AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕಂಠ ಗಾಯನ: ಆರ್​ಟಿಓ ಕಚೇರಿಯಲ್ಲಿ ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ಯಶಸ್ವಿ

ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅನನ್ಯತೆ ಎಲ್ಲೆಡೆ ಪಸರಿಸಲು ಕೋಟಿ ಕಂಠ ಗಾಯನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ನೆಲಮಂಗಲ ಆರ್​ಟಿಓ ಅಧಿಕಾರಿ ಮಂಜುನಾಥ್ ಹೇಳಿದರು.

ಕೋಟಿ ಕಂಠ ಗಾಯನ: ಆರ್​ಟಿಓ ಕಚೇರಿಯಲ್ಲಿ ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ಯಶಸ್ವಿ
ನೆಲಮಂಗಲ ಆರ್​ಟಿಓ ಕಚೇರಿಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ
TV9 Web
| Edited By: Rakesh Nayak Manchi|

Updated on: Oct 29, 2022 | 12:43 PM

Share

ನೆಲಮಂಗಲ: ಕನ್ನಡ ಮನಸ್ಸುಗಳನ್ನ ಒಗ್ಗೂಡಿಸುವಂತಹ ಒಂದು ಒಳ್ಳೆಯ ಪ್ರಯತ್ನ ಕೋಟಿ ಕಂಠ ಗಾಯನ ಕಾರ್ಯಕ್ರಮವಾಗಿದೆ ಎಂದು ನೆಲಮಂಗಲ ಆರ್​ಟಿಓ ಅಧಿಕಾರಿ ಮಂಜುನಾಥ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರ್​ಟಿಓ ಕಛೇರಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದ ಭಾಷೆ ಮತ್ತು ಸಂಸ್ಕೃತಿಯನ್ನು ವಿಶಾಲಗೊಳಿಸಲು ನನ್ನ ನಾಡು ನನ್ನ ಹಾಡು ಕಾರ್ಯಕ್ರಮ ವಿಶೇಷ ಮಹತ್ವ ಪಡೆದಿದೆ. ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಅನನ್ಯತೆ ಎಲ್ಲೆಡೆ ಪಸರಿಸಲು ಕೋಟಿ ಕಂಠ ಗಾಯನ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.

ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಜಯ ಭಾರತ ಜನನಿಯ ತನುಜಾತೆ, ಹುಯಿಲಗೊಳ ನಾರಾಯಣರಾವ್ ವಿರಚಿತ ಉದಯವಾಗಲಿ ನಮ್ಮ ಚಲುವ ಕನ್ನಡನಾಡು, ಡಾ.ಚನ್ನವೀರ ಕಣವಿ ಅವರ ವಿಶ್ವ ವಿನೂತನ ವಿದ್ಯಾ ಚೇತನ ಸರ್ವ ಹೃದಯ ಸಂಸ್ಕಾರಿ, ಕುವೆಂಪು ಅವರ ಬಾರಿಸು ಕನ್ನಡ ಡಿಂಡಿಮವಾ, ಡಾ.ಡಿ.ಎಸ್.ಕರ್ಕಿಯವರ ಹಚ್ಚೇವು ಕನ್ನಡದ ದೀಪ, ಡಾ. ಹಂಸಲೇಖ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡುಗಳನ್ನು ಹಾಡಲಾಯಿತು.

ಇದೇ ವೇಳೆ ಸಂಕಲ್ಪ ಪ್ರತಿಜ್ಞೆಯೂ ಮಾಡಲಾಯಿತು. ಕನ್ನಡ ನಾಡಿನ ಪ್ರಜೆಯಾದ ನಾನು ನನ್ನ ನಾಡು ನುಡಿಗಳನ್ನು ಪ್ರೀತಿಸುತ್ತೇನೆ ಹಾಗೂ ಗೌರವಿಸುತ್ತೇನೆ. ನಾನು ಕನ್ನಡದಲ್ಲೇ ಮಾತನಾಡುತ್ತೇನೆ. ಕನ್ನಡದಲ್ಲೇ ಬರೆಯುತ್ತೇನೆ, ಕನ್ನಡವನ್ನೆ ಬಳಸುತ್ತೇನೆ ಎಂಬ ಪಣ ತೊಡುತ್ತೇನೆ. ಕನ್ನಡ ನಾಡು ನುಡಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಲು ಕಟಿಬದ್ಧನಾಗಿರುತ್ತೇನೆ. ಕನ್ನಡ ನಾಡಿನಲ್ಲಿರುವ ಕನ್ನಡೇತರ ಬಂಧುಗಳಿಗೆ ಕನ್ನಡ ಕಲಿಸುತ್ತೇನೆ ಎಂದು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ ಭಾಗವಹಿಸಿದವರು ಸಂಕಲ್ಪ ಪ್ರತಿಜ್ಞೆಯನ್ನು ಸ್ವೀಕರಿಸಿದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ