AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರಿನ ಎಂಜಿ ರಸ್ತೆಯ ಬೆಸ್ಕಾಂ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಮತ್ತು ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ದಾಳಿ ಮಾಡಿದ್ದು, ಕಡತಗಳು ಮತ್ತು ಲೆಕ್ಕಪತ್ರಗಳನ್ನು ಪರಿಶೀಲಿಸಲಾಗುತ್ತಿದೆ. ಸಾರ್ವಜನಿಕರಿಂದ ದೂರುಗಳ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ದಾಳಿ ಮಾಡಲಾಗಿದೆ.

ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
ಸಾರ್ವಜನಿಕರಿಂದ ದೂರು: ಬೆಸ್ಕಾಂ, ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ
Vinayak Hanamant Gurav
| Edited By: |

Updated on:Dec 19, 2024 | 5:05 PM

Share

ಬೆಂಗಳೂರು, ಡಿಸೆಂಬರ್​ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ (Lokayukta raid) ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರಿಂದ ಕಡತ ಪರಿಶೀಲಿಸಲಾಗುತ್ತಿದೆ.

ಇಂದು ಲೋಕಾಯುಕ್ತ ಅಧಿಕಾರಿಗಳಿಂದ ಬೃಹತ್ ದಾಳಿ ಮಾಡಲಾಗಿದ್ದು, ಸ್ವತಃ ಖುದ್ದು ಲೋಕಾಯುಕ್ತ ಬಿ.ಎಸ್ ಪಾಟೀಲ್ ಫೀಲ್ಡ್ ಗಿಳಿದ್ದರು. ಹಲವು ಬಾರಿ ಎರಡು ಇಲಾಖೆಗಳ ಮೇಲೆ ಲೋಕಾಯುಕ್ತಕ್ಕೆ ದೂರು ಬಂದ ಹಿನ್ನಲೆ ದಾಳಿ ಮಾಡಲಾಗಿದ್ದು, ಈ ಸಂಬಂಧ ಸಾರ್ವಜನಿಕರಿಂದ ಬೆಸ್ಕಾಂ ಮೇಲೆ 83, ಬಿಡ್ಯೂಎಸ್​​ಎಸ್​ಬಿ ಮೇಲೆ‌ 63 ದೂರುಗಳು ಬಂದಿವೆ. ಈ ಸಂಬಂಧ ಸರ್ಚ್ ವಾರೆಂಟ್ ಪಡೆದು ದಾಳಿ ಮಾಡಲಾಗಿದ್ದು, ಭಷ್ಟ್ರಚಾರ, ಅರ್ಜಿ ವಿಲೇವಾರಿಯಲ್ಲಿ ತಡೆ, ಸಾಕಷ್ಟು ಭಷ್ಟ್ರಚಾರ ಆರೋಪ ಕೇಳಿಬಂದಿದೆ.

ಅಧಿಕಾರಿಗೆ ತರಾಟೆ 

ಕ್ರೆಸೆಂಟ್ ಟವರ್​​ನಲ್ಲಿರುವ ಅಧೀಕ್ಷಕ ಎಂಜಿನಿಯರ್ ಕಚೇರಿಯಲ್ಲಿ ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ ಹಾಗೂ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗಿದೆ. ಅಧಿಕಾರಿಗಳ ರಿಜಿಸ್ಟರ್ ನಿರ್ವಾಹಣೆ ಮಾಡದ ಕಾರ್ಯನಿರ್ವಾಹಕ ಎಂಜಿನಿಯರ್​ ಜಿ.ಎಂ. ಅಮರನಾಥ್ ರೆಡ್ಡಿಗೆ ತರಾಟೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಲೋಕಾಯುಕ್ತ ದಾಳಿ ವೇಳೆ ಕಿಟಿಕಿಯಿಂದ ಲಕ್ಷ ಲಕ್ಷ ಹಣ ಎಸೆದರು! ವಿಡಿಯೋ ನೋಡಿ

ಇನ್ನು ಇತ್ತೀಚೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಲೋಕಾಯುಕ್ತ ದಾಳಿ ಮಾಡಲಾಗಿತ್ತು. ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಪಡೆದಿದ್ದ ಲೋಕಾಯುಕ್ತ ಅಧಿಕಾರಿಗಳು ಬೆಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಆರು ಜಿಲ್ಲೆಯಲ್ಲಿ ಲೋಕಾಯುಕ್ತ ರೇಡ್ ಮಾಡಿದ್ದರು. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ತುಮಕೂರು ಮತ್ತು ಚಿತ್ರದುರ್ಗದಲ್ಲಿ ದಾಳಿ ನಡೆದಿದ್ದರೆ ಬೆಂಗಳೂರಿನಲ್ಲಿಯೇ 5 ಕಡೆ ದಾಳಿ ನಡೆಸಲಾಗಿತ್ತು.

ಮಾಹಿತಿ ಪ್ರಕಾರ ದೊಡ್ಡ ತಿಮ್ಮಿಂಗಿಲಗಳು ಅಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿಹೆಚ್​​ಒ, ಸುನಿಲ್ ಕುಮಾರ್ ಮತ್ತು ಡಿಎಸ್​​ಪಿ ನಂಜುಡಯ್ಯ. ನಂಜುಂಡಯ್ಯ ಅವರ ರಾಜಾನುಕುಂಟೆ ಬಳಿ ಇರುವ ನಿವಾಸಕ್ಕೆ ಎಂಟ್ರಿ ಕೊಟ್ಟಿದ್ದ ಲೋಕಾ ಅಧಿಕಾರಿಗಳೇ ಶಾಕ್ ಆಗಿದ್ದರು. ಇದು ಮನೆಯೋ ಅಥವಾ ಅರಮನೆಯೋ ಎಂದು, ಮನೆಯೊಳಗೆ ಐಶಾರಾಮಿ ವ್ಯವಸ್ಥೆ, ಸ್ವಿಮ್ಮಿಂಗ್ ಪೂಲ್, ಜಿಮ್, ಥಿಯೇಟರ್ ನಂತಹ ಐಶಾರಾಮಿ ವ್ಯವಸ್ಥೆ ಮಾಡಿಕೊಂಡಿರುವುದು ಪತ್ತೆಯಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:20 pm, Thu, 19 December 24

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ