Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ: ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ

ಕರ್ನಾಟಕ ಸರ್ಕಾರವು ಪತ್ರಿಕಾ ವಿತರಕರಿಗಾಗಿರುವ ಕಲ್ಯಾಣ ಯೋಜನೆಯ ವಯೋಮಿತಿಯನ್ನು 70 ವರ್ಷಕ್ಕೆ ಹೆಚ್ಚಿಸಿದೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷರು ಅಭಿನಂದಿಸಿದ್ದಾರೆ. ಈಗಿನ ಹೆಚ್ಚಳ ಸಾವಿರಾರು ವಿತರಕರಿಗೆ ಅನುಕೂಲವಾಗಲಿದೆ.

ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ: ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ
ಪತ್ರಿಕಾ ವಿತರಕರ ವಯಸ್ಸಿನ ಮಿತಿ 70 ವರ್ಷಕ್ಕೆ ಹೆಚ್ಚಳ: ಸಿಎಂ ಮಾಧ್ಯಮ ಸಲಹೆಗಾರ ಪ್ರಭಾಕರ್‌ಗೆ ಅಭಿನಂದನೆ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 14, 2024 | 8:31 PM

ಬೆಂಗಳೂರು, ಡಿಸೆಂಬರ್​ 14: ಪತ್ರಿಕಾ ವಿತರಕರಿಗಾಗಿ ರೂಪಿಸಲಾಗಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ (kv prabhakar) ಅವರನ್ನು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಅವರು ಅಭಿನಂದಿಸಿದರು.

ಅಸಂಘಟಿತ ವಲಯದಲ್ಲಿರುವ ಪತ್ರಿಕಾ ವಿತರಕ ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯು ರೂಪಿಸಿರುವ ಯೋಜನೆಯ ವಯಸ್ಸಿನ ಮಿತಿಯನ್ನು ಈ ಮೊದಲು 16 ವರ್ಷದಿಂದ 60 ವರ್ಷಕ್ಕೆ ಮಾತ್ರ ಸೀಮಿತ ಮಾಡಲಾಗಿತ್ತು. ಇದರಿಂದ ಸಾವಿರಾರು ಪತ್ರಿಕಾ ವಿತರಕರು ಯೋಜನೆ ಪ್ರಯೋಜನೆ ಪಡೆಯಲಾಗದೆ ಸಮಸ್ಯೆಯಲ್ಲಿರುವುದನ್ನು ಗಮನಕ್ಕೆ ತಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಶಿವಾನಂದ ತಗಡೂರು ಹೇಳಿದ ಕೋವಿಡ್ ಕಥೆಗಳು ಕೃತಿಗೆ ಅಮ್ಮ ಪ್ರಶಸ್ತಿ ಪುರಸ್ಕಾರ

ಅಪಘಾತ ಪರಿಹಾರ ಮತ್ತು ವೈದ್ಯಕೀಯ ಸೌಲಭ್ಯ ಯೋಜನೆಯ ವಯಸ್ಸಿನ ಮಿತಿಯನ್ನು 70 ವರ್ಷಕ್ಕೆ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದ್ದು ಸ್ವಾಗತಾರ್ಹವಾಗಿದ್ದು, ಅದಕ್ಕಾಗಿ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕೆ.ವಿ.ಪ್ರಭಾಕರ್ ಅವರು, ಪತ್ರಿಕಾ ವಿತರಕರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇದ್ದು, ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಕಾರಣಕರ್ತರಾಗಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಾವಣಗೆರೆ ಸಮ್ಮೇಳನ ಯಶಸ್ವಿಗೆ ಸಾಂಘಿಕ ಪ್ರಯತ್ನ ಕಾರಣ: ಸರ್ವರಿಗೂ ಧನ್ಯವಾದ ತಿಳಿಸಿದ ಶಿವಾನಂದ ತಗಡೂರು

ಯೋಜನೆಯಲ್ಲಿ ವಯಸ್ಸಿನ ಮಿತಿ ಸಮಸ್ಯೆ ಆಗುತ್ತಿರುವ ಬಗ್ಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ತಮಗೆ ಪತ್ರ ಬರೆದು ಗಮನ ಸೆಳೆದಿದ್ದರಿಂದ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ಪತ್ರಿಕಾ ವಿತರಕರಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಸರ್ಕಾರ ಆದೇಶ ಹೊರಡಿಸಿದೆ ಎಂದು ಪ್ರಭಾಕರ್ ಅವರು ಹೇಳಿದ್ದಾರ. ಈ ಸಂದರ್ಭದಲ್ಲಿ ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಸದಾಶಿವ ಶೆಣೈ, ಜಗದೀಶ್ ತಂಡ್ರೆ ಇದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.