AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನೂ ನಿಂತಿಲ್ಲ ಔಷಧ ಸಮಸ್ಯೆ: ಬೆಂಗಳೂರಿನ ಅನೇಕ ಆಸ್ಪತ್ರೆಗಳಲ್ಲಿ ಮೆಡಿಸಿನ್ ನೋ ಸ್ಟಾಕ್

ಬೆಂಗಳೂರು ಮತ್ತು ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಮುಂದುವರಿದಿದೆ. 250ಕ್ಕೂ ಹೆಚ್ಚು ಔಷಧಗಳು ದಾಸ್ತಾನಿಲ್ಲದಿರುವುದು ರೋಗಿಗಳಿಗೆ ತೊಂದರೆಯನ್ನುಂಟಾಗಿದೆ. ಆರೋಗ್ಯ ಇಲಾಖೆ ಔಷಧಿ ಖರೀದಿಗೆ ಹಣ ಬಿಡುಗಡೆ ಮಾಡಿದೆ ಎಂದು ಹೇಳಿದ್ದರೂ, ಸಮಸ್ಯೆ ಇನ್ನೂ ಬಗೆಹರಿದಿಲ್ಲ. ರೋಗಿಗಳು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಬೆಲೆಗೆ ಔಷಧಿಗಳನ್ನು ಖರೀದಿಸಬೇಕಾಗಿದೆ. ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ರೋಗಿಗಳು ಆಗ್ರಹಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನೂ ನಿಂತಿಲ್ಲ ಔಷಧ ಸಮಸ್ಯೆ: ಬೆಂಗಳೂರಿನ ಅನೇಕ ಆಸ್ಪತ್ರೆಗಳಲ್ಲಿ ಮೆಡಿಸಿನ್ ನೋ ಸ್ಟಾಕ್
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನೂ ನಿಂತಿಲ್ಲ ಔಷಧ ಸಮಸ್ಯೆ: ಬೆಂಗಳೂರಿನ ಅನೇಕ ಆಸ್ಪತ್ರೆಗಳಲ್ಲಿ ಮೆಡಿಸಿನ್ ನೋ ಸ್ಟಾಕ್
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Dec 05, 2024 | 2:59 PM

ಬೆಂಗಳೂರು, ಡಿಸೆಂಬರ್​​ 05: ಇತ್ತೀಚೆಗೆ ಕರ್ನಾಟಕದಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ 250ಕ್ಕೂ ಹೆಚ್ಚು ಔಷಧಗಳು (Medicine) ದಾಸ್ತಾನಿಲ್ಲದಿರುವ ವಿಚಾರ ಬೆಳಕಿಗೆ ಬಂದಿತ್ತು. ಇನ್ನು ಕೂಡ ಈ ಕೊರತೆಯನ್ನು ಆರೋಗ್ಯ ಇಲಾಖೆ ಸರಿಪಡಿಸಿಲ್ಲ. ಔಷಧಗಳ ಖರೀದಿಗೆ ಹಣ ನೀಡಿದ್ದೇವೆ ಎಂದು ಆರೋಗ್ಯ ಸಚಿವರು ಹೇಳಿದ್ದರು. ಆದರೂ ಕೂಡ ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಸಮಸ್ಯೆ ಇನ್ನೂ ನಿಂತಿಲ್ಲ. ಹೀಗಾಗಿ ರೋಗಿಗಳು ಪರದಾಡುವಂತಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಒಂದು ಇದ್ದರೆ, ಮತ್ತೊಂದು ಮಾತ್ರೆ ಇರಲ್ಲ. ಒಂದು ವಾರದಲ್ಲಿ ಮೆಡಿಸಿನ್ ಸ್ಟಾಕ್​ ಇರುತ್ತೆ ಬಳಿಕ ಖಾಲಿ ಆಗುತ್ತದೆ. ನಗರದ ಕೆಸಿ ಜನರಲ್, ವಿಕ್ಟೋರಿಯಾ ಸೇರಿದಂತೆ ಅನೇಕ ಆಸ್ಪತ್ರೆಗಳಲ್ಲಿ ಔಷಧಗಳು ದಾಸ್ತಾನಿಲ್ಲ. ಬಿಪಿ, ಶುಗರ್ ಸೇರಿದಂತೆ ಅನೇಕ ಮಾತ್ರೆಗಳು ಸಿಗುತ್ತಿಲ್ಲ.

ಇದನ್ನೂ ಓದಿ: ಕರ್ನಾಟಕ ಸರ್ಕಾರಿ ಆಸ್ಪತ್ರೆಗಳಿಗೆ ಹೋದ್ರೆ ಇಲ್ಲ ಔಷಧ ಗ್ಯಾರಂಟಿ! 250ಕ್ಕೂ ಹೆಚ್ಚು ಔಷಧಗಳು ಔಟ್ ಆಫ್ ಸ್ಟಾಕ್

ಆಸ್ಪತ್ರೆಯ ಔಷಧಾಲಯಗಳಲ್ಲಿ ಕೂಡ ಔಷಧಗಳು ಇಲ್ಲ. ಹೀಗಾಗಿ ಆಸ್ಪತ್ರೆ ಸಿಬ್ಬಂದಿಗಳು ಹೊರಗಡೆ ಚೀಟಿ ಬರೆದು ಕೊಡುತ್ತಿದ್ದು, ರೋಗಿಗಳು ಹಣ ಕೊಟ್ಟು ಹೊರಗೆ ಔಷಧಿ ಖರೀದಿ ಮಾಡುತ್ತಿದ್ದಾರೆ. ಬೇರೆ ಕಡೆಗಳಲ್ಲಿ ಔಷಧಗಳಿಗೆ ಹೆಚ್ಚು ಹಣ ನೀಡಬೇಕು. ನಮ್ಮ ಬಳಿ ಹಣ ಇಲ್ಲ. ನಮಗೆ ಔಷಧಿ ಕೊಡಿಸಿ ಎಂದು ರೋಗಿಗಳು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಹಿಂದೆ 250 ಔಷಧಗಳು ಖಾಲಿಯಾಗಿತ್ತು. ಈಗಲೂ ಸರಿಯಾಗಿ  ಔಷಧಗಳು ಸಿಗುತ್ತಿಲ್ಲ.

ಯಾವೆಲ್ಲಾ ಔಷಧಗಳು ಔಟ್‌ಆಫ್ ಸ್ಟಾಕ್

ಕಳೆದ ಒಂದು ತಿಂಗಳಿಂದ ರೋಗಿಗಳಿಗೆ ಬೇಕಾದ ಬ್ಯಾಂಡೇಜ್ ಕ್ಲಾತ್, ಕಾಟನ್, ಸರ್ಜಿಕಲ್ ಗ್ಲೌಸ್, ಗ್ಲೂಕೋಸ್ ಬಾಟಲ್, ಆ್ಯಂಟಿಬಯೋಟಿಕ್ ಮಾತ್ರೆ, ಪ್ಯಾರಸೆಟೋಮೋಲ್, ಡಯಬಿಟಿಸ್, ಬಿಪಿ, ರಕ್ತಹೀನತೆ, ನ್ಯೂಮೋನಿಯಾ, ಅಸ್ತಮಾ ಸೇರಿದಂತೆ ಸುಮಾರು 250ಕ್ಕೂ ಹೆಚ್ಚು ಔಷಧಿಗಳು ಔಟ್‌ಆಫ್ ಸ್ಟಾಕ್ ಆಗಿದ್ದು, ಮೆಡಿಕಲ್‌ಗೆ ಹೋದ ರೋಗಿಗಳು ಹಾಗೂ ಸಂಬಂಧಿಕರು ಬರೀ ಕೈಯಲ್ಲಿ ಬರುವ ಸ್ಥಿತಿ ನಿರ್ಮಾಣವಾಗಿದೆ.

ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಿಷ್ಟು

ಇನ್ನೂ ರಾಜ್ಯದಲ್ಲಿ ಔಷಧಿ ಅಭಾವ ಕುರಿತು ಪ್ರತಿಕ್ರಿಯಿಸಿದ್ದ ಸಚಿವ ದಿನೇಶ್ ಗುಂಡೂರಾವ್, ಕೆಲವು ಔಷಧಿಗಳನ್ನ ಖರೀದಿ ಮಾಡುವ ಪ್ರಕ್ರಿಯೆ ಅಂತಿಮವಾಗಿಲ್ಲ. ಕೆಲ ತಾಂತ್ರಿಕ ಕಾರಣದಿಂದ ಟೆಂಡರ್ ವಿಳಂಬವಾಗಿದೆ. ಹೀಗಾಗಿ ಸ್ಥಳೀಯ ಮಟ್ಟದಲ್ಲಿ ಔಷಧಿ ಖರೀದಿ ಮಾಡಲು ಸೂಚನೆ ಕೊಟ್ಟಿದ್ದೇವೆ. ಔಷಧಿ ಖರೀದಿಸಲು ಹಣ ಕೂಡ ಒದಗಿಸಿದ್ದೇವೆ. ನಮ್ಮ ಸರ್ಕಾರ ಬರುವ ಮುನ್ನ ಕೇಬಲ 40% ಮಾತ್ರ ಔಷಧಿ ಪೂರೈಕೆಯಾಗುತ್ತಿತ್ತು. ಆದರೆ ಇದೀಗಾ 75% KSMSCL ನಿಂದಲೇ ಔಷಧಿ ಸರಬರಾಜು ಮಾಡುತ್ತಿದ್ದೇವೆ. ಸದ್ಯ ನಮ್ಮ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಔಷಧಿಗಳ ಕೊರತೆ ಇಲ್ಲ, ಯಾವ ಔಷಧಿಗಳು ಇಲ್ಲ ಅದನ್ನು ಸ್ಥಳೀಯವಾಗಿ ಖರೀದಿ ಮಾಡಲು ಹೇಳಿದ್ದೇವೆ ಎಂದಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ