AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Rain Updates: ಬೆಂಗಳೂರಲ್ಲಿ ಮಳೆ ಆರಂಭ, 2 ದಿನ ಮುಂದುವರಿಯಲಿದೆ ಇದೇ ವಾತಾವರಣ

Bengaluru Weather: ಇದೇ ವಾತಾವರಣ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ, ಫೆಬ್ರವರಿ 21 ಹಾಗೂ ಫೆಬ್ರವರಿ 22ರಂದು ಬೆಂಗಳೂರು ಹಾಗೂ ಕರ್ನಾಟಕ ಭಾಗದಲ್ಲಿ ಮಳೆ ಆಗಲಿದೆ.

Bangalore Rain Updates: ಬೆಂಗಳೂರಲ್ಲಿ ಮಳೆ ಆರಂಭ, 2 ದಿನ ಮುಂದುವರಿಯಲಿದೆ ಇದೇ ವಾತಾವರಣ
ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ
ರಾಜೇಶ್ ದುಗ್ಗುಮನೆ
| Edited By: |

Updated on:Feb 20, 2021 | 5:41 PM

Share

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಮೇಲೂ ಆಗಿದೆ. ಶುಕ್ರವಾರ ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗದಲ್ಲಿ ಮಳೆ ಸುರಿದಿತ್ತು. ಹಾಸನ ಭಾಗದಲ್ಲಂತೂ ಆಲಿಕಲ್ಲಿನ ಮಳೆಗೆ ರೈತರು ತತ್ತರಿಸಿ ಹೋಗಿದ್ದರು. ಇಂದು ಕೂಡ ರಾಜ್ಯದ ಅನೇಕ ಭಾಗದಲ್ಲಿ ಮಳೆ ಆಗಿದೆ. ಬೆಂಗಳೂರಿನಲ್ಲೂ ಸಂಜೆ ವೇಳೆಗೆ ಮಳೆ ಆರಂಭವಾಗಿದೆ. 

ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇದೆ. ಸೂರ್ಯ ಮೋಡದ ಜತೆ ಕಣ್ಣಾಮುಚ್ಚಾಲೆ ಆಡುತ್ತಿದ್ದರಿಂದ ನಗರದಲ್ಲಿ ಬಿಸಿಲು ಭೂಮಿಗೆ ತಾಗಿದ್ದು ತುಂಬಾನೇ ಕಡಿಮೆ. 5 ಗಂಟೆ ಸುಮಾರಿಗೆ ಸಣ್ಣ ಪ್ರಮಾಣದಲ್ಲಿ ಮಳೆ ಆಗಿದೆ. ಸಂಜೆ 7 ಗಂಟೆ ಸುಮಾರಿಗೆ ಬೆಂಗಳೂರಿನ ಕೆಲ ಭಾಗದಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 7 ಗಂಟೆ ಹೊತ್ತಿಗೆ ಬಹುತೇಕರು ಕಚೇರಿಯಿಂದ ತೆರಳುತ್ತಿರುತ್ತಾರೆ. ಆ ಹೊತ್ತಿಗೆ ಮಳೆ ಆದರೆ, ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್​​ ಜಾಮ್​ ಆಗುವುದರಲ್ಲಿ ಅನುಮಾನ ಇಲ್ಲ.

ಅಂದಹಾಗೆ, ಇದೇ ವಾತಾವರಣ ಮುಂದಿನ ಎರಡು ದಿನಗಳ ಕಾಲ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅಂದರೆ, ಫೆಬ್ರವರಿ 21 ಹಾಗೂ ಫೆಬ್ರವರಿ 22ರಂದು ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.

ಇನ್ನು, ಈ ಅವಧಿಯಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ಕೊರೊನಾ ವೈರಸ್​ ನಿಧಾನವಾಗಿ ಕಡಿಮೆ ಆಗುತ್ತಿದ್ದರೂ ಬೆಂಗಳೂರಲ್ಲಿ ನಿತ್ಯ 200-300 ಕೇಸ್​ಗಳು ದೃಢವಾಗುತ್ತಿವೆ. ಮಳೆಯಲ್ಲಿ ನೆನೆದು ಒದ್ದೆ ಆಗಿ ಜ್ವರ ಬಂದರೆ ಆತಂಕಕ್ಕೆ ಈಡಾಗುವ ಪರಿಸ್ಥಿತಿ ಬಂದೊದಗುತ್ತದೆ.

ಇದನ್ನೂ ಓದಿ: Weather Updates: ಇನ್ನೆರಡು ದಿನ ಕರ್ನಾಟಕದ ವಿವಿಧೆಡೆ ಮಳೆಯ ಸಾಧ್ಯತೆ: ಉತ್ತರಾಖಂಡದಲ್ಲಿ ಹಿಮಪಾತದ ಎಚ್ಚರಿಕೆ

Published On - 5:41 pm, Sat, 20 February 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ