AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ

ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ತೆರವಿಗೆ ಬಿಬಿಎಂಪಿ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ತೆರವಿಗೆ ಧಾವಿಸಲಿದೆ. ಇದಕ್ಕಾಗಿ ಬಿಬಿಎಂಪಿಯಿಂದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ವಾಟ್ಸಾಪ್​ನಲ್ಲೇ ದೂರು ನೀಡಬಹುದಾಗಿದೆ. ವಲಯವಾರು ಅರಣ್ಯಾಧಿಕಾರಿಗಳ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ದೂರು ನೀಡಿದ ಕೂಡಲೇ ಪಾಲಿಕೆ ಸಿಬ್ಬಂದಿಗಳು ಬಂದು ತೆರವು ಮಾಡುತ್ತಾರೆ. 

ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ
ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ
Shivaraj
| Edited By: |

Updated on: May 17, 2024 | 9:36 PM

Share

ಬೆಂಗಳೂರು, ಮೇ 17: ನಗರದಲ್ಲಿ ಕೆಲ ದಿನಗಳಿಂದ ಮಳೆರಾಯ (Rain) ಹಗಲು ರಾತ್ರಿಯೆನ್ನದೇ ಆರ್ಭಟಿಸಿದ್ದಾನೆ. ಮಳೆಯಿಂದಾಗಿ ಈಗಾಗಲೇ ನಗರದ ಹಲವೆಡೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಸಾಕಷ್ಟು ಮರಗಳು ಧರೆಗುರುಳಿವೆ. ಹೀಗಾಗಿ ಈ ನಿಟ್ಟಿನಲ್ಲಿ ಟಿವಿ9 ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ಬಗ್ಗೆ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತಿರುವ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ ಮಾಡಿದೆ.

ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ತೆರವಿಗೆ ಬಿಬಿಎಂಪಿ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ತೆರವಿಗೆ ಧಾವಿಸಲಿದೆ. ಇದಕ್ಕಾಗಿ ಬಿಬಿಎಂಪಿಯಿಂದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ವಾಟ್ಸಾಪ್​ನಲ್ಲೇ ದೂರು ನೀಡಬಹುದಾಗಿದೆ.

ಇದನ್ನೂ ಓದಿ: ಮಳೆಗಾಲದ ವೇಳೆ ಧರೆಗುರುಳುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಳನ್ನು ನಿಯೋಜಿಸಿದ ಬಿಬಿಎಂಪಿ

ವಲಯವಾರು ಅರಣ್ಯಾಧಿಕಾರಿಗಳ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದ್ದು,  ಆ ಮೂಲಕ ಅಪಾಯದ ಸ್ಥಿತಿಯಲ್ಲಿರುವ ಮರ ಫೋಟೋ ಕಳಿಸಬಹುದು. ದೂರು ನೀಡಿದ ಕೂಡಲೇ ಪಾಲಿಕೆ ಸಿಬ್ಬಂದಿಗಳು ಬಂದು ತೆರವು ಮಾಡುತ್ತಾರೆ.

ಬಿಬಿಎಂಪಿಯಿಂದ ಸಹಾಯವಾಣಿ ಹೀಗಿದೆ.

  • ಪೂರ್ವ ವಲಯ-9380090027
  • ಪಶ್ಚಿಮ ವಲಯ-9449659252
  • ದಕ್ಷಿಣ ವಲಯ-9480685039
  • ದಾಸರಹಳ್ಳಿ-9164042566
  • ಬೊಮ್ಮನಹಳ್ಳಿ ವಲಯ-9580685399/9480685539
  • ಯಲಹಂಕ ವಲಯ-9164042566/9483139438
  • ರಾಜರಾಜೇಶ್ವರಿನಗರ ವಲಯ-7760553545/9880516322
  • ಮಹದೇವಪುರ ವಲಯ-8147276414/9480685541

39 ಮರ ಕಟಾವು ತಂಡಗಳ ನಿಯೋಜನೆ

ಪಾಲಿಕೆ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಮರ ಕಟಾವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದರ ಜೊತೆಗೆ ತುರ್ತಾಗಿ ಮರಗಳನ್ನು ತೆರವುಗೊಳಿಸುವ ಸಲುವಾಗಿ ಹೆಚ್ಚುವರಿಯಾಗಿ 11 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ನೀಡಲಿದೆ ಸೆನ್ಸರ್​​​: ತಂತ್ರಜ್ಞಾನದ ಮೊರೆಹೋದ ಬಿಬಿಎಂಪಿ

ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ. ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರೆ ಸಲಕರಣೆಗಳಿರಲಿವೆ. ಜೊತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗಾಗಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ
ತಮಿಳುನಾಡಿನಲ್ಲಿ ಡಿಎಂಕೆ ಬದಲು ಎಐಎಡಿಎಂಕೆಯನ್ನು ಹೊಗಳಿದ ರಾಹುಲ್ ಗಾಂಧಿ