AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ

ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ನಡೆದಿದೆ.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
ಕಿರಣ್​ ಸೂರ್ಯ
| Edited By: |

Updated on:May 11, 2024 | 7:09 PM

Share

ಬೆಂಗಳೂರು, ಮೇ 11: ನಮ್ಮ ಮೆಟ್ರೋ (Namma Metro) ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ಇತ್ತೀಚೆಗೆ ರಾತ್ರಿ 9:55 ಕ್ಕೆ ವಿಜಯನಗರ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಹೀಗಾಗಿ ಬಿಎಂಆರ್​ಸಿಎಲ್​​ನ (BMRCL) ಈ ರೂಲ್ಸ್​ನಿಂದ ಪ್ರಯಾಣಿಕರು ದಂಗಾಗಿದ್ದಾರೆ.

ಮೊಬೈಲ್​​ನಲ್ಲಿ ಚಾರ್ಜ್ ಇಲ್ಲದ ಕಾರಣ ಮೆಟ್ರೋ ಸ್ಟೇಷನ್​​ನಲ್ಲಿ ಪ್ರಯಾಣಿಕ‌ರೊಬ್ಬರು ಚಾರ್ಜ್ ಹಾಕಿಕೊಂಡಿದ್ದಾರೆ. 5 ನಿಮಿಷ ಚಾರ್ಜ್ ಬಳಿಕ ಪ್ರಯಾಣಕ್ಕೆ ಮುಂದಾದಾಗ ದಂಡ ಕಟ್ಟುವಂತೆ ಮೆಟ್ರೋ ಸಿಬ್ಬಂದಿಗಳಿಂದ ಕಿರಿಕ್ ಮಾಡಲಾಗಿದೆ. 5 ನಿಮಿಷ ಹೆಚ್ಚಿಗೆ ಇದ್ದೀಯಾ ದಂಡ ಕಟ್ಟು ಎಂದಿದ್ದಾರೆ.

ಇದನ್ನೂ ಓದಿ: ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋದಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ

ಮಳೆ ಇದೆ, ಚಾರ್ಜ್ ಇರಲಿಲ್ಲ ಹೀಗಾಗಿ ಲೇಟ್ ಆಯ್ತು ಅಂದರೂ ಮೆಟ್ರೋ ಸಿಬ್ಬಂದಿಗಳು ಮಾತ್ರ ಡೋಂಟ್ ಕೇರ್ ಎಂದಿದ್ದಾರೆ. ಸ್ಟೇಷನ್​​ನಲ್ಲಿ ಕೇವಲ 20 ನಿಮಿಷವಷ್ಟೇ ಇರಲು ಅನುಮತಿ. ಕೇವಲ 1 ನಿಮಿಷ ಹೆಚ್ಚಾದರೂ ದಂಡ ಪಾವತಿ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸೈಡ್ ಹಾಟ್ ಸ್ಪಾಟ್ ಆಗ್ತಿದ್ಯಾ ನಮ್ಮ ಮೆಟ್ರೋ? ಮೂರು ತಿಂಗಳಲ್ಲಿ ಐದು ಘಟನೆ

ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಡೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೂಲ್ಸ್ ಮೆಟ್ರೋ ಆರಂಭವಾದಗಿನಿಂದಲೂ ಇದೆ. ಈಗ ಹೊಸದಾಗಿ ಮಾಡಿದ ರೂಲ್ಸ್ ಅಲ್ಲ ಇದು. ಟೋಕನ್ ತೆಗೆದುಕೊಂಡು ಮೆಟ್ರೋ ಸ್ಟೇಷನ್​​ನಲ್ಲಿ ಗಂಟೆಗಟ್ಟಲೇ ಟೈಮ್ ಪಾಸ್ ಮಾಡಬಾರದು, ಸಹ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಈ ರೂಲ್ಸ್ ಮಾಡಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sat, 11 May 24

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು