AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ

ನಮ್ಮ ಮೆಟ್ರೋ ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ನಡೆದಿದೆ.

ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
ನಮ್ಮ ಮೆಟ್ರೋ ಪ್ರಯಾಣಿಕರೇ ಹುಷಾರ್: 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿದ್ರೆ ದಂಡ ಗ್ಯಾರಂಟಿ
Kiran Surya
| Edited By: |

Updated on:May 11, 2024 | 7:09 PM

Share

ಬೆಂಗಳೂರು, ಮೇ 11: ನಮ್ಮ ಮೆಟ್ರೋ (Namma Metro) ನಿಯಗಳಿಗೆ ಪ್ರಯಾಣಿಕರು ಕಂಗಾಲಾಗಿ ಹೋಗಿದ್ದಾರೆ. ತುಂಬಾ ರಶ್ ಇದೆ ಎಂದು ಮುಂದಿನ ಮೆಟ್ರೋ ಹತ್ತೋಣ ಅಂತ 20 ನಿಮಿಷಕ್ಕಿಂತ ಹೆಚ್ಚು ಕಾಲ ನಿಲ್ದಾಣದಲ್ಲಿ ಕಾಯುತ್ತಾ ಕುಳಿತರೆ ದಂಡ ಗ್ಯಾರಂಟಿ. ಇದೀಗಾ 5 ನಿಮಿಷ ಹೆಚ್ಚಿಗೆ ಮೆಟ್ರೋ ಸ್ಟೇಷಸ್​​ನಲ್ಲಿ ಇದ್ದಿದ್ದಕ್ಕೆ ಪ್ರಯಾಣಿಕರೊಬ್ಬರು ದಂಡ ಕಟ್ಟಿರುವಂತಹ ಘಟನೆ ಇತ್ತೀಚೆಗೆ ರಾತ್ರಿ 9:55 ಕ್ಕೆ ವಿಜಯನಗರ ಮೆಟ್ರೋ ಸ್ಟೇಷನ್​ನಲ್ಲಿ ನಡೆದಿದೆ. ಹೀಗಾಗಿ ಬಿಎಂಆರ್​ಸಿಎಲ್​​ನ (BMRCL) ಈ ರೂಲ್ಸ್​ನಿಂದ ಪ್ರಯಾಣಿಕರು ದಂಗಾಗಿದ್ದಾರೆ.

ಮೊಬೈಲ್​​ನಲ್ಲಿ ಚಾರ್ಜ್ ಇಲ್ಲದ ಕಾರಣ ಮೆಟ್ರೋ ಸ್ಟೇಷನ್​​ನಲ್ಲಿ ಪ್ರಯಾಣಿಕ‌ರೊಬ್ಬರು ಚಾರ್ಜ್ ಹಾಕಿಕೊಂಡಿದ್ದಾರೆ. 5 ನಿಮಿಷ ಚಾರ್ಜ್ ಬಳಿಕ ಪ್ರಯಾಣಕ್ಕೆ ಮುಂದಾದಾಗ ದಂಡ ಕಟ್ಟುವಂತೆ ಮೆಟ್ರೋ ಸಿಬ್ಬಂದಿಗಳಿಂದ ಕಿರಿಕ್ ಮಾಡಲಾಗಿದೆ. 5 ನಿಮಿಷ ಹೆಚ್ಚಿಗೆ ಇದ್ದೀಯಾ ದಂಡ ಕಟ್ಟು ಎಂದಿದ್ದಾರೆ.

ಇದನ್ನೂ ಓದಿ: ಸೆಲ್ಫಿ ಪ್ರಿಯರಿಗೆ ಗುಡ್ ನ್ಯೂಸ್: ನಮ್ಮ ಮೆಟ್ರೋದಲ್ಲಿ ಸೆಲ್ಫಿ ಪಾಯಿಂಟ್ ನಿರ್ಮಾಣ

ಮಳೆ ಇದೆ, ಚಾರ್ಜ್ ಇರಲಿಲ್ಲ ಹೀಗಾಗಿ ಲೇಟ್ ಆಯ್ತು ಅಂದರೂ ಮೆಟ್ರೋ ಸಿಬ್ಬಂದಿಗಳು ಮಾತ್ರ ಡೋಂಟ್ ಕೇರ್ ಎಂದಿದ್ದಾರೆ. ಸ್ಟೇಷನ್​​ನಲ್ಲಿ ಕೇವಲ 20 ನಿಮಿಷವಷ್ಟೇ ಇರಲು ಅನುಮತಿ. ಕೇವಲ 1 ನಿಮಿಷ ಹೆಚ್ಚಾದರೂ ದಂಡ ಪಾವತಿ ಮಾಡಲೇಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸುಸೈಡ್ ಹಾಟ್ ಸ್ಪಾಟ್ ಆಗ್ತಿದ್ಯಾ ನಮ್ಮ ಮೆಟ್ರೋ? ಮೂರು ತಿಂಗಳಲ್ಲಿ ಐದು ಘಟನೆ

ಸದ್ಯ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಡೆಗೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೂಲ್ಸ್ ಮೆಟ್ರೋ ಆರಂಭವಾದಗಿನಿಂದಲೂ ಇದೆ. ಈಗ ಹೊಸದಾಗಿ ಮಾಡಿದ ರೂಲ್ಸ್ ಅಲ್ಲ ಇದು. ಟೋಕನ್ ತೆಗೆದುಕೊಂಡು ಮೆಟ್ರೋ ಸ್ಟೇಷನ್​​ನಲ್ಲಿ ಗಂಟೆಗಟ್ಟಲೇ ಟೈಮ್ ಪಾಸ್ ಮಾಡಬಾರದು, ಸಹ ಪ್ರಯಾಣಿಕರಿಗೆ ತೊಂದರೆ ಆಗಬಾರದು ಎಂದು ಈ ರೂಲ್ಸ್ ಮಾಡಲಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:46 pm, Sat, 11 May 24

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು