AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್

ಕೊರೋನಾ ಹರಡುವಿಕೆಗೆ ಲಗಾಮು ಹಾಕಿದ ಕರ್ನಾಟಕದ ಆರೋಗ್ಯ ಇಲಾಖೆ ಇದೀಗ ಹೆಚ್ಚುತ್ತಿರುವ ಆತ್ಮಹತ್ಯೆಗಳಿಗೆ ಬ್ರೇಕ್ ಹಾಕಲು ಹೊಸ ಪ್ಲಾನ್ ಹಾಕಿಕೊಂಡಿದೆ. ಈ ಬಗ್ಗೆ ಸಂಪೂರ್ಣ ವರದಿ ಇಲ್ಲಿದೆ.

ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್
ಆತ್ಮಹತ್ಯೆ ಪ್ರಕರಣಕ್ಕೆ ಬ್ರೇಕ್ ಹಾಕಲು ಮುಂದಾದ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್
TV9 Web
| Edited By: |

Updated on: Nov 22, 2022 | 11:02 PM

Share

ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ಜನರ ಜೀವದ ಜೊತೆ ಹಾಕುತ್ತಿದ್ದ ಚೆಲ್ಲಟ ಕಡಿಮೆಯಾಗಿದೆ. ಆದರೆ ಕೊರೋನಾ ಹಾವಳಿಬಳಿಕ ಆತ್ಮಹತ್ಯೆ (Suicide) ಎಂಬ ಭೂತ ಜನರ ಜೀವದ ಜೊತೆ ಸಾವಿನ ನರ್ತನ ಶುರುಮಾಡಿದೆ. ಇತ್ತೀಚಿನ ದಿನಗಳಲ್ಲಿ ಯುವಕರು, ವಿದ್ಯಾರ್ಥಿಗಳು ಆತ್ಮಹತ್ಯಗೆ ಹೆಚ್ಚಿನ ಸಂಖ್ಯೆಯಲ್ಲಿ ಶರಣಾಗುತ್ತಿದ್ದಾರೆ. ದೇಶದಲ್ಲಿ ಅತಿ ಹೆಚ್ಚು ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವ ಮೊದಲ ಐದು ರಾಜ್ಯಗಳಲ್ಲಿ ಕರ್ನಾಟಕ ಕೂಡ ಸ್ಥಾನ ಪಡೆದುಕೊಂಡಿದೆ. ಚಿಕ್ಕ ಪುಟ್ಟ ವಿಷಯಕ್ಕೂ ವಿದ್ಯಾರ್ಥಿಗಳು ಹಾಗೂ ಯುವಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇನ್ನು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿವೆ. ಇದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಆರೋಗ್ಯ ಇಲಾಖೆ (Karnataka health department) ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ.

ಪುಟಾಣಿಗಳಿಂದ ಹಿಡದು ಯುವ ಪೀಳಿಗೆ ಹೆಚ್ಚು ಆತ್ಮಹತ್ಯಗೆ ಕೊರಳು ಒಡ್ಡುತ್ತಿರುವುದರಿಂದ ಆತಂಕ್ಕೆ ಒಳಗಾಗಿರುವ ಆರೋಗ್ಯ ಇಲಾಖೆ, ಆತ್ಮಹತ್ಯೆ ನಿಯಂತ್ರಿಸಲು ಹೊಸ ತಂತ್ರಕ್ಕೆ ಮುಂದಾಗಿದೆ. ಆತ್ಮಹತ್ಯೆಗೆ ಪ್ರಯತ್ನಿಸುವವರ ಹಾಗೂ ಮಾನಸಿಕ ಖಿನ್ನತೆಗೆ ಒಳಗಾದವರ ಸಂಪೂರ್ಣ ಮಾಹಿತಿ ಪಡೆಯಲು ಆರೋಗ್ಯ ಇಲಾಖೆ ಮುಂದಾಗಿದೆ. ಆತ್ಮಹತ್ಯೆಗೆ ಒಂದು ಬಾರಿ ಪ್ರಯತ್ನಿಸಿದವರು ಮತ್ತೆ ಮತ್ತೆ ಆತ್ಮಹತ್ಯೆಗೆ ಪಯತ್ನಿಸುತ್ತಲೇ ಇದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುವುದರಿಂದ ಆಸ್ಪತ್ರೆಗಳಲ್ಲಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಯ ಪ್ರಯತ್ನಗಳ ಬಗ್ಗೆ ವರದಿಯಾಗುವ ಮಾಹಿತಿ ದಾಖಲೆಯನ್ನ ಆರೋಗ್ಯ ಇಲಾಖೆ ಪಡೆಯಲು ಮುಂದಾಗಿದೆ.

ಇದನ್ನೂ ಓದಿ: ಕಲಬುರಗಿ: ಸನ್ನತಿ ಗ್ರಾಮದ ಸರ್ಕಾರಿ ಶಾಲೆಯ ಬಿಸಿ ಊಟದಲ್ಲಿ ಹುಳಗಳು ಪತ್ತೆ; ವಿದ್ಯಾರ್ಥಿಗಳಿಂದ ಆಕ್ರೋಶ

ಆತ್ಮಹತ್ಯೆ ಪ್ರಯತ್ನಿಸುವವರ ಮಾಹಿತಿ ಪಡೆದು ಕೌನ್ಸಿಲಿಂಗ್ ನೀಡಲು ಮುಂದಾಗಿದೆ. ಅಲ್ಲದೆ ಮತ್ತೆ ಆತ್ಮಹತ್ಯೆಯ ಪ್ರಯತ್ನಕ್ಕೆ ಕೈಹಾಕದಂತೆ ತಡೆಯಲು ಸೂಕ್ತ ಮಾನೋ ವೈದ್ಯರ ಮೂಲಕ ಆಪ್ತ ಸಮಾಲೋಚನೆ ತರಬೇತಿ ನೀಡಿ ಖಿನ್ನತೆಯಿಂದ ಹೊರ ತರಲು ಮುಂದಾಗಿದೆ. ಈ ಮೂಲಕ ಆತ್ಮಹತ್ಯೆಗೆ ಮುಂದಾಗುವವರನ್ನ ತಡೆಯಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಅಭಿಯಾನದ ತಂತ್ರರೂಪಿಸಿಕೊಂಡಿದೆ.

“ಒಂದು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದವರು ಮತ್ತೆ ಮತ್ತೆ ಆತ್ಮಹತ್ಯೆಗೆ ಪಯತ್ನಿಸುತ್ತಲೇ ಇರುತ್ತಾರೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಯ ಪ್ರಯತ್ನಿಸಿದವರ ಮಾಹಿತಿ ಹಾಗೂ ದಾಖಲೆಯನ್ನ ಪಡೆದು ಅತಂವರಿಗೆ ಸೂಕ್ತ ಕೌನ್ಸಿಲಿಂಗ್ ನೀಡಿದರೆ ಅವರು ಮತ್ತೆ ಆತ್ಮಹತ್ಯೆಯ ಪ್ರಯತ್ನಕ್ಕೆ ಕೈಹಾಕದಂತೆ ತಡೆಯಬಹುದು. ಸಮಯಕ್ಕೆ ಸರಿಯಾಗಿ ಆಪ್ತ ಸಮಾಲೋಚನೆ ನೀಡಿದರೆ ಆತ್ಮಹತ್ಯೆಯ ಆಲೋಚನೆ ದೂರು ಮಾಡಬಹದು” -ಡಾ.ರಜನಿ ಪಿ, ಮಾನಸಿಕ ವಿಭಾಗದ ಉಪ ನಿರ್ದೇಶಕ, ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ

ಆತ್ಮಹತ್ಯೆ ಕುರಿತು ಯೋಚಿಸುತ್ತಿರುವ ಹಾಗೂ ಖಿನ್ನತೆಯಿಂದ ಮಾನಸಿಕ ಹಿಂಸೆಗೆ ಒಳಗಾಗುವರಿಗೆ ಸೂಕ್ತ ಚಿಕಿತ್ಸೆಯ ಅವಶ್ಯಕತೆ ಇದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಬಳಲುವವರನ್ನ ಆರೋಗ್ಯ ಇಲಾಖೆ ಪತ್ತೆ ಹಚ್ಚಿ ಕೌನ್ಸಿಲಿಂಗ್ ನೀಡಿ ಆತ್ಮಹತ್ಯೆಗೆ ಕಡಿವಾಣ ಹಾಕಲು ಮುಂದಾಗಿರುವುದು ಮಾತ್ರ ಖುಷಿಯ ವಿಚಾರವಾಗಿದೆ.

ವರದಿ: ವಿನಯಕುಮಾರ್ ಕಾಶಪ್ಪನವರ್, ಟಿವಿ9 ಬೆಂಗಳೂರು

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!