AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ

ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ ಬಿಎಂಆರ್​ಸಿಎಲ್​ ಧನ್ಯವಾದ ತಿಳಿಸಿದೆ. ಜುಲೈ 6ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ - ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ಆ ಮೂಲಕ ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಂಆರ್​​ಸಿಎಲ್​ ಗುಡ್ ನ್ಯೂಸ್ ನೀಡಿದೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ರೈಲು ಸೇವೆ
Kiran Surya
| Edited By: |

Updated on:Jul 05, 2024 | 7:08 PM

Share

ಬೆಂಗಳೂರು, ಜುಲೈ 05: ಪ್ರಯಾಣಿಕರ ಒತ್ತಾಯದ ಮೇರೆಗೆ ನಾಳೆಯಿಂದಲೇ (ಜುಲೈ 06) ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ (metro) ರೈಲು ಸೇವೆ ಆರಂಭಿಸಲಿದೆ. ಆ ಮೂಲಕ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮೆಟ್ರೋ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಾಗಿ ಬಿಎಂಆರ್​ಸಿಎಲ್ (BMRCL)​ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ಮಾಡುತ್ತಿದ್ದವು. ನಾಳೆಯಿಂದಲೇ ಜಾರಿಗೆ ಬರುವಂತೆ 6 ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗಿದೆ. ಹಾಗಾಗಿ ಜುಲೈ 6 ರಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಿರ್ವಹಿಸಲಿವೆ.

ಪ್ರಯಾಣಿಕರ ಉತ್ತಮ ಪ್ರತಿಕ್ರಿಯೆ ಹಾಗೂ ನಿರಂತರ ಪ್ರೋತ್ಸಾಹಕ್ಕಾಗಿ ಬಿಎಂ ಆರ್​ಸಿಎಲ್​ ಧನ್ಯವಾದ ತಿಳಿಸಿದೆ. ಜುಲೈ 6ರಿಂದ ಜಾರಿಗೆ ಬರುವಂತೆ ನೇರಳ ಮಾರ್ಗದಲ್ಲಿ ಮೆಟ್ರೋ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದ್ದು ನಾಡಪ್ರಭು ಕೆಂಪೇಗೌಡ ನಿಲ್ದಾಣ – ಮೆಜೆಸ್ಟಿಕ್‌ನಿಂದ ಹೆಚ್ಚುವರಿ ರೈಲು ಸೇವೆಗಳನ್ನು ಒದಗಿಸಲಾಗುತ್ತಿದೆ. ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಿಂದ ಪ್ರಸ್ತುತ 9 ರೈಲುಗಳ ಬದಲಾಗಿ ಹೆಚ್ಚುವರಿಯಾಗಿ 15 ರೈಲುಗಳನ್ನು ಪ್ರಯಾಣಿಕರ ಸೇವೆಗೆ ಒದಗಿಸಲಾಗುತ್ತಿದೆ. ಈ ಹದಿನೈದು ರೈಲುಗಳಲ್ಲಿ ಹತ್ತು ರೈಲುಗಳು ಪಟ್ಟಂದೂರು ಅಗ್ರಹಾರದ (ಐಟಿಪಿಎಲ್) ವರೆಗೆ, ನಾಲ್ಕು ರೈಲು ವೈಟ್‌ ಫೀಲ್ಡ್ ಮತ್ತು ಒಂದು ರೈಲು ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಸಂಚರಿಸಲಿವೆ.

ನಮ್ಮ ಮೆಟ್ರೋ ಟ್ವೀಟ್​ 

ಅದರಂತೆ, ಬೆಳಗಿನ ಸಮಯದಲ್ಲಿ ರೈಲುಗಳು ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ 8.48, 8.58, 9.08, 9.18, 9.29, 9.39, 9.50, 10.00, 10.11, 10.21, 10.39, 10.50, 11.00, 11.22 ಪೂರ್ವಕ್ಕೆ ಹೊರಡುತ್ತವೆ. ಇದಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ಯಾಣ-ಮೆಜೆಸ್ಟಿಕ್‌ನಲ್ಲಿ 3.3 ನಿಮಿಷಗಳಲ್ಲಿ ಬೆಳಿಗ್ಗೆ 10.25 ಗಂಟೆಯವರೆಗೆ ನಿಯಮಿತವಾಗಿ ಹಾದುಹೋಗುವ ರೈಲುಗಳು ಸಹ ಲಭ್ಯವಿರುತ್ತವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಡೆಂಗ್ಯೂ ಹರಡುವಿಕೆ ನಿಯಂತ್ರಣಕ್ಕೆ ಅಖಾಡಕ್ಕಿಳಿದ ನಮ್ಮ ಮೆಟ್ರೋ ಸಿಬ್ಬಂದಿ!

ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ಪ್ರಸ್ತುತ ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಕೊನೆಗೊಳ್ಳುವ 14 ರೈಲುಗಳಲ್ಲಿ, 6 ರೈಲುಗಳನ್ನು ಪಟ್ಟಂದೂರು ಅಗ್ರಹಾರ (ಐಟಿಪಿಎಲ್)/ ವೈಟ್ ಫೀಲ್ಡ್ ವರೆಗೆ ವಿಸ್ತರಿಸಲಾಗಿದೆ. ಗರುಡಾಚಾರ್ ಪಾಳ್ಯ ಮೆಟ್ರೋ ನಿಲ್ದಾಣದಲ್ಲಿ ಇಳಿಯುವ ಪ್ರಯಾಣಿಕರಿಗೆ ಪಟ್ಟಂದೂರು ಅಗ್ರಹಾರ (ಐಟಿಪಿಎಲ್) ಕಡೆಗೆ ಪ್ರಯಾಣಿಸಲು ಮುಂದಿನ ರೈಲು 3.5 ನಿಮಿಷಗಳಿಗೊಮ್ಮೆ ಮೆಟ್ರೋ ಲಭ್ಯವಿರುತ್ತದೆ.

ಇದನ್ನೂ ಓದಿ: ಚಾಲಕರಹಿತ ಮೆಟ್ರೋ ರೈಲಿನ ಟ್ರಯಲ್ ರನ್ ಯಶಸ್ವಿ; ಶೀಘ್ರದಲ್ಲೇ ಮೆಟ್ರೋ ಬಹು ನಿರೀಕ್ಷಿತ ಹಳದಿ ಲೇನ್ ಉದ್ಘಾಟನೆ

ಪ್ರಯಾಣಿಕರ ಅನುಕೂಲಕ್ಕಾಗಿ 5 ನಿಮಿಷಗಳ ಆವರ್ತನದಲ್ಲಿ ಬೈಯಪ್ಪನಹಳ್ಳಿಯಿಂದ ಸಂಜೆ 4:40 ರ ಬದಲಿಗೆ 4:20 ಕ್ಕೆ ಮೈಸೂರು ರಸ್ತೆ ನಿಲ್ದಾಣದ ಕಡೆಗೆ ಪ್ರಾರಂಭವಾಗಲಿದೆ. ಹಸಿರು ಮಾರ್ಗದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸಾರ್ವಜನಿಕರು ತಮ್ಮ ಅನುಕೂಲಕರ ಪ್ರಯಾಣಕ್ಕಾಗಿ ಮೇಲಿನ ಬದಲಾವಣೆಯನ್ನು ಗಮನಿಸಿ ಪ್ರಯಾಣಿಸಲು ಕೋರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:55 pm, Fri, 5 July 24

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ