AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rains: ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ: ಬೆಂಗಳೂರಿಗೂ ಮಳೆ ಎಚ್ಚರಿಕೆ

ಬೆಂಗಳೂರು ಹವಾಮಾನ ವರದಿ: ಭಾರತೀಯ ಹವಾಮಾನ ಇಲಾಖೆ ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ ನೀಡಿದೆ. ಜೊತೆಗೆ ಬೆಂಗಳೂರಿಗೂ ಮಳೆ ಎಚ್ಚರಿಕೆ ನೀಡಲಾಗಿದೆ. ಇನ್ನು ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ.

Bangalore Rains: ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ: ಬೆಂಗಳೂರಿಗೂ ಮಳೆ ಎಚ್ಚರಿಕೆ
ಕರ್ನಾಟಕದಲ್ಲಿ ಮುಂದಿನ 5 ದಿನ ಮಳೆ ಮುನ್ಸೂಚನೆ: ಬೆಂಗಳೂರಿಗೂ ಮಳೆ ಎಚ್ಚರಿಕೆ
ಗಂಗಾಧರ​ ಬ. ಸಾಬೋಜಿ
|

Updated on:Sep 25, 2024 | 5:36 PM

Share

ಬೆಂಗಳೂರು, ಸೆಪ್ಟೆಂಬರ್ 25: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಬೆಂಗಳೂರಿನಲ್ಲಿ ಇಂದು ಸಾಧಾರಣ ಮಳೆಯಾಗಿದೆ (Rain). ಇಂದು ಬೆಳಿಗ್ಗೆಯಿಂದಲೇ ಹಲವೆಡೆ ಮೋಡ ಕವಿದ ವಾತಾವರಣ ಇತ್ತು. ಹೀಗಾಗಿ ಸಂಜೆ ವೇಳೆಗೆ ರಿಚ್ಮಂಡ್​ ಟೌನ್, ಶಾಂತಿನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆ ಆಗಿದ್ದು, ಸಿಲಿಕಾನ್​ ಸಿಟಿಯಲ್ಲಿ ಕೂಲ್ ಕೂಲ್​ ವಾತಾವರಣ ನಿರ್ಮಾಣವಾಗಿದೆ.

ಮುಂದಿನ 5 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ಅಲರ್ಟ್ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗೆ ಐಎಂಡಿ ಆರೆಂಜ್ ಅಲರ್ಟ್ ನೀಡಲಾಗಿದೆ. ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಜೋರು ಮಳೆ

ಬೆಂಗಳೂರು ಮಾತ್ರವಲ್ಲದೇ ಕೆಲ ಜಿಲ್ಲೆಗಳಲ್ಲೂ ಮಳೆ ಸುರಿದಿದೆ. ದಾವಣಗೆರೆಯಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ‌ಮಳೆ ಆಗಿದೆ. ಬಹುದಿನಗಳ‌ ಬಳಿಕ ಸುರಿದ ಮಳೆಗೆ ಬೆಣ್ಣೆ ನಗರಿ ದಾವಣಗೆರೆ ಜನರು ಖುಷ್ ಆಗಿದ್ದಾರೆ. ದಾವಣಗೆರೆ ನಗರದ ಎವಿಕೆ ಕಾಲೇಜ್ ರಸ್ತೆ, ಹಳೇ ಪಿಬಿ ರಸ್ತೆ ಸೇರಿದಂತೆ ಹಲವೆಡೆ ಜೋರು ಮಳೆ ಆಗಿದೆ. ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿ ಹರಿದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:23 pm, Wed, 25 September 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ