AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಕ್ಕೆ ಇಡೀ ಬೆಂಗಳೂರಿಗೆ ಬೆಂಗಳೂರೇ ಬೆಚ್ಚಿಬಿದ್ದಿತ್ತು. ಕಣ್ಣು ತೆರೆದು ಬಿಡುವಷ್ಟರಲ್ಲೇ ಎಲ್ಲವೂ ಚೆಲ್ಲಾಪಿಲ್ಲಿಯಾಗಿದ್ದವು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಎನ್​ಐಎ ಅಧಿಕಾರಿಗಳು ವಿಶೇಷ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ
ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ವಿಶೇಷ ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಸಿದ NIA
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 09, 2024 | 5:22 PM

Share

ಬೆಂಗಳೂರು, ಸೆಪ್ಟೆಂಬರ್​​ 09: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​​ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್​ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಿದ್ದರು ಎಂದು ಎನ್​ಐಎ ವಿಶೇಷ ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಮಾರ್ಚ್ ಒಂದರಂದು ನಡೆದಿದ್ದ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣದ ತನಿಖೆ ಚುರುಕಾಗಿತ್ತು. ಟೋಪಿವಾಲನ ಬೆನ್ನತ್ತಿರುವ ಎನ್​ಐಎ, ದಿಕ್ಕು ದಿಕ್ಕಿನಲ್ಲೂ ತಲಾಶ್ ನಡೆಸಿದ್ದರು. ತನಿಖೆ ವೇಳೆ ಮುಸಾವಿರ್ ಹುಸೇನ್ ಶಾಜೀಬ್ ಎಂಬಾತ ಬಾಂಬ್ ಇಟ್ಟಿರಬಹುದು. ಆತನಿಗೆ ಅಬ್ದುಲ್ ಮತೀನ್ ತಾಹ ಸಹಾಯ ಮಾಡಿರುವ ಶಂಕೆ ವ್ಯಕ್ತ ವ್ಯಕ್ತವಾಗಿತ್ತು. ಈ ಇಬ್ಬರು ಐಸಿಸ್ ಹಾಗೂ ಅಲ್ ಹಿಂದ್ ಗ್ರೂಪ್​ನ ಘೋಷಿತ ಉಗ್ರರು. ಕ್ರಿಮಿಗಳ ಜತೆ ಇವ್ರಿಗೆ ಕನೆಕ್ಷನ್​ ಇರಬಹುದೆಂದು ಇಬ್ಬರನ್ನೂ ಎನ್​ಐಎ ವಶಕ್ಕೆ ಪಡೆದಿತ್ತು.

ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಬಿಸಿಬಿಸಿಯಾದ ಊಟವನ್ನ ಸವಿಯುತ್ತಿದ್ದರು. ಆದರೆ ಏಕಾಏಕಿ ಹೋಟೆಲ್​ನಲ್ಲಿ ಬಾಂಬ್​ ಸ್ಫೋಟಗೊಂಡಿತ್ತು. ಊಟ ಮಾಡ್ತಿದ್ದವರು ಬಿಟ್ಟು ಓಡಿದ್ದರು. ಹೋಟೆಲ್ ಸಿಬ್ಬಂದಿ ಫಾರುಖ್, ಅಮೇಜನ್ ಕಂಪನಿಯ ಸಿಬ್ಬಂದಿ ದೀಪಾಂಶು, ಸ್ವರ್ಣಾಂಬ, ಮೋಹನ್, ನಾಗಶ್ರೀ, ಮೋಮಿ, ಬಲರಾಮ್ ಕೃಷ್ಣನ್, ನವ್ಯಾ, ಶ್ರೀನಿವಾಸ್ ಗಾಯಗೊಂಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​; ಎನ್​ಐಎ ತಂಡದಿಂದ ಸ್ಥಳ ಮಹಜರು

ಇದ್ರಲ್ಲಿ ಸ್ವರ್ಣಾಂಬಗೆ 40 ಪರ್ಸೆಂಟ್ ಸುಟ್ಟಗಾಯಗಳಾಗಿದ್ದವು. ಸ್ಫೋಟದ ತೀವ್ರತೆಗೆ ಮಹಿಳೆ ವಿಲವಿಲ ಒದ್ದಾಡಿದ್ದರು. ಜೊತೆಗೆ 8ರಿಂದ 9 ಮಂದಿಗೆ ಗಂಭೀರಗಾಯವಾಗಿತ್ತು. ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಯ್ತು. ಓರ್ವನ ಸ್ಥಿತಿ ಚಿಂತಾಜನಕವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:46 pm, Mon, 9 September 24

Follow Us
ಪ್ರಜ್ವಲ್​ ಕುಮಾರ್ ಎನ್​ ವೈ
ಪ್ರಜ್ವಲ್​ ಕುಮಾರ್ ಎನ್​ ವೈ

2017 ಜೂನ್​ನಿಂದ ಟಿವಿ9 ಕನ್ನಡ ವಾಹಿನಿಯಲ್ಲಿ ಕ್ರೈಮ್ ವರದಿಗಾರನಾಗಿ ವೃತ್ತಿ. ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿ ಮಾಡುತಿದ್ದೇನೆ. ಮೂಲತಃ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನವನಾಗಿದ್ದು ಹಾಸನ ಮತ್ತು ತುಮಕೂರಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ನಂತರ ಒಂದು ವರ್ಷ ಜನಶ್ರೀ ಸುದ್ದಿ ವಾಹಿನಿಯಲ್ಲಿ ಕ್ರೈಮ್ ರಿಪೋರ್ಟರ್ ಆಗಿ ಕೆಲಸ ಮಾಡಿ ನಂತರ 2017 ರಿಂದ ಇಲ್ಲಿಯವರೆಗೆ ಟಿವಿ9 ನಲ್ಲಿ ಕೆಲಸ ಮಾಡುತಿದ್ದೇನೆ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ
ಪ್ರಕಾಶ್ ರಾಜ್ ವಿರುದ್ಧ ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಪ್ರತಿಭಟನೆ