AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಬಾಂಬರ್​​ನ ಇಮ್ಯಾಜಿನರಿ ಸ್ಕೆಚ್ ವೈರಲ್​​

Bengaluru Rameshwaram Cafe Bomb Blast: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣದ ಬಾಂಬರ್​ನ ಪೂರ್ತಿ ಮುಖದ ಇಮ್ಯಾಜಿನರಿ ಸ್ಕೆಚ್​ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಶಂಕಿತ ಉಗ್ರ ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ವಿತೌಟ್ ಮಾಸ್ಕ್ ಟೋಪಿ ಕನ್ನಡಕ ಧರಿಸಿದ ರೀತಿ ಭಾವಚಿತ್ರವಿದೆ.

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ: ಬಾಂಬರ್​​ನ ಇಮ್ಯಾಜಿನರಿ ಸ್ಕೆಚ್ ವೈರಲ್​​
ಬಾಂಬರ್​ನ ಮುಖದ ಇಮ್ಯಾಜಿನರಿ ಸ್ಕೆಚ್
TV9 Web
| Edited By: ವಿವೇಕ ಬಿರಾದಾರ|

Updated on: Mar 07, 2024 | 10:38 AM

Share

ಬೆಂಗಳೂರು, ಮಾರ್ಚ್​ 07: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ (Bengaluru Rameshwaram Cafe Bomb Blast) ಪ್ರಕರಣದ ಬಾಂಬರ್‌ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ 10 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಎನ್​ಐಎ ಬಿಡುಗಡೆ ಮಾಡಿರುವ ಭಾವಚಿತ್ರದಲ್ಲಿ ವ್ಯಕ್ತಿಯ ಅರ್ಧ ಮುಖ ಮಾತ್ರ ಕಂಡಿದೆ. ಹೀಗಾಗಿ ಅಧಿಕಾರಿಗಳ ತನಿಖೆಗೆ ಸಹಾಯವಾಗಲೆಂದು ಚಿತ್ರಗಾರರೊಬ್ಬರು ಬಾಂಬರ್​ನ ಪೂರ್ತಿ ಮುಖದ ಇಮ್ಯಾಜಿನರಿ ಸ್ಕೆಚ್ ಬಿಡಸಿದ್ದಾರೆ.

ಎನ್​ಐಎ ಬಿಡುಗಡೆ ಮಾಡಿದ ಸಿಸಿಟಿವಿ ಭಾವಚಿತ್ರವನ್ನು ಆಧಾರವಾಗಿಟ್ಟುಕೊಂಡು ಚಿತ್ರಗಾರ ಹರ್ಷ ಅವರು ಆರೋಪಿ ಪೂರ್ಣ ಮುಖವನ್ನು ಊಹಿಸಿಕೊಂಡು ಚಿತ್ರ ಬಿಡಿಸಿ ಸಾಮಾಜಿಕ ಜಾಲತಾಣ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ. ಶಂಕಿತ ಉಗ್ರ ಮಾಸ್ಕ್ ಧರಿಸಿದ ರೀತಿಯಲ್ಲಿ ಹಾಗೂ ವಿತೌಟ್ ಮಾಸ್ಕ್ ಟೋಪಿ ಕನ್ನಡಕ ಧರಿಸಿದ ರೀತಿ ಚಿತ್ರ ಬಿಡಿಸಿದ್ದಾರೆ. ಈ ಇಮ್ಯಾಜಿನರಿ ಸ್ಕೆಚ್ ತನಿಖೆಗೆ ಸಹಾಯವಾಗಬಹುದೆಂದು ಬೆಂಗಳೂರು ಪೊಲೀಸ್​ ಮತ್ತು ಎನ್​​ಐಎಗೆ ಟ್ಯಾಗ್​ ಮಾಡಿದ್ದಾರೆ.

ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್​ಐಎ

ರಾಮೇಶ್ವರಂ ಕೆಫೆಯ ಬಾಂಬ್ ಸ್ಪೋಟದ ಶಂಕಿತ ವ್ಯಕ್ತಿಯ ಮಾಸ್ಕ್ ಇಲ್ಲದ ಫೋಟೋವನ್ನು ಎನ್ಐಎ ರಿಲೀಸ್ ಮಾಡಿದ್ದು, ಶಂಕಿತ ಬಾಂಬರ್ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದು ಎಂದು ಎನ್ಐಎ ಘೋಷಿಸಿದೆ. ಅಲ್ಲದೆ ಮಾಹಿತಿದಾರರ ಗುರುತನ್ನು ಗೌಪ್ಯವಾಗಿ ಇರಿಸಲಾಗುವುದು ಎಂದು ಎನ್ಐಎ ಹೇಳಿದೆ. ಶಂಕಿತ ಉಗ್ರನ ಸುಳಿವು ಇದ್ರೆ 080-29510900, 8904241100 ಸಂಖ್ಯೆಗೆ ಕರೆ ಮಾಡುವಂತೆ ಎನ್ಐಎ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. Info.blr.nia@gov.in ಗೂ ಮೇಲ್ ಮಾಡಿ ಶಂಕಿತನ ಮಾಹಿತಿಯನ್ನು ಅಧಿಕಾರಿಗಳ ಜೊತೆ ಹಂಚಿಕೊಳ್ಳಬಹುದಾಗಿದೆ.

ಇದನ್ನೂ ಓದಿ: ಬೆಂಗಳೂರು ‘ಸ್ಫೋಟ’ಕ ಸುದ್ದಿ: ಕೆಫೆಯಲ್ಲಿ ಬಾಂಬ್‌ ಇಟ್ಟವನಿಗೆ ಇದ್ಯಾ ಇ-ಮೇಲ್ ನಂಟು?

NIA ಅಧಿಕಾರಿಗಳು ಮಾರ್ಚ್ 05 ರಂದು ಕೆಫೆಗೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿದ್ದರು. ಕ್ಯಾಶ್ ಕೌಂಟರ್, ಸಿಸಿಕ್ಯಾಮರಾ ಪರಿಶೀಲನೆ ನಡೆಸಿ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಪೊಲೀಸರು ಸಹ ಸ್ಥಳದಲ್ಲಿ ಕಲೆ ಹಾಕಿರುವ 38 ಸ್ಯಾಂಪಲ್‌ಗಳ ಮಾಹಿತಿಯನ್ನು NIA ಅಧಿಕಾರಿಗಳಿಗೆ ನೀಡಿದ್ದರು.

ಇನ್ನು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ಎಲ್ಲೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಜೈಲಿನಲ್ಲಿ ಸಹ ಕೈದಿಗಳನ್ನು ಸೆಳೆದು ಉಗ್ರ ಕೃತ್ಯಕ್ಕೆ ಬಳಕೆಯ ಮಾಹಿತಿ ಮೇರೆಗೆ ಎನ್​ಎಐ ಅಧಿಕಾರಿಗಳ ಮತ್ತೊಂದಿಷ್ಟು ತಂಡ ದೇಶಾದ್ಯಂತ ಹಲವೆಡೆ ಭರ್ಜರಿ ಕಾರ್ಯಾಚರಣೆ ನಡೆಸಿದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ