AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ

ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ತೆರವಿಗೆ ಬಿಬಿಎಂಪಿ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ತೆರವಿಗೆ ಧಾವಿಸಲಿದೆ. ಇದಕ್ಕಾಗಿ ಬಿಬಿಎಂಪಿಯಿಂದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ವಾಟ್ಸಾಪ್​ನಲ್ಲೇ ದೂರು ನೀಡಬಹುದಾಗಿದೆ. ವಲಯವಾರು ಅರಣ್ಯಾಧಿಕಾರಿಗಳ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದೆ. ದೂರು ನೀಡಿದ ಕೂಡಲೇ ಪಾಲಿಕೆ ಸಿಬ್ಬಂದಿಗಳು ಬಂದು ತೆರವು ಮಾಡುತ್ತಾರೆ. 

ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ
ಟಿವಿ9ನಲ್ಲಿ ವರದಿ ಬಳಿಕ ಎಚ್ಚೆತ್ತ ಬಿಬಿಎಂಪಿ: ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ
Shivaraj
| Updated By: ಗಂಗಾಧರ​ ಬ. ಸಾಬೋಜಿ|

Updated on: May 17, 2024 | 9:36 PM

Share

ಬೆಂಗಳೂರು, ಮೇ 17: ನಗರದಲ್ಲಿ ಕೆಲ ದಿನಗಳಿಂದ ಮಳೆರಾಯ (Rain) ಹಗಲು ರಾತ್ರಿಯೆನ್ನದೇ ಆರ್ಭಟಿಸಿದ್ದಾನೆ. ಮಳೆಯಿಂದಾಗಿ ಈಗಾಗಲೇ ನಗರದ ಹಲವೆಡೆ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಸಾಕಷ್ಟು ಮರಗಳು ಧರೆಗುರುಳಿವೆ. ಹೀಗಾಗಿ ಈ ನಿಟ್ಟಿನಲ್ಲಿ ಟಿವಿ9 ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ಬಗ್ಗೆ ವರದಿ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತಿರುವ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಅಧಿಕಾರಿಗಳು ಮರ, ರೆಂಬೆ, ಕೊಂಬೆ ತೆರವಿಗೆ ಸಹಾಯವಾಣಿ ಬಿಡುಗಡೆ ಮಾಡಿದೆ.

ಅಪಾಯದ ಸ್ಥಿತಿಯಲ್ಲಿರುವ ಮರ, ರೆಂಬೆ, ಕೊಂಬೆ ತೆರವಿಗೆ ಬಿಬಿಎಂಪಿ ಮುಂದಾಗಿದ್ದು, ಸಾರ್ವಜನಿಕರು ದೂರು ನೀಡಿದ ತಕ್ಷಣ ತೆರವಿಗೆ ಧಾವಿಸಲಿದೆ. ಇದಕ್ಕಾಗಿ ಬಿಬಿಎಂಪಿಯಿಂದ ಸಹಾಯವಾಣಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ವಾಟ್ಸಾಪ್​ನಲ್ಲೇ ದೂರು ನೀಡಬಹುದಾಗಿದೆ.

ಇದನ್ನೂ ಓದಿ: ಮಳೆಗಾಲದ ವೇಳೆ ಧರೆಗುರುಳುವ ಮರದ ರೆಂಬೆ, ಕೊಂಬೆಗಳನ್ನು ತೆರವುಗೊಳಿಸಲು 39 ತಂಡಳನ್ನು ನಿಯೋಜಿಸಿದ ಬಿಬಿಎಂಪಿ

ವಲಯವಾರು ಅರಣ್ಯಾಧಿಕಾರಿಗಳ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಲಾಗಿದ್ದು,  ಆ ಮೂಲಕ ಅಪಾಯದ ಸ್ಥಿತಿಯಲ್ಲಿರುವ ಮರ ಫೋಟೋ ಕಳಿಸಬಹುದು. ದೂರು ನೀಡಿದ ಕೂಡಲೇ ಪಾಲಿಕೆ ಸಿಬ್ಬಂದಿಗಳು ಬಂದು ತೆರವು ಮಾಡುತ್ತಾರೆ.

ಬಿಬಿಎಂಪಿಯಿಂದ ಸಹಾಯವಾಣಿ ಹೀಗಿದೆ.

  • ಪೂರ್ವ ವಲಯ-9380090027
  • ಪಶ್ಚಿಮ ವಲಯ-9449659252
  • ದಕ್ಷಿಣ ವಲಯ-9480685039
  • ದಾಸರಹಳ್ಳಿ-9164042566
  • ಬೊಮ್ಮನಹಳ್ಳಿ ವಲಯ-9580685399/9480685539
  • ಯಲಹಂಕ ವಲಯ-9164042566/9483139438
  • ರಾಜರಾಜೇಶ್ವರಿನಗರ ವಲಯ-7760553545/9880516322
  • ಮಹದೇವಪುರ ವಲಯ-8147276414/9480685541

39 ಮರ ಕಟಾವು ತಂಡಗಳ ನಿಯೋಜನೆ

ಪಾಲಿಕೆ ವ್ಯಾಪ್ತಿಯಲ್ಲಿ 28 ವಿಧಾನಸಭಾ ಕ್ಷೇತ್ರಗಳಿದ್ದು, ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 28 ಮರ ಕಟಾವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಇದರ ಜೊತೆಗೆ ತುರ್ತಾಗಿ ಮರಗಳನ್ನು ತೆರವುಗೊಳಿಸುವ ಸಲುವಾಗಿ ಹೆಚ್ಚುವರಿಯಾಗಿ 11 ತಂಡಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮುಂಗಾರು ಮಳೆ ಪ್ರವಾಹ ಮುನ್ನೆಚ್ಚರಿಕೆ ನೀಡಲಿದೆ ಸೆನ್ಸರ್​​​: ತಂತ್ರಜ್ಞಾನದ ಮೊರೆಹೋದ ಬಿಬಿಎಂಪಿ

ಪ್ರತಿ ತಂಡದಲ್ಲೂ ಏಳು ಕಾರ್ಮಿಕರು, ಒಬ್ಬರು ಮೇಲ್ವಿಚಾರಕರು ಇರುತ್ತಾರೆ. ಮರಗಳನ್ನು ತೆರವುಗೊಳಿಸುವ ಅವಶ್ಯಕತೆಯಿರುವ ಗರಗಸ, ಕೊಂಬೆಗಳನ್ನು ತುಂಡರಿಸುವ ಯಂತ್ರ, ಹಾರೆ, ಹಗ್ಗ ಸೇರಿದಂತೆ ಇನ್ನಿತರೆ ಸಲಕರಣೆಗಳಿರಲಿವೆ. ಜೊತೆಗೆ ಕಟಾವು ಮಾಡಿದ ಮರದ ತುಂಡುಗಳ ಸಾಗಣೆಗಾಗಿ ವಾಹನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು