AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ವಿವಿ ಇನ್ಮುಂದೆ ಡಾ. ಮನಮೋಹನ್ ಸಿಂಗ್ ವಿವಿ: ಮರುನಾಮಕರಣಕ್ಕೆ ಕರ್ನಾಟಕ ವಿಧಾನಸಭೆ ಅನುಮೋದನೆ

ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ದಿ. ಡಾ ಮನಮೋಹನ್ ಸಿಂಗ್ ಹೆಸರಿಡುವುದಾಗಿ ಬಜೆಟ್​​ನಲ್ಲಿ ಘೋಷಿಸಿದ್ದ ಸಿದ್ದರಾಮಯ್ಯ ಸರ್ಕಾರ ಇದೀಗ ಮರುನಾಮಕರಣ ವಿಚಾರ ಒಳಗೊಂಡ ಮಸೂದೆಗೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿದೆ. ಪ್ರತಿಪಕ್ಷ ಬಿಜೆಪಿ ಮಾತ್ರ, ಅಸ್ತಿತ್ವದಲ್ಲಿರುವ ವಿವಿಗೆ ಮನಮೋಹನ್ ಸಿಂಗ್ ಹೆಸರಿಡುವ ಬದಲು ಅವರ ಹೆಸರಿನಲ್ಲಿ ಹೊಸ ವಿವಿ ಸ್ಥಾಪಿಸಬೇಕು ಎಂದು ಆಗ್ರಹಿಸಿದೆ.

ಬೆಂಗಳೂರು ನಗರ ವಿವಿ ಇನ್ಮುಂದೆ ಡಾ. ಮನಮೋಹನ್ ಸಿಂಗ್ ವಿವಿ: ಮರುನಾಮಕರಣಕ್ಕೆ ಕರ್ನಾಟಕ ವಿಧಾನಸಭೆ ಅನುಮೋದನೆ
ಬೆಂಗಳೂರು ನಗರ ವಿವಿ ಇನ್ಮುಂದೆ ಡಾ. ಮನಮೋಹನ್ ಸಿಂಗ್ ವಿವಿ
ಗಣಪತಿ ಶರ್ಮಾ
|

Updated on: Aug 20, 2025 | 9:07 AM

Share

ಬೆಂಗಳೂರು, ಆಗಸ್ಟ್ 20: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ (Bengaluru University) ಮಾಜಿ ಪ್ರಧಾನಿ ಮತ್ತು ಖ್ಯಾತ ಅರ್ಥಶಾಸ್ತ್ರಜ್ಞ ದಿವಂಗತ ಡಾ. ಮನಮೋಹನ್ ಸಿಂಗ್ (Dr. Manmohan Singh) ಅವರ ಹೆಸರನ್ನು ಇಡುವ ವಿಚಾರವನ್ನೊಳಗೊಂಡ ಮಸೂದೆಯನ್ನು ಕರ್ನಾಟಕ ವಿಧಾನಸಭೆ (Karnataka Assembly) ಮಂಗಳವಾರ ಅಂಗೀಕರಿಸಿದೆ. ‘ಕರ್ನಾಟಕ ರಾಜ್ಯ ವಿಶ್ವವಿದದ್ಯಾಲಯಗಳ ತಿದ್ದುಪಡಿ ವಿಧೇಯಕ’ಕ್ಕೆ ವಿಧಾನಸಭೆ ಅನುಮೋದನೆ ನೀಡಿದೆ. ಆಧುನಿಕ ಭಾರತದ ಆರ್ಥಿಕ ನೀತಿಗಳ ಹರಿಕಾರರೆಂದೇ ಗುರುತಿಸಿಕೊಂಡಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್​​ನಲ್ಲಿ ನಿಧನರಾಗಿದ್ದರು. ಬೆಂಗಳೂರು ನಗರ ಯೂನಿವರ್ಸಿಟಿಗೆ ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ ಮಾಡುವ ಬಗ್ಗೆ ಕಳೆದ ಬಜೆಟ್​​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಇದೀಗ ಆ ನಿಟ್ಟಿನಲ್ಲಿ ಮಸೂದೆಗೆ ಅನುಮೋದನೆ ಪಡೆಯಲಾಗಿದೆ.

ಆದರೆ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೆಸರನ್ನು ಈಗಿರುವ ವಿಶ್ವವಿದ್ಯಾಲಯಕ್ಕೆ ಗೌರವಾರ್ಥವಾಗಿ ಇಡುವ ಬದಲು ಹೊಸ ವಿಶ್ವವಿದ್ಯಾಲಯ ಆರಂಭಿಸಿ ಹೆಸರಿಸಬೇಕು ಎಂದು ವಿರೋಧ ಪಕ್ಷ ಬಿಜೆಪಿ ಸೂಚಿಸಿತ್ತು. ಅಸ್ತಿತ್ವದಲ್ಲಿರುವ ವಿಶ್ವವಿದ್ಯಾಲಯಕ್ಕೆ ಮನಮೋಹನ್ ಸಿಂಗ್ ಅವರ ಹೆಸರಿಡುವುದು ಅವರಿಗೆ ನೀಡುವ ಗೌರವವಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಪ್ರತಿಪಾದಿಸಿದರು.

ಏತನ್ಮಧ್ಯೆ, ‘ನಡೆದಾಡುವ ದೇವರು’ ಎಂದೇ ಖ್ಯಾತರಾಗಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ವಿಶ್ವವಿದ್ಯಾಲಯಕ್ಕೂ ಇಡಬೇಕಿತ್ತು ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ
Image
ಮನಮೋಹನ್ ಸಿಂಗ್ ಯೂನಿವರ್ಸಿಟಿಯಾಗಲಿರುವ ಬೆಂಗಳೂರು ವಿವಿ
Image
ಎಂದೆಂದಿಗೂ ಮರೆಯಲಾಗದ ಮನಮೋಹನ್ ಸಿಂಗ್​ರ ಯೋಜನೆಗಳು..!
Image
ಮೌನಕ್ಕೆ ಜಾರಿದ ಮನಮೋಹನ್ ಸಿಂಗ್, ಮಾಜಿ ಪ್ರಧಾನಿಯ ವ್ಯಕ್ತಿಚಿತ್ರಣ ಇಲ್ಲಿದೆ
Image
Manmohan Singh Passes Away: ಮಾಜಿ ಪ್ರಧಾನಿ ಡಾ ಮನಮೋಹನ್‌ ಸಿಂಗ್‌ ನಿಧನ

ಇದನ್ನೂ ಓದಿ:  ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಡಾ. ಮನಮೋಹನ್ ಸಿಂಗ್ ಯೂನಿವರ್ಸಿಟಿ ಎಂದು ಮರುನಾಮಕರಣ

2004 ರಿಂದ 2014 ರ ವರೆಗೆ ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್, 1991ರಲ್ಲಿ ಕೇಂದ್ರದ ಪಿವಿ ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆಗ ಅವರು ಜಾರಿಗೆ ತಂದ ಉದಾರೀಕರಣ ಆರ್ಥಿಕ ನೀತಿ ದೇಶದ ಆರ್ಥಿಕತೆಗೆ ಬಹುದೊಡ್ಡ ಉತ್ತೇಜನ ನೀಡಿತ್ತು. ಉದಾರೀಕರಣ, ಜಾಗತೀಕರಣ ಹಾಗೂ ಖಾಸಗೀಕರಣದ ಹರಿಕಾರರಾಗಿ ಸಿಂಗ್ ಅವರನ್ನು ಇತಿಹಾಸ ಗುರುತಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​
ಸೌದೆ ಒಲೆ ಬಳಸುವ ಮುನ್ನ ಹುಷಾರ್​​: ಕ್ಯಾನ್ಸರ್​​ ಬರಬಹುದು ಎಂದ ಡಾಕ್ಟರ್ಸ್​