆ ಶಬ್ಧ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಆರೋಪ ಸಂಬಂಧ ಹಲವು ಪಬ್ ಹಾಗೂ ರೆಸ್ಟೋರೆಂಟ್ (Pub And Restaurants) ​ಗಳ ಮೇಲೆ ಕೇಂದ್ರ ವಿಭಾಗದ ಪೊಲೀಸರು ದಾಳಿ (Police Raid) ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಿಯಮ ಉಲ್ಲಂಘನೆ ಕಂಡುಬಂದಿರುವುದು ತಿಳಿದುಬಂದ ಹಿನ್ನೆಲೆ ಅಂತಹ ಪಬ್​ಗಳ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನಗರದಲ್ಲಿ ಮೋಜು ಮಸ್ತಿ ಇದ್ದಿದ್ದೆ. ಆದರೆ ನಿಯಮ ಮೀರಿ ಯಾರೇ ಮೋಜು ಮಸ್ತಿ ಮಾಡಿದರೂ ಅದು ಅಪರಾಧವಾಗಿದೆ. ಹೀಗಾಗಿ ಇಂತಹ ಪಬ್ ಮತ್ತು ರೆಸ್ಟೋರೆಂಟ್​ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಪಬ್​​ಗಳಲ್ಲಿ ಅತಿಯಾದ ಡಿಜೆ ಸೌಂಡ್​​​​ ಹಾಕಿ ಮೋಜು ಮಸ್ತಿ ಮಾಡುತ್ತಿದ್ದ ಹಾಗೂ ಅಪ್ರಾಪ್ತರಿಗೆ ಪಬ್​​ಗೆ ಪ್ರವೇಶ, ಮದ್ಯ ಸೇವನೆ ಆರೋಪ ಹಿನ್ನೆಲೆ ಬೋ ಟೈ, ಇಕಿಗೈ, ಸ್ಕೈ ಬಾರ್​ಗಳ ಮೇಲೆ ಪೊಲೀಸರಿಂದ ದಾಳಿ ನಡೆಸಿದ್ದಾರೆ.

ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಕಾರ್ಯಾಚರಣೆ ವೇಳೆ ನಿಯಮ ಉಲ್ಲಂಘನೆ ಮಾಡಿರುವುದು ಬಹಿರಂಗವಾಗಿದೆ. ಅದರಂತೆ ನಿಯಮ ಉಲ್ಲಂಘಿಸಿರುವ ಪಬ್​ಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್​​ ಠಾಣೆಯಲ್ಲಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 am, Sun, 2 October 22

Follow Us
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್