AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain: ಹಲವು ಪ್ರದೇಶಗಳು ಜಲಾವೃತ; ಸಿಎಂ ಭೇಟಿ ಕೊಟ್ಟು ಎರಡು ತಿಂಗಳಾದರೂ ಬಗೆಹರಿಯದ ಮಳೆ ನೀರಿನ ಸಮಸ್ಯೆ

Bangalore News: ಬೆಂಗಳೂರು ನಗರದಲ್ಲಿ ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳು ಜಲಾವೃಗೊಂಡಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಅಲ್ಲದೆ ರಸ್ತೆಯಲ್ಲಿ ನೀರು ತುಂಬಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

Bangalore Rain: ಹಲವು ಪ್ರದೇಶಗಳು ಜಲಾವೃತ; ಸಿಎಂ ಭೇಟಿ ಕೊಟ್ಟು ಎರಡು ತಿಂಗಳಾದರೂ ಬಗೆಹರಿಯದ ಮಳೆ ನೀರಿನ ಸಮಸ್ಯೆ
ಬೆಂಗಳೂರಿನಲ್ಲಿ ಮಳೆ ಅವಾಂತರ
TV9 Web
| Updated By: Rakesh Nayak Manchi|

Updated on:Aug 02, 2022 | 9:20 AM

Share

ಬೆಂಗಳೂರು: ನಗರದ ಹಲವೆಡೆ ಸೋಮವಾರ ರಾತ್ರಿ ಭಾರೀ ಮಳೆಯಾದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ಪೈಕಿ ಎರಡು ತಿಂಗಳ ಹಿಂದೆಯಷ್ಟೆ ಸಂಪೂರ್ಣ ಜಲಾವೃತವಾಗಿದ್ದ ಸಾಯಿ ಲೇಔಟ್ ಕೂಡ ಒಂದು. ಇಲ್ಲಿನ ಜನರ ಬೇಸರದ ಸಂಗತಿ ಏನೆಂದರೆ, ಈ ಪ್ರದೇಶಕ್ಕೆ ಅಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಕೊಟ್ಟು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು. ಆದರೆ ಸಮಸ್ಯೆಯನ್ನು ನಿರ್ಲಕ್ಷಿಸಿ, ನೀಡಿದ ಭರವಸೆಯನ್ನು ಭರವಸೆಯಾಗಿಯೇ ಉಳಿಸಿದ ಪರಿಣಾಮ ನಿನ್ನೆ ಮತ್ತೆ ಸಾಯಿ ಲೇಔಟ್ ಜಲಾವೃತಗೊಂಡಿದೆ.

ಸೋಮವಾರ ಸುರಿದ ಭಾರೀ ಮಳೆಗೆ ಸಾಯಿ ಲೇಔಟ್ ಜಲಾವೃತಗೊಂಡಿದೆ. ರಾತ್ರಿ ಇಡೀ ಸುರಿದ ಮಳೆಯ ಪರಿಣಾಮ ಸಾಯಿ ಲೇಔಟ್ ಮಳೆ ನೀರಿನಿಂದ ಆವೃತವಾಗಿದೆ. ಅಲ್ಲದೆ ನಿರಂತರ ಮಳೆಯಾಗುತ್ತಿರುವುದರಿಂದ ಮನೆಯೊಳಗೆ ಪದೇಪದೇ ನೀರು ನುಗ್ಗುತ್ತಿದ್ದು, ಬೇಸತ್ತ ಹಲವರು ತಮ್ಮ ಮನೆಯನ್ನು ಖಾಲಿ ಮಾಡಿ ಹೋಗಿದ್ದಾರೆ. ಸಾಯಿ ಬಡಾವಣೆಯ ಎರಡನೇ ಕ್ರಾಸ್​ನ ಬಹುತೇಕ ನೆಲಮಹಡಿ ಮನೆಗಳು ಖಾಲಿಯಾಗಿವೆ.

ಬಿಬಿಎಂಪಿ ವಿರುದ್ಧ ಸಾಯಿ ಲೇಔಟ್ ನಿವಾಸಿಗಳ ಆಕ್ರೋಶ

ಹೊರಮಾವಿನ ಸಾಯಿ ಲೇಔಟ್​ ಮತ್ತೆ ಜಲಾವೃತಗೊಂಡ ಹಿನ್ನೆಲೆ ಸಮಸ್ಯೆ ಬಗೆಹರಿಸುವಲ್ಲಿ ನಿರ್ಲಕ್ಷ್ಯ ತೋರದ ಸರ್ಕಾರ ಮತ್ತು ಬಿಬಿಎಂಪಿ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ರಾತ್ರಿ ಇಡೀ ಮಳೆಯಾದ ಪರಿಣಾಮ ಮಂಡಿಯುದ್ದ ನೀರು ನಿಂತು ವಾಹನಗಳ ಓಡಾಟಕ್ಕೆ ಅಡಚಣೆ ಉಂಟಾಗಿದೆ. ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಪರಿಣಾಮ ರಸ್ತೆಗಳೆಲ್ಲಾ ಕರೆಯಂತಾಗಿದೆ. ಈ ಸಮಸ್ಯೆ ಬಗೆಹರಿಸದ ಬಿಬಿಎಂಪಿ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದೆ.

ಮಳೆಗೆ ರಸ್ತೆಗುಂಡಿ ಕಾಣದೇ ಬೈಕ್​​ ಮೇಲಿಂದ ಬಿದ್ದ ಸವಾರ

ಮಳೆಗೆ ರಸ್ತೆಗುಂಡಿ ಕಾಣದೇ ಬೈಕ್​​ ಮೇಲಿಂದ ಬಿದ್ದ ಸವಾರ ಘಟನೆ ಎಂಎಸ್ ಪಾಳ್ಯ ಜಂಕ್ಷನ್ ಬಳಿ ನಡೆದಿದ್ದು, ಬೈಕ್​​​ ಸವಾರನ ತಲೆಗೆ ಗಂಭೀರ ಗಾಯವಾಗಿದೆ. ಕೆಲಸ ಮುಗಿಸಿಕೊಂಡು ಮಳೆಯ ನಡುವೆ ಬೈಕ್ ಮೂಲಕ ಮನೆಗೆ ವಾಪಸ್ಸಾಗುತ್ತಿದ್ದ ಯುವಕ ಯಲಹಂಕ ಸಂಚಾರಿ ಠಾಣಾ ವ್ಯಾಪ್ತಿಯ ಎಂಎಸ್ ಪಾಳ್ಯ ಜಂಕ್ಷನ್ ಬಳಿ ಮಳೆನೀರಿನಿಂದ ತುಂಬಿದ್ದ ರಸ್ತೆ ಗುಂಡಿಗೆ ಬಿದಿದ್ದಾನೆ. ಕಾಮಗಾರಿಗೆಂದು ಅಗೆದು ಸರಿಯಾಗಿ ಮುಚ್ಚದೆ ಹಾಗೆಯೇ ಬಿಟ್ಟಿರುವುದರಿಂದ ಈ ಅವಘಡ ಸಂಭವಿಸಿದ್ದು, ಗಾಯಾಳು ಸವಾರನನ್ನ ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಳೆಯಿಂದ ಮುರಿದುಬಿದ್ದ ಮರದ ರೆಂಬೆ

ನಗರದಲ್ಲಿ ಸುರಿದ ಭಾರೀ ಮಳೆಯಿಂದ ಮರದ ರೆಂಬೆ ಮುರಿದುಬಿದ್ದ ಘಟನೆ ಮೇಖ್ರಿ ಸರ್ಕಲ್​ನ ಸ್ಕೈವಾಕ್​ ಬಳಿ ನಡೆದಿದೆ. ರಸ್ತೆ ಮೇಲೆ ರೆಂಬೆ ಬಿದ್ದಿರುವ ಪರಿಣಾಮ ಕೆಲ ಕಾಲ ವಾಹನ ಸಂಚಾರಕ್ಕೆ ಅಡಚಣೆಯಾಯ್ತು. ಸ್ಥಳಕ್ಕೆ ಆಗಮನಿಸಿದ ಬಿಬಿಎಂಪಿ ಸಿಬ್ಬಂದಿಯಿಂದ ರೆಂಬೆ ತೆರವು ಕಾರ್ಯಾಚರಣೆ ನಡೆಸಲಾಯಿತು.

Published On - 9:20 am, Tue, 2 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ