AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ

ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ನಡೆದಿದೆ.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
Kiran Surya
| Edited By: |

Updated on:May 11, 2024 | 7:09 PM

Share

ಬೆಂಗಳೂರು, ಮೇ 11: ನಮ್ಮ ಮೆಟ್ರೋ (Namma Metro) ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ಇತ್ತೀಚೆಗೆ ರಾತ್ರಿ 9:55 ಕ್ಕೆ ವಿಜಯನಗರ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಹೀಗಾಗಿ ಬಿಎಂಆರ್​ಸಿಎಲ್​​ನ (BMRCL) ಈ ರೂಲ್ಸ್​ನಿಂದ ಪ್ರಯಾಣಿಕರು ದಂಗಾಗಿದ್ದಾರೆ.

ಮೊಬೈಲ್​​ನಲ್ಲಿ ಚಾರ್ಜ್ ಇಲ್ಲದ ಕಾರಣ ಮೆಟ್ರೋ ಸ್ಟೇಷನ್​​ನಲ್ಲಿ ಪ್ರಯಾಣಿಕ‌ರೊಬ್ಬರು ಚಾರ್ಜ್ ಹಾಕಿಕೊಂಡಿದ್ದಾರೆ. 5 ನಿಮಿಷ ಚಾರ್ಜ್ ಬಳಿಕ ಪ್ರಯಾಣಕ್ಕೆ ಮುಂದಾದಾಗ ದಂಡ ಕಟ್ಟುವಂತೆ ಮೆಟ್ರೋ ಸಿಬ್ಬಂದಿಗಳಿಂದ ಕಿರಿಕ್ ಮಾಡಲಾಗಿದೆ. 5 ನಿಮಿಷ ಹೆಚ್ಚಿಗೆ ಇದ್ದೀಯಾ ದಂಡ ಕಟ್ಟು ಎಂದಿದ್ದಾರೆ.

ಇದನ್ನೂ ಓದಿ: ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋದಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ

ಮಳೆ ಇದೆ, ಚಾರ್ಜ್ ಇರಲಿಲ್ಲ ಹೀಗಾಗಿ ಲೇಟ್ ಆಯ್ತು ಅಂದರೂ ಮೆಟ್ರೋ ಸಿಬ್ಬಂದಿಗಳು ಮಾತ್ರ ಡೋಂಟ್ ಕೇರ್ ಎಂದಿದ್ದಾರೆ. ಸ್ಟೇಷನ್​​ನಲ್ಲಿ ಕೇವಲ 20 ನಿಮಿಷವಷ್ಟೇ ಇರಲು ಅನುಮತಿ. ಕೇವಲ 1 ನಿಮಿಷ ಹೆಚ್ಚಾದರೂ ದಂಡ ಪಾವತಿ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸೈಡ್ ಹಾಟ್ ಸ್ಪಾಟ್ ಆಗ್ತಿದ್ಯಾ ನಮ್ಮ ಮೆಟ್ರೋ? ಮೂರು ತಿಂಗಳಲ್ಲಿ ಐದು ಘಟನೆ

ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಡೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೂಲ್ಸ್ ಮೆಟ್ರೋ ಆರಂಭವಾದಗಿನಿಂದಲೂ ಇದೆ. ಈಗ ಹೊಸದಾಗಿ ಮಾಡಿದ ರೂಲ್ಸ್ ಅಲ್ಲ ಇದು. ಟೋಕನ್ ತೆಗೆದುಕೊಂಡು ಮೆಟ್ರೋ ಸ್ಟೇಷನ್​​ನಲ್ಲಿ ಗಂಟೆಗಟ್ಟಲೇ ಟೈಮ್ ಪಾಸ್ ಮಾಡಬಾರದು, ಸಹ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಈ ರೂಲ್ಸ್ ಮಾಡಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sat, 11 May 24

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ