Bangalore Rain: ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲಿದೆ ಎನ್​ಜಿಒ ತಂಡ; ಸಹಾಯವಾಣಿ ನಂಬರ್ ಇಲ್ಲಿದೆ

ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ತೊಂದರೆಗೆ ಸಿಲುಕಿದ ಕೂಡಲೇ ಮಾಹಿತಿ ರವಾನಿಸಿದರೆ ಎನ್​ಜಿಒ ತಂಡ ನಿಮ್ಮ ಸಹಾಯಕ್ಕೆ ದಾವಿಸಲಿದೆ.

Bangalore Rain: ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲಿದೆ ಎನ್​ಜಿಒ ತಂಡ; ಸಹಾಯವಾಣಿ ನಂಬರ್ ಇಲ್ಲಿದೆ
ಮಳೆಯಿಂದಾಗಿ ತೊಂದರೆ ಸಿಲುಕಿದರೆ ನಿಮ್ಮ ನೆರವಿಗೆ ದಾವಿಸಲು ಎನ್​ಜಿಒ ತಂಡ ಹೆಲ್ಪ್​ಲೈನ್ ನಂಬರ್ ಆರಂಭಿಸಿದೆ.
Follow us
| Updated By: Rakesh Nayak Manchi

Updated on:Sep 06, 2022 | 12:06 PM

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಅನೇಕ ಪ್ರದೇಶಗಳು ಜಲಪ್ರವಾಹಕ್ಕೆ ಒಳಗಾಗಿವೆ. ಮಳೆಯ ಆರ್ಭಟಕ್ಕೆ ನಲುಗಿ ಹೋಗಿರುವ ನಗರದ ಜನರು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗಲು ಪರದಾಡುವಂತಾಗಿದೆ. ಇನ್ನೊಂದೆಡೆ ಮಳೆ ನೀರು ಮನೆಯೊಳಗೆ ನುಗ್ಗುತ್ತಿರುವ ಹಿನ್ನೆಲೆ ಮನೆಯಲ್ಲೂ ಕೂರಲು ಆಗದ ಪರಿಸ್ಥಿತಿಯೂ ಇದೆ. ಜನರ ಕಷ್ಟವನ್ನು ಅರಿತಿರುವ ಎನ್​ಜಿಒ ತಂಡವೊಂದು ಜನರ ನೆರವಿಗೆ ದಾವಿಸಲು ಮುಂದಾಗಿದೆ. ಇದಕ್ಕಾಗಿ ಸಹಾಯವಾಣಿಯನ್ನೂ ತೆರೆದಿದೆ.

ನಗರದಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ಅಥವಾ ಯಾರಾದರೂ ಮಳೆಯಲ್ಲಿ ಸಿಲುಕಿಕೊಂಡಿದ್ದರೆ, ಏನಾದರೂ ಸಹಾಯ ಬೇಕಾಗಿದ್ದಲ್ಲಿ, ಆಹಾರ ವಿತರಣೆ, ಔಷಧಿ ಸರಬರಾಜು, ಬಟ್ಟೆ ವ್ಯವಸ್ಥೆ ಕಲ್ಪಿಸಲು, ಮಳೆ ನೀರಲ್ಲಿ ಸಿಲುಕಿದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಗೊಳಿಸಲು ಎನ್​ಜಿಒ ಸಜ್ಜಾಗಿದೆ. ನೀವು ತೊಂದರೆಗೆ ಸಿಲುಕಿದ್ದರೆ ಕೂಡಲೇ 9611589595 ಸಂಖ್ಯೆಗೆ ವಾಟ್ಸ್​ಆ್ಯಪ್​ ಸಂದೇಶ ರವಾನಿಸಿ.

ಅದಮ್ಯಚೇತನ ಸಂಸ್ಥೆಯಿಂದ ನೆರವಿನ ಹಸ್ತ

ನಗರದ ಮಾರತ್ತಹಳ್ಳಿ, ವರ್ತೂರು, ಬೆಳ್ಳಂದೂರು ವ್ಯಾಪ್ತಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಅದಮ್ಯಚೇತನ ಸಂಸ್ಥೆಯು ನೆರವಿಗೆ ನಿಲ್ಲಲಿದ್ದು, ಬಿಬಿಎಂಪಿ ಕೋರಿಕೆ ಮೇರೆಗೆ 300 ಸಂತ್ರಸ್ತರಿಗೆ ಊಟದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಾಳೆ 500 ಜನರಿಗೆ ಊಟ ಕಳಿಸಲು ವ್ಯವಸ್ಥೆ ಮಾಡಲಾಗಿದ್ದು, ಸಂತ್ರಸ್ತರಿಗೆ ಊಟದ ವ್ಯವಸ್ಥೆ ಬೇಕಾದರೆ ಬಿಬಿಎಂಪಿ ಮುಖಾಂತರ ಅಥವಾ ಸ್ಥಳೀಯ ಕಾರ್ಯಕರ್ತರ ಮುಖಾಂತರ ಅದಮ್ಯ ಚೇತನದ 8904623967 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದು.

ಮತ್ತಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:59 am, Tue, 6 September 22

ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಚದುರಂಗದ ಚತುರರನ್ನ ಭೇಟಿಯಾದ ಪ್ರಧಾನಿ ಮೋದಿ; ವಿಡಿಯೋ ನೋಡಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಕಾಶ್ಮೀರಿ ಪಂಡಿತರಿಗೆ ಬಾಯ್ತಪ್ಪಿ ಪಿಓಕೆ ನಿರಾಶ್ರಿತರು ಎಂದ ರಾಹುಲ್ ಗಾಂಧಿ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹೊಸ ಕೇಸ್ ಬಗ್ಗೆ ದರ್ಶನ್ ಜತೆ ಲಾಯರ್ ಚರ್ಚೆ; ಮತ್ತೆ ಶುರುವಾಗಲಿದೆ ವಿಚಾರಣೆ
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
ಹಾಸನಾಂಬೆ ದರ್ಶನಕ್ಕೆ ಹೊಸ ವ್ಯವಸ್ಥೆ ಮಾಡಿದ ಆಡಳಿತ ಮಂಡಳಿ; ಏನದು?
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
72 ದಿನಗಳ ಬಳಿಕ ನದಿಯಲ್ಲಿ ಅರ್ಜುನ ಪತ್ತೆ: ಗುಡ್ಡ ಕುಸಿತದ ಭೀಕರತೆ ನೋಡಿ..
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಯುವ ದಸರಾನಲ್ಲಿ ಪ್ರೇಕ್ಷಕರಿಂದ ಪ್ರಮಾಣ ಮಾಡಿಸಿಕೊಂಡ ನಟ ಶ್ರೀಮುರಳಿ
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ಹಾಸನಾಂಬೆ ಭಕ್ತರಿಗೆ ಇಸ್ಕಾನ್ ಲಡ್ಡು; ಡಿಸಿ ಸಿ. ಸತ್ಯಭಾಮ ಹೇಳಿದ್ದಿಷ್ಟು
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
ತನಿಖೆಗೆ ಆದೇಶಿಸಿದ್ದರೂ ಸಿಎಂ ವಿರುದ್ಧ ಮತ್ತೊಂದು ಹೋರಾಟಕ್ಕೆ ಸಜ್ಜು!
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ
IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ