ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್​​: 100 ಗಡಿದಾಟಿದ ಟೊಮೆಟೊ, ಗೃಹಿಣಿಯರು ಆಕ್ರೋಶ

ಟೊಮೆಟೊ ಒಂದು ಕೆಜಿಗೆ ಬರೋಬ್ಬರಿ 100 ರೂ, ಈರುಳ್ಳಿ ಬೆಲೆ ಬರೋಬ್ಬರಿ 60 ರೂ ಏರಿಕೆ ಆಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಿದೆ. ಮಳೆ ಬರುತ್ತಿರುವ ಪರಿಣಾಮ ಟೊಮೆಟೊ ಸರಿಯಾಗಿ ಬೆಳೆ‌ ಬಂದಿಲ್ಲ. ಹೀಗಾಗಿ ಟೊಮೆಟೊ ಬೆಲೆ ಕೆಜಿಗೆ 100 ರೂ‌ ಏರಿಕೆ ಆಗಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಹೇಳುತ್ತಿದ್ದು, ಬೆಲೆ‌ ಕೇಳಿಯೇ ಗ್ರಾಹಕರು ಸುಸ್ತಾಗುತ್ತಿದ್ದಾರೆ. 

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್​​: 100 ಗಡಿದಾಟಿದ ಟೊಮೆಟೊ, ಗೃಹಿಣಿಯರು ಆಕ್ರೋಶ
ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್​​: 100 ಗಡಿದಾಟಿದ ಟೊಮೆಟೊ, ಗೃಹಿಣಿಯರು ಆಕ್ರೋಶ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 17, 2024 | 6:45 PM

ಬೆಂಗಳೂರು, ಜೂನ್​ 17: ರಾಜ್ಯ ಸರ್ಕಾರ ತೈಲ ಮಾರಾಟದ ಮೇಲಿನ ತೆರಿಗೆ ಹೆಚ್ಚಳ (Petrol Diesel Price Increase) ಮಾಡಿದೆ. ಲೋಕಸಭೆ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದ್ದು, ಬಿಜೆಪಿ (bjp) ಸೇರಿದಂತೆ ಸಾರ್ವಜನಿಕರ ಆಕ್ರೋಶಕ್ಕೂ ಗುರಿ ಆಗಿದೆ. ರಾಜ್ಯಾದ್ಯಂತ ಬೀದಿಗಿಳಿದು ಪ್ರತಿಭಟನೆ ಮಾಡಲಾಗುತ್ತಿದೆ. ಇದೀಗ ತೈಲ ದರ ಹೆಚ್ಚಳದೊಂದು ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆಯ ಶಾಕ್​ ಎದುರಾಗಿದೆ.

ಟೊಮೆಟೊ ಒಂದು ಕೆಜಿಗೆ ಬರೋಬ್ಬರಿ 100 ರೂ, ಈರುಳ್ಳಿ ಬೆಲೆ ಬರೋಬ್ಬರಿ 60 ರೂ ಏರಿಕೆ ಆಗಿದ್ದು, ಗ್ರಾಹಕರಿಗೆ ಮತ್ತಷ್ಟು ಹೊರೆ ಆಗಿದೆ. ಮಳೆ ಬರುತ್ತಿರುವ ಪರಿಣಾಮ ಟೊಮೆಟೊ ಸರಿಯಾಗಿ ಬೆಳೆ‌ ಬಂದಿಲ್ಲ. ಹೀಗಾಗಿ ಟೊಮೆಟೊ ಬೆಲೆ ಕೆಜಿಗೆ 100 ರೂ‌ ಏರಿಕೆ ಆಗಿದೆ. ಇದು ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಹೇಳುತ್ತಿದ್ದು, ಬೆಲೆ‌ ಕೇಳಿಯೇ ಗ್ರಾಹಕರು ಸುಸ್ತಾಗುತ್ತಿದ್ದಾರೆ.

ದರ ಹೀಗೆ ಜಾಸ್ತಿ ಆದ್ರೆ ಜೀವನ‌ ಮಾಡುವುದಕ್ಕೆ ಆಗುತ್ತಾ: ಮಹಿಳಾ ಗ್ರಾಹಕರು ಆಕ್ರೋಶ

ಈ ಕುರಿತಾಗಿ ಮಹಿಳೆಯರು ಮಾತನಾಡಿದ್ದು, ನಿನ್ನೆ ಪೆಟ್ರೋಲ್ ಮತ್ತು ಡಿಸೇಲ್ ಜಾಸ್ತಿಯಾಗಿದೆ. ಇಂದು ಟೊಮೆಟೊ, ಈರುಳ್ಳಿ ದರ ಜಾಸ್ತಿ ಆಗಿದೆ. ಹೀಗಾದ್ರೆ ಜೀವನ‌ ಮಾಡುವುದಕ್ಕೆ ಆಗುತ್ತಾ ಎಂದಿದ್ದಾರೆ. ಕಳೆದ ವರ್ಷ ಟೊಮೆಟೊ ಬೆಲೆ‌ 200 ರೂ. ಗಡಿ ದಾಟಿತ್ತು.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ದುಬಾರಿ; ರಾಜ್ಯ ಸರ್ಕಾರದ ನಡೆಗೆ ಸಾರ್ವಜನಿಕರಿಂದ ಆಕ್ರೋಶ

ಈಗ ಮತ್ತೆ ಟೊಮಾಟೋ ಬೆಲೆ‌ ಜಾಸ್ತಿಯಾಗುತ್ತಿದೆ. ವ್ಯಾಪಾರಸ್ಥರನ್ನ ಕೇಳಿದರೆ ಮಳೆ ಬರ್ತಿದೆ ಹೀಗಾಗಿ ಟೊಮೆಟೊ ಬರ್ತಿಲ್ಲ ಎನ್ನುತ್ತಿದ್ದಾರೆ. ಬೀನ್ಸ್, ಕ್ಯಾರೆಟ್, ಬಾಟಾಣಿ ಎಲ್ಲವೂ 100 ರೂ. ಗಡಿದಾಟಿದೆ. ಹೀಗಾದ್ರೆ ಜೀವನ‌ ಮಾಡುವುದು ಹೇಗೆ ಹೇಳಿ. ಉಚಿತ ಯೋಜನೆ ತೆಗೆದು ಮೊದಲು ತರಕಾರಿ ಬೆಲೆ ಕಡಿಮೆ ಮಾಡಿ ಎಂದು ಗೃಹಿಣಿಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ

ತೆರಿಗೆ ಹಂಚಿಕೆ ವಿಚಾರದಲ್ಲಿ ಈ ಹಿಂದೆ ರಾಜ್ಯ ಸರ್ಕಾರ ಕೇಂದ್ರದ ವಿರುದ್ಧ ಸಮರ ಸಾರಿತ್ತು. ಚೊಂಬಿನ ಜಾಹೀರಾತು ಕೊಟ್ಟು ಕುಟುಕಿತ್ತು. ಇದೇ ಅಸ್ತ್ರವನ್ನ ಬಿಜೆಪಿ ಕಾರ್ಯಕರ್ತರು ತಿರುಗಿಸಿ ಬಿಟ್ಟಿದ್ದಾರೆ. ಮಂಗಳೂರಿನಲ್ಲಿ ಚೊಂಬಿನಲ್ಲಿ ಹಣ ಸಂಗ್ರಹಿಸಿ, ಚಿಪ್ಪಿಗೆ ಪೆಟ್ರೋಲ್ ತುಂಬಿಸಿಕೊಂಡ್ರು. ಕಾರಿಗೆ ಹಗ್ಗ ಕಟ್ಟಿ ಎಳೆದು, ಸ್ಕೂಟ್ ತಳ್ಳಿಕೊಂಡು ಜಾಥಾ ಮಾಡಿದ್ರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
‘ದರ್ಶನ್ ಇರುವ ಫ್ಲೋರ್​ನಲ್ಲಿ ಹೆಣ್ಣು ಮಕ್ಕಳು ಇರುವಂತಿರಲಿಲ್ಲ’
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ವಿರೋಧ ಪಕ್ಷದ ನಾಯಕ ಆರ್ ಅಶೋಕರನ್ನು ತರಾಟೆಗೆ ತೆಗೆದುಕೊಂಡ ಹೆಚ್ ವಿಶ್ವನಾಥ್
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ರೈತರ ಮಕ್ಕಳಿಗೆ ಕನ್ಯೆ ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಮನವಿ ಮಾಡಿದ ಯುವಕ
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಹಾಲಿನ ದರ ಹೆಚ್ಚಳ ಮಾಡಿದ್ದು ಸರ್ಕಾರವಲ್ಲ, ಕೆಎಂಎಫ್ ಎಂದಿದ್ದ ಸಿಎಂ ಉಲ್ಟಾ!
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಚುನಾಯಿತ ಜನಪ್ರತಿನಿಧಿ ಎಲ್ಲ ಸಮುದಾಯಳಿಗಾಗಿ ದುಡಿಯಬೇಕು: ಪ್ರಿಯಾಂಕ್ ಖರ್ಗೆ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೂರು ಡಿಸಿಎಂ ಬೇಡಿಕೆ ಈಗಿನ ಡಿಸಿಎಂಗೆ ಮೂಗುದಾರ ಹಾಕುವ ಹುನ್ನಾರ: ಸಿಟಿ ರವಿ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
ಮೈಸೂರಲ್ಲಿಂದು ಬೆಳ್ಳಂಬೆಳಗ್ಗೆಯೇ ಮಳೆ, ಮಕ್ಕಳನ್ನು ಶಾಲೆಗೆ ಕಳಿಸಲು ತಾಪತ್ರಯ
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
‘ನನ್ನನ್ನು ಯಾರೂ ಮಾತನಾಡಿಸೋಲ್ಲ’; ಜೈಲಲ್ಲಿ ಪವಿತ್ರಾ ಗೌಡ ಕಣ್ಣೀರು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು
Daily Horoscope: ನಿಶ್ಚಿತವಾದ ವಿವಾಹವು ಅನ್ಯರಿಂದ ತಪ್ಪಿಹೋಗಬಹುದು