AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು; ಹೈಕೋರ್ಟ್ ಮಹತ್ವದ ಆದೇಶ

ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು ಮಹತ್ವದ ಆದೇಶ ಹೊರಡಿಸಿದೆ.

ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು; ಹೈಕೋರ್ಟ್ ಮಹತ್ವದ ಆದೇಶ
ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು; ಹೈಕೋರ್ಟ್ ಮಹತ್ವದ ಆದೇಶ
TV9 Web
| Edited By: |

Updated on:Nov 23, 2022 | 12:33 PM

Share

ಬೆಂಗಳೂರು: ಮಕ್ಕಳು ಹಾಗೂ ದತ್ತು ಮಕ್ಕಳಿಗೂ (Adopted children) ಯಾವುದೇ ವ್ಯತ್ಯಾಸವಿಲ್ಲ. ಹೀಗಾಗಿ ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು ಎಂದು ಕರ್ನಾಟಕ ಉಚ್ಚ ನ್ಯಾಯಾಲಯವು (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಮಕ್ಕಳು ಹಾಗೂ ದತ್ತು ಮಕ್ಕಳ ನಡುವೆ ವ್ಯತ್ಯಾಸ ಮಾಡಿದರೆ ದತ್ತು ತೆಗೆದುಕೊಳ್ಳುವ ಉದ್ದೇಶ ನಿರರ್ಥಕವಾಗಲಿದೆ ಎಂದು ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ವ್ಯಕ್ತಪಡಿಸಿದೆ. ಅಭಿಯೋಜನೆ ವಿಭಾಗದಲ್ಲಿ ದಲಾಯತ್ ಆಗಿದ್ದ ವಿನಾಯಕ್ ಮುತ್ತತ್ತಿ ಅವರು 2010ರಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅನುಕಂಪದ ನೌಕರಿಗೆ ಗಿರೀಶ್ ಅವರು ಅರ್ಜಿ ಹಾಕಿದ್ದರು. ಆದರೆ ಗಿರೀಶ್ ಅವರು ವಿನಾಯಕ್ ಅವರ ದತ್ತುಪುತ್ರನೆಂಬ ಕಾರಣಕ್ಕೆ ಅನುಕಂಪದ ನೌಕರಿ ನಿರಾಕರಿಸಲಾಗಿತ್ತು.

ಇದನ್ನೂ ಓದಿ: Family Pension: ಪಿಂಚಣಿದಾರ ಮಹಿಳೆಯ ಅಕೌಂಟ್ ಬ್ಲಾಕ್‌ – ಬ್ಯಾಂಕ್ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಹೈಕೋರ್ಟ್‌ ಆದೇಶ

ದತ್ತುಪುತ್ರನೆಂಬ ಕಾರಣಕ್ಕೆ ಅನುಕಂಪದ ನೌಕರಿ ನಿರಾಕರಿಸಿದ ಹಿನ್ನೆಲೆ ಗಿರೀಶ್ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಅನುಕಂಪದಡಿ ನೌಕರಿ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಗಿರೀಶ್ ಅವರ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾ.ಸೂರಜ್ ಗೋವಿಂದರಾಜ್, ಜಿ.ಬಸವರಾಜರವರಿದ್ದ ವಿಭಾಗೀಯ ಪೀಠ, ದತ್ತು ಸ್ವೀಕಾರದ ಉದ್ದೇಶವನ್ನು ಮನಗಂಡು ದತ್ತು ಮಕ್ಕಳೂ ಅನುಕಂಪದ ನೌಕರಿ ಪಡೆಯಬಹುದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:34 pm, Tue, 22 November 22

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ