AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Tech Summit 2022: ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Bengaluru Tech Summit 2022: ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜನೆ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ವಿಶ್ವ ಮಟ್ಟದಲ್ಲಿ ಬೆಂಗಳೂರು ಟೆಕ್ ಸಮ್ಮಿಟ್ ಆಯೋಜಿಸಲು ತೀರ್ಮಾನ -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: ಸಾಧು ಶ್ರೀನಾಥ್​|

Updated on: Apr 25, 2022 | 3:45 PM

Share

ಬೆಂಗಳೂರು: ಬೆಂಗಳೂರು ಟೆಕ್ ಸಮಿಟ್ (Bengaluru Tech Summit 2022) 25 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬೆಂಗಳೂರು ಟೆಕ್ ಸಮ್ಮಿಟ್ ಅನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Karnataka CM Basavaraj Bommai) ತಿಳಿಸಿದರು. ಅವರು ಇಂದು ಬೆಂಗಳೂರು ಟೆಕ್ ಸಮಿಟ್ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ನವೆಂಬರ್ ತಿಂಗಳಲ್ಲಿ ಬೆಂಗಳೂರು ಟೆಕ್ ಸಮಿಟ್ ಆಯೋಜಿಸಿರುವ ಪ್ರಯುಕ್ತ ವಿವಿಧ ವಲಯದ ಕೈಗಾರಿಕೋದ್ಯಮಿಗಳೊಂದಿಗೆ ಚರ್ಚೆ ನಡೆಸಲಾಗಿದ್ದು, ಹಲವಾರು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಕೈಗಾರಿಕೆಗಳಿಗೆ ಪೂರಕವಾದ ನೀತಿಗಳು, ಈಕೋಸಿಸ್ಟಂ ಮೂಲಸೌಕರ್ಯ, ತಾಂತ್ರಿಕತೆಗಳ ಬಗ್ಗೆ ಬಹಳಷ್ಟು ಸಲಹೆಗಳನ್ನು ಕೈಗಾರಿಕೋದ್ಯಮಿಗಳು ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು.

ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ಬೆಂಗಳೂರು ಸಮಿಟ್ ತಾಂತ್ರಿಕ ಕ್ಷೇತ್ರಕ್ಕೆ ಹೊಸ ಆಯಾಮ ನೀಡುವಲ್ಲಿ ಇಂದಿನ ಸಭೆ ಫಲಪ್ರದವಾಗಿದೆ. ಮುಂಬರುವ ದಿನಗಳಲ್ಲಿ ವಿವಿಧ ಕೈಗಾರಿಕಾ ವಲಯಗಳಿಗೂ ಸರ್ಕಾರ ಇಂಬು ನೀಡಲಿದೆ. ಬೆಂಗಳೂರನ್ನು ವಿಶ್ವದಲ್ಲಿಯೇ ನಂ.1 ಸಿಲಿಕಾನ್ ಸಿಟಿ ಮಾಡುವ ಚಿಂತನೆ ಸರ್ಕಾರಕ್ಕಿದೆ. ಬೆಂಗಳೂರಿನ ಹೊರವಲಯಗಳಲ್ಲಿಯೂ ಮೂಲಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳುತ್ತಿರುವ ಬಗ್ಗೆ ಸಭೆಯಲ್ಲಿ ಮಾಹಿತಿ ನೀಡಲಾಗಿದೆ ಎಂದರು.

ಕೋವಿಡ್ ನಿಯಂತ್ರಣ ಪೂರ್ವಭಾವಿ ಸಭೆ ಕೋವಿಡ್ ಸಭೆ ಇಂದು ಮಧ್ಯಾಹ್ನ ಏರ್ಪಡಿಸಿದ್ದು, ಕೋವಿಡ್ ಸ್ಥಿತಿಗತಿ ಬದಲಾವಣೆ ಕುರಿತು ಚರ್ಚೆ ನಡೆಯಿತು. ಕೋವಿಡ್ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 27 ರಂದು ಸಭೆ ಕರೆದಿದ್ದಾರೆ. ಅದರ ಪೂರ್ವಭಾವಿಯಾಗಿ ರಾಜ್ಯದ ಕೋವಿಡ್ ಸ್ಥಿತಿಗತಿ, ತಜ್ಞರ ಅಭಿಪ್ರಾಯ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದಿನ ಸಭೆ ನಡೆಯಿತು.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು