AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain Updates: ಬೆಂಗಳೂರಲ್ಲಿ ಮಳೆ ಆರಂಭ, 2 ದಿನ ಮುಂದುವರಿಯಲಿದೆ ಇದೇ ವಾತಾವರಣ

Bengaluru Weather: ಇದೇ ವಾತಾವರಣ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ, ಫೆಬ್ರವರಿ 21 ಹಾಗೂ ಫೆಬ್ರವರಿ 22ರಂದು ಬೆಂಗಳೂರು ಹಾಗೂ ಕರ್ನಾಟಕ ಭಾಗದಲ್ಲಿ ಮಳೆ ಆಗಲಿದೆ.

Bangalore Rain Updates: ಬೆಂಗಳೂರಲ್ಲಿ ಮಳೆ ಆರಂಭ, 2 ದಿನ ಮುಂದುವರಿಯಲಿದೆ ಇದೇ ವಾತಾವರಣ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
ರಾಜೇಶ್ ದುಗ್ಗುಮನೆ
| Edited By: |

Updated on:Feb 20, 2021 | 5:41 PM

Share

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಆಗಿದೆ. ಶುಕ್ರವಾರ ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗದಲ್ಲಿ ಮಳೆ ಸುರಿದಿತ್ತು. ಹಾಸನ ಭಾಗದಲ್ಲಂತೂ ಆಲಿಕಲ್ಲಿನ ಮಳೆಗೆ ರೈತರು ತತ್ತರಿಸಿ ಹೋಗಿದ್ದರು. ಇಂದು ಕೂಡ ರಾಜ್ಯದ ಅನೇಕ ಭಾಗದಲ್ಲಿ ಮಳೆ ಆಗಿದೆ. ಬೆಂಗಳೂರಿನಲ್ಲೂ ಸಂಜೆ ವೇಳೆಗೆ ಮಳೆ ಆರಂಭವಾಗಿದೆ. 

ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಸೂರ್ಯ ಮೋಡದ ಜತೆ ಕಣ್ಣಾಮುಚ್ಚಾಲೆ ಆಡುತ್ತಿದ್ದರಿಂದ ನಗರದಲ್ಲಿ ಬಿಸಿಲು ಭೂಮಿಗೆ ತಾಗಿದ್ದು ತುಂಬಾನೇ ಕಡಿಮೆ. 5 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಮಳೆ ಆಗಿದೆ. ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿನ ಕೆಲ ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 7 ಗಂಟೆ ಹೊತ್ತಿಗೆ ಬಹುತೇಕರು ಕಚೇರಿಯಿಂದ ತೆರಳುತ್ತಿರುತ್ತಾರೆ. ಆ ಹೊತ್ತಿಗೆ ಮಳೆ ಆದರೆ, ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್​​ ಜಾಮ್​ ಆಗುವುದರಲ್ಲಿ ಅನುಮಾನ ಇಲ್ಲ.

ಅಂದಹಾಗೆ, ಇದೇ ವಾತಾವರಣ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ, ಫೆಬ್ರವರಿ 21 ಹಾಗೂ ಫೆಬ್ರವರಿ 22ರಂದು ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.

ಇನ್ನು, ಈ ಅವಧಿಯಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ಕೊರೊನಾ ವೈರಸ್​ ನಿಧಾನವಾಗಿ ಕಡಿಮೆ ಆಗುತ್ತಿದ್ದರೂ ಬೆಂಗಳೂರಲ್ಲಿ ನಿತ್ಯ 200-300 ಕೇಸ್​ಗಳು ದೃಢವಾಗುತ್ತಿವೆ. ಮಳೆಯಲ್ಲಿ ನೆನೆದು ಒದ್ದೆ ಆಗಿ ಜ್ವರ ಬಂದರೆ ಆತಂಕಕ್ಕೆ ಈಡಾಗುವ ಪರಿಸ್ಥಿತಿ ಬಂದೊದಗುತ್ತದೆ.

ಇದನ್ನೂ ಓದಿ: Weather Updates: ಇನ್ನೆರಡು ದಿನ ಕರ್ನಾಟಕದ ವಿವಿಧೆಡೆ ಮಳೆಯ ಸಾಧ್ಯತೆ: ಉತ್ತರಾಖಂಡದಲ್ಲಿ ಹಿಮಪಾತದ ಎಚ್ಚರಿಕೆ

Published On - 5:41 pm, Sat, 20 February 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ