AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರಮಂಗಲ ಪಿಜಿ ಹತ್ಯೆ ಕೇಸ್​: ಕೋರ್ಟ್​​ಗೆ 1205 ಪುಟಗಳ ಚಾರ್ಜ್​​ಶೀಟ್ ಸಲ್ಲಿಸಿದ ಪೊಲೀಸರು

ಕೋರಮಂಗಲದಲ್ಲಿ ಇತ್ತೀಚೆಗೆ ರಾತ್ರೋ ರಾತ್ರಿ ಪಿಜಿಯಲ್ಲಿದ್ದ ಹುಡುಗಿಗೆ ಯುವಕನೋರ್ವ ಚಾಕು ಚುಚ್ಚಿದ ಪ್ರಕರಣ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, 85 ಸಾಕ್ಷಿಗಳನ್ನು ಒಳಗೊಂಡ ಚಾರ್ಜ್​ಶೀಟ್​ ಅನ್ನು ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್​​ಗೆ ಸಲ್ಲಿಕೆ ಮಾಡಿದ್ದಾರೆ.

ಕೋರಮಂಗಲ ಪಿಜಿ ಹತ್ಯೆ ಕೇಸ್​: ಕೋರ್ಟ್​​ಗೆ 1205 ಪುಟಗಳ ಚಾರ್ಜ್​​ಶೀಟ್ ಸಲ್ಲಿಸಿದ ಪೊಲೀಸರು
ಕೋರಮಂಗಲ ಪಿಜಿ ಹತ್ಯೆ ಕೇಸ್​: ಕೋರ್ಟ್​​ಗೆ 1205 ಪುಟಗಳ ಚಾರ್ಜ್​​ಶೀಟ್ ಸಲ್ಲಿಸಿದ ಪೊಲೀಸರು
ಗಂಗಾಧರ​ ಬ. ಸಾಬೋಜಿ
|

Updated on: Aug 31, 2024 | 4:39 PM

Share

ಬೆಂಗಳೂರು, ಆಗಸ್ಟ್​ 31: ಕೋರಮಂಗಲ (Koramangala) ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 39ನೇ ಎಸಿಎಂಎಂ ಕೋರ್ಟ್​​ಗೆ 1205 ಪುಟಗಳ ಚಾರ್ಜ್​​ಶೀಟ್​ ಅನ್ನು ಪೊಲೀಸರು ಸಲ್ಲಿಸಿದ್ದಾರೆ. 85 ಸಾಕ್ಷಿಗಳನ್ನು ಒಳಗೊಂಡ ಚಾರ್ಜ್​​ಶೀಟ್​ ಅನ್ನು ಪೊಲೀಸರು ಸಲ್ಲಿಸಿದ್ದಾರೆ. ಜುಲೈ 24ರಂದು ಕೋರಮಂಗಲದ ಪಿಜಿಗೆ ನುಗ್ಗಿ ಕೃತಿಕುಮಾರಿ ಎಂಬ ಯುವತಿಯನ್ನು ಚಾಕುವಿನಿಂದ ಇರಿದು ಮಧ್ಯಪ್ರದೇಶದ ಬೇಗಂಗಂಜ್ ಮೂಲದ ಅಭಿಷೇಕ್ ಘೋಷಿ ಎಂಬಾತ ಹತ್ಯೆ ಮಾಡಿದ್ದ.

ಜುಲೈ 23ರ ರಾತ್ರಿ ಕೋರಮಂಗಲದಲ್ಲಿ ಲೇಡಿಸ್ ಪಿಜಿಯಲ್ಲಿ ನೆತ್ತರು ಹರಿದಿತ್ತು. ಪಿಜಿಗೆ ನುಗ್ಗಿದ್ದ ಅಭಿಷೇಕ್ ಘೋಷಿ ಕೃತಿ ಕುಮಾರಿ ಎಂಬ ಯುವತಿಯ ಕತ್ತು ಸೀಳಿ ಎಸ್ಕೇಪ್ ಆಗಿದ್ದ. ಬಳಿಕ ಕೋರಮಂಗಲ ಪೊಲೀಸರು ಆತನನ್ನು ಬಂಧಿಸಿದ್ದರು.

ಇದನ್ನೂ ಓದಿ: ಕೋರಮಂಗಲದ ಪಿಜಿಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಮಧ್ಯ ಪ್ರದೇಶದಲ್ಲಿ ಅರೆಸ್ಟ್

ಅಭಿಷೇಕ್, ಎಂಬಿಎ ಪದವೀಧರ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ. ಕೃತಿ ಸ್ನೇಹಿತೆಯನ್ನ ಲವ್ ಮಾಡುತ್ತಿದ್ದ. ಆದರೆ ಆಕೆಯನ್ನ ರೂಮ್​ನಲ್ಲಿ ಕೂಡಿಟ್ಟು ಟಾರ್ಚರ್ ಕೊಡುತ್ತಿದ್ದ. ಈ ವಿಷಯ ಗೊತ್ತಾಗಿ ಕೃತಿ ತನ್ನ ಗೆಳತಿಯನ್ನ ರಕ್ಷಿಸಿದ್ದಳು. ಇದೇ ಸಿಟ್ಟಲ್ಲಿ ಪಿಜಿಗೆ ಬಂದು ಯುವತಿಯನ್ನ ಕೊಂದಿದ್ದ. ಬಳಿಕ ಸೀದಾ ಆಟೋ ಏರಿ, ಮೆಜೆಸ್ಟಿಕ್ ತಲುಪಿದ್ದ. ಅಲ್ಲಿಂದ ಮಧ್ಯಪ್ರದೇಶ ರೈಲು ಹತ್ತಿ ಎಸ್ಕೇಪ್ ಆಗಿದ್ದ. ಈ ಬಗ್ಗೆ ಮಾಹಿತಿ ಕಲೆಹಾಕಿದ್ದ ಪೊಲೀಸರು ಭೋಪಾಲ್​ನಲ್ಲಿ ಅಭಿಷೇಕ್​ನ ಬಂಧಿಸಿ, ಎತ್ತಾಕ್ಕೊಂಡು ಬಂದಿದ್ದರು.

ಯುವತಿ ಪ್ರತಿರೋಧ ಮಾಡಿದರೂ ಲೆಕ್ಕಿಸದೇ ಒಂದಲ್ಲಾ ಎರಡಲ್ಲಾ ಐದಾರು ಬಾರಿ ಚಾಕುವಿನಿಂದ ಕತ್ತು ಕುಯ್ದಿದ್ದ. ಬಳಿಕ ಕ್ಷಣಾರ್ಧದಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಈ ಭೀಕರ ಕೊಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇಡೀ ಬೆಂಗಳೂರಿನ ಜನರನ್ನು ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ: ಕೊರಮಂಗಲ ಪಿಜಿಯಲ್ಲಿ ಯುವತಿ ಕೊಲೆ ಬಳಿಕ ಎಚ್ಚೆತ್ತ ಪೊಲೀಸರು, ಬೆಂಗಳೂರು ಪಿಜಿಗಳಿಗೆ ಕಠಿಣ ಮಾರ್ಗಸೂಚಿ

ಇನ್ನು ಚಾಕು ಇರಿತಕ್ಕೊಳಗಾದ ಯುವತಿ ರಕ್ತದ ಮಡುವಿನಲ್ಲಿ ಒದ್ದಾಡಿದ್ದರೂ, ನೆರವಿಗೆ ಅಂಗಲಾಚಿದರೂ ಅದನ್ನು ನೋಡಿದ ಪಿಜಿಯ ಯುವತಿಯರು ತಕ್ಷಣ ಸಹಾಯಕ್ಕೆ ದಾವಿಸದೆ ಅಮಾನವೀಯತೆ ಮೆರೆದಿದ್ದರು. ಈ ಪ್ರಕಣದಿಂದ ಎಚ್ಚೆತ್ತ ಪೊಲೀಸರು, ಬೆಂಗಳೂರು ಪಿಜಿಗಳಿಗೆ ಕಠಿಣ ಮಾರ್ಗಸೂಚಿ ಹೊರಡಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಇದೆಂಥಾ ಪ್ರಶ್ನೆ? ಪತ್ರಕರ್ತರ ಪ್ರಶ್ನೆಗೆ ಕೆರಳಿದ ಇಶಾನ್ ಕಿಶನ್
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಒಳಮೀಸಲಾತಿ ಜಟಾಪಟಿ: ಸಭೆಯಲ್ಲಿ ಮಹತ್ವದ ತೀರ್ಮಾನ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಅಶ್ಲೀಲ ಕಮೆಂಟ್ ಪ್ರಕರಣ: ರಮ್ಯಾ ಹಠ ಹಿಡಿದು ಕೇಸ್ ಹಾಕಿದ್ದಕ್ಕೆ ಇದೇ ಕಾರಣ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಆರ್​ ಅಶೋಕ್‌ ಹೇಳಿದ ಮನಕಲಕುವ ಸತ್ಯ ಘಟನೆಗೆ ಸದನವೇ ನಿಶ್ಯಬ್ದ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ಆರ್ಥಿಕ ಪ್ರಗತಿ ಮತ್ತು ಆಕಸ್ಮಿಕ ಧನಯೋಗ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಅಶ್ಲೀಲ ಕಮೆಂಟ್ ಕೇಸು, ನ್ಯಾಯಾಲಯಕ್ಕೆ ಬಂದ ನಟಿ ರಮ್ಯಾ: ವಿಡಿಯೋ
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ವೃಶ್ಚಿಕ ರಾಶಿಗೆ ಈ ವರ್ಷ ಹೇಗಿರಲಿದೆ?
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಮಟ್ಟದ ಬಸ್​ ನಿಲ್ದಾಣ
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಶಾರ್ಟ್​ ಸರ್ಕೂಟ್​ನಿಂದ ಹೊತ್ತಿ ಉರಿದ ಕೊಳ್ಳೇಗಾಲ ಸಿಪಿಐ ಕಚೇರಿ!
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ
ಚಿನ್ನದ ಸರ ಕಸಿದು ಪರಾರಿಯಾಗಲು ಯತ್ನಿಸಿದ ಕಳ್ಳ; ಮುಂದೇನಾಯಿತು ನೋಡಿ