AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ

ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ನಡೆದಿದೆ.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
Kiran Surya
| Edited By: |

Updated on:May 11, 2024 | 7:09 PM

Share

ಬೆಂಗಳೂರು, ಮೇ 11: ನಮ್ಮ ಮೆಟ್ರೋ (Namma Metro) ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ಇತ್ತೀಚೆಗೆ ರಾತ್ರಿ 9:55 ಕ್ಕೆ ವಿಜಯನಗರ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಹೀಗಾಗಿ ಬಿಎಂಆರ್​ಸಿಎಲ್​​ನ (BMRCL) ಈ ರೂಲ್ಸ್​ನಿಂದ ಪ್ರಯಾಣಿಕರು ದಂಗಾಗಿದ್ದಾರೆ.

ಮೊಬೈಲ್​​ನಲ್ಲಿ ಚಾರ್ಜ್ ಇಲ್ಲದ ಕಾರಣ ಮೆಟ್ರೋ ಸ್ಟೇಷನ್​​ನಲ್ಲಿ ಪ್ರಯಾಣಿಕ‌ರೊಬ್ಬರು ಚಾರ್ಜ್ ಹಾಕಿಕೊಂಡಿದ್ದಾರೆ. 5 ನಿಮಿಷ ಚಾರ್ಜ್ ಬಳಿಕ ಪ್ರಯಾಣಕ್ಕೆ ಮುಂದಾದಾಗ ದಂಡ ಕಟ್ಟುವಂತೆ ಮೆಟ್ರೋ ಸಿಬ್ಬಂದಿಗಳಿಂದ ಕಿರಿಕ್ ಮಾಡಲಾಗಿದೆ. 5 ನಿಮಿಷ ಹೆಚ್ಚಿಗೆ ಇದ್ದೀಯಾ ದಂಡ ಕಟ್ಟು ಎಂದಿದ್ದಾರೆ.

ಇದನ್ನೂ ಓದಿ: ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋದಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ

ಮಳೆ ಇದೆ, ಚಾರ್ಜ್ ಇರಲಿಲ್ಲ ಹೀಗಾಗಿ ಲೇಟ್ ಆಯ್ತು ಅಂದರೂ ಮೆಟ್ರೋ ಸಿಬ್ಬಂದಿಗಳು ಮಾತ್ರ ಡೋಂಟ್ ಕೇರ್ ಎಂದಿದ್ದಾರೆ. ಸ್ಟೇಷನ್​​ನಲ್ಲಿ ಕೇವಲ 20 ನಿಮಿಷವಷ್ಟೇ ಇರಲು ಅನುಮತಿ. ಕೇವಲ 1 ನಿಮಿಷ ಹೆಚ್ಚಾದರೂ ದಂಡ ಪಾವತಿ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸೈಡ್ ಹಾಟ್ ಸ್ಪಾಟ್ ಆಗ್ತಿದ್ಯಾ ನಮ್ಮ ಮೆಟ್ರೋ? ಮೂರು ತಿಂಗಳಲ್ಲಿ ಐದು ಘಟನೆ

ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಡೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೂಲ್ಸ್ ಮೆಟ್ರೋ ಆರಂಭವಾದಗಿನಿಂದಲೂ ಇದೆ. ಈಗ ಹೊಸದಾಗಿ ಮಾಡಿದ ರೂಲ್ಸ್ ಅಲ್ಲ ಇದು. ಟೋಕನ್ ತೆಗೆದುಕೊಂಡು ಮೆಟ್ರೋ ಸ್ಟೇಷನ್​​ನಲ್ಲಿ ಗಂಟೆಗಟ್ಟಲೇ ಟೈಮ್ ಪಾಸ್ ಮಾಡಬಾರದು, ಸಹ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಈ ರೂಲ್ಸ್ ಮಾಡಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sat, 11 May 24

Follow Us
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಅರ್ಜುನ್ ತೆಂಡೂಲ್ಕರ್ ಯಾರ್ಕರ್​ಗೆ LSG ಬ್ಯಾಟರ್​ಗಳು ತಬ್ಬಿಬ್ಬು..!
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಬಸವಜಯಮೃತ್ಯುಂಜಯ ಸ್ವಾಮೀಜಿ ಬಗ್ಗೆ ಕೈ ಶಾಸಕ ಸ್ಫೋಟಕ ಹೇಳಿಕೆ
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ಸಿಎಂ ಕುರ್ಚಿ ವಿವಾದ: ಸಚಿವ ಜಮೀರ್​​ ಹೇಳಿಕೆಗೆ ಡಿಕೆಶಿ ಕೌಂಟರ್​​
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ವಾಷಿಂಗ್ ಮಷಿನ್ ಒಳಗೆ ಬೆಚ್ಚಗೆ ಮಲಗಿತ್ತು ಹಾವು! ಆಮೇಲೇನಾಯ್ತು ನೋಡಿ
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ... ಬಿದ್ದು ಬಿದ್ದು ನಕ್ಕ RCB ಆಟಗಾರರು
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಅವಕಾಶ ಸಿಕ್ತು ಎಂದ ಸ್ನೇಹಮಯಿ ಕೃಷ್ಣ!
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
Video: ಆನೇಕಲ್ ದೊಡ್ಡಕೆರೆಯಲ್ಲಿ ಬೀಡುಬಿಟ್ಟ ಗಜಪಡೆ
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಇಂಡಕ್ಷನ್​ಗೆ ಡಿಮಾಂಡ್: ಪೀಣ್ಯದಲ್ಲಿ ಉತ್ಪಾದನೆ ಹೆಚ್ಚಳ, ಸಿಬ್ಬಂದಿಗೆ ಓಟಿ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
ಹೆಲ್ಮೆಟ್ ಧರಿಸಿ ಬಂದು ಗ್ಯಾಸ್ ಸಿಲಿಂಡರ್ ಎಗರಿಸಿದ ಚಾಲಾಕಿ ಕಳ್ಳ!
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ
120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ