AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಜಾಲಹಳ್ಳಿಯ ಸುತ್ತಮುತ್ತ ಡೆಡ್ಲಿ ಡಾಗ್ ಗೆ ಹುಡುಕಾಟ ನಡೆಸಿದ್ದು, ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಿ ಪಾಲಿಕೆ ಸುಸ್ತಾಗಿದೆ. ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳನ್ನು ಪರಿಶೀಲನೆ ಮಾಡಲಾಗಿದೆ. ಆದರೆ ವೃದ್ಧೆಗೆ ಕಚ್ಚಿದ್ದ ನಾಯಿ ಪತ್ತೆಯಾಗದೇ ಅಧಿಕಾರಿಗಳಿಗೆ ತಲೆನೋವಾಗಿದೆ. ಸದ್ಯ ವೃದ್ಧೆಗೆ ಕಚ್ಚಿದ್ದ ನಾಯಿ ಹುಡುಕುವ ಪ್ರಯತ್ನದಲ್ಲಿದ್ದೇವೆ ಎಂದಿದ್ದಾರೆ.

ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ
ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲಿನೆ
ಶಾಂತಮೂರ್ತಿ
| Edited By: |

Updated on:Sep 13, 2024 | 3:43 PM

Share

ಬೆಂಗಳೂರು, ಸೆಪ್ಟೆಂಬರ್​​ 13: ಇತ್ತೀಚೆಗಷ್ಟೇ ಜಾಲಹಳ್ಳಿಯಲ್ಲಿ ಬೀದಿನಾಯಿಗಳ (street dog) ದಾಳಿಗೆ ವೃದ್ಧೆಯೊಬ್ಬರು ಮೃತಪಟ್ಟಿದ್ದರು. ಈ ಬಗ್ಗೆ ಜಾಲಹಳ್ಳಿಯ ಪೊಲೀಸ್ ಠಾಣೆಯಲ್ಲಿ ವೃದ್ಧೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಇದೀಗ ವೃದ್ಧೆಗೆ ಕಚ್ಚಿದ್ದ ನಾಯಿ ಹುಡುಕಲು ಜಾಲಹಳ್ಳಿ ಪೊಲೀಸರು, ಬಿಬಿಎಂಪಿಯ ಪಶುಪಾಲನಾ ಇಲಾಖೆ ಸರ್ಕಸ್​ ಮಾಡುತ್ತಿದ್ದು, ಎಷ್ಟೇ ಹುಡುಕಿದ್ರೂ ಶ್ವಾನ ಮಾತ್ರ ಪತ್ತೆಯಾಗಿಲ್ಲ.

ಜಾಲಹಳ್ಳಿಯ ಸುತ್ತಮುತ್ತ ಡೆಡ್ಲಿ ಡಾಗ್ ಗೆ ಹುಡುಕಾಟ ನಡೆಸಿದ್ದು, ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಿ ಪಾಲಿಕೆ ಸುಸ್ತಾಗಿದೆ. ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳನ್ನು ಪರಿಶೀಲನೆ ಮಾಡಲಾಗಿದೆ. ಆದರೆ ವೃದ್ಧೆಗೆ ಕಚ್ಚಿದ್ದ ನಾಯಿ ಪತ್ತೆಯಾಗದೇ ಅಧಿಕಾರಿಗಳಿಗೆ ತಲೆನೋವಾಗಿದೆ. ಸದ್ಯ ವೃದ್ಧೆಗೆ ಕಚ್ಚಿದ್ದ ನಾಯಿ ಹುಡುಕುವ ಪ್ರಯತ್ನದಲ್ಲಿದ್ದೇವೆ. ಈಗಾಗಲೇ ವೃದ್ಧೆ ಕುಟುಂಬಕ್ಕೆ ಪರಿಹಾರ ಕೊಟ್ಟಿದ್ದೇವೆ ಎಂದು ವಿಶೇಷ ಆಯುಕ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ BBMPಯಿಂದ 4 ವರ್ಷದಲ್ಲಿ 40 ಕೋಟಿ ರೂ. ಖರ್ಚು

ಸದ್ಯ ಬೆಂಗಳೂರಿನಲ್ಲಿ ಜನರಿಗೆ ಸಂಕಷ್ಟ ತಂದಿಟ್ಟಿರುವ ಬೀದಿನಾಯಿಗಳ ಕಾಟಕ್ಕೆ ಕಡಿವಾಣ ಹಾಕುವುದಕ್ಕೆ ಪಾಲಿಕೆ ಇನ್ನು ಎಚ್ಚೆತ್ತುಕೊಂಡಿಲ್ಲ. ಬೀದಿನಾಯಿಗಳನ್ನ ನಿಯಂತ್ರಣ ಮಾಡಬೇಕಿದ್ದ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಟಿಮಂದಿ ಹೈರಾಣಾಗಿದ್ದು, ಗಲ್ಲಿ ಗಲ್ಲಿಯಲ್ಲೂ ಬೀದಿನಾಯಿಗಳ ಕಾಟ ಹೆಚ್ಚಾಗಿದೆ. ಜೆ.ಪಿ.ನಗರ 7th ಫೇಸ್, ಚುಂಚಘಟ್ಟ ಸುತ್ತಮುತ್ತ ಬೌಬೌ ಗ್ಯಾಂಗ್ ಕಾಟಕ್ಕೆ ಏರಿಯಾ ಜನ ಬೇಸತ್ತು ಹೋಗಿದ್ದಾರೆ. ಕಂಡ ಕಂಡವರ ಮೇಲೆ ಅಟ್ಯಾಕ್ ಮಾಡುತ್ತಿರುವ ಬೌಬೌ ಅಟ್ಟಹಾಸಕ್ಕೆ ಬ್ರೇಕ್ ಹಾಕಿ ಎಂದು ಏರಿಯಾ ಜನ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಬೀದಿ ನಾಯಿಗಳ ಕಾಟ; ಕಬ್ಬನ್ ಪಾರ್ಕ್ ನಲ್ಲೂ ಸಾಕುನಾಯಿಗಳ ಮಾಲೀಕರಿಂದ ರೂಲ್ಸ್ ಬ್ರೇಕ್

ಬೆಳಗ್ಗೆಯಲ್ಲ ಸಿಕ್ಕ ಸಿಕ್ಕ ಕಡೆ ನಿದ್ದೆಗೆ ಜಾರುವ ಶ್ವಾನ ಪಡೆ, ರಾತ್ರಿಯಾದ್ರೆ ಸಾಕು ಏರಿಯಾ ಜನರ ನೆಮ್ಮದಿ ಕೆಡಿಸುತ್ತಿವೆ. ವಾಹನ ಸವಾರರು, ಪಾದಚಾರಿಗಳು ಹೀಗೆ ಸಿಕ್ಕ ಸಿಕ್ಕವರ ಮೇಲೆ ಅಟ್ಯಾಕ್ ಮಾಡುತ್ತಿರುವ ಬೌಬೌ ಗ್ಯಾಂಗ್ ಕಾಟಕ್ಕೆ ಸುಸ್ತಾದ ಜನ ರಸ್ತೆಯಲ್ಲಿ ಓಡಾಡುವುದಕ್ಕೆ ಹೆದರು ಸ್ಥಿತಿ ನಿರ್ಮಾಣವಾಗಿ ಬಿಟ್ಟಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:42 pm, Fri, 13 September 24

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ