AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಕ್ಕೆ ಇಡೀ ಬೆಂಗಳೂರಿಗೆ ಬೆಂಗಳೂರೇ ಬೆಚ್ಚಿಬಿದ್ದಿತ್ತು. ಕಣ್ಣು ತೆರೆದು ಬಿಡುವಷ್ಟರಲ್ಲೇ ಎಲ್ಲವೂ ಚೆಲ್ಲಾಪಿಲ್ಲಿಯಾಗಿದ್ದವು. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ವಿರುದ್ಧ ಎನ್​ಐಎ ಅಧಿಕಾರಿಗಳು ವಿಶೇಷ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ
ಬೆಂಗಳೂರು ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಕೇಸ್​: ವಿಶೇಷ ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಸಿದ NIA
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 09, 2024 | 5:22 PM

Share

ಬೆಂಗಳೂರು, ಸೆಪ್ಟೆಂಬರ್​​ 09: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ (Rameswaram Cafe) ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​​ಐಎ ಅಧಿಕಾರಿಗಳಿಂದ ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್​ಗೆ ಚಾರ್ಜ್​​ಶೀಟ್ ಸಲ್ಲಿಕೆ ಮಾಡಲಾಗಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

2024ರ ಜ.22ರಂದು ಅಯೋಧ್ಯೆಯಲ್ಲಿ ನಡೆದಿದ್ದ ಪ್ರಾಣಪ್ರತಿಷ್ಠಾಪನೆ ಸಮಾರಂಭ ದಿನದಂದು ಕರ್ನಾಟಕದ ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಪ್ಲ್ಯಾನ್​ ವಿಫಲವಾದ ಹಿನ್ನೆಲೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಲು ಪ್ಲ್ಯಾನ್​ ಮಾಡಿದ್ದರು. ಅದರಂತೆ ಆರೋಪಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಸ್ಫೋಟಿಸಿದ್ದರು ಎಂದು ಎನ್​ಐಎ ವಿಶೇಷ ಕೋರ್ಟ್​ಗೆ ಸಲ್ಲಿಸಿರುವ ಚಾರ್ಜ್​​ಶೀಟ್​​​ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ರಾಮೇಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಶಂಕಿತ ಉಗ್ರನಿಗೆ ತೀರ್ಥಹಳ್ಳಿಯ ಲಿಂಕ್ ಇದೆ! ಪಿನ್​ ಟು ಪಿನ್ ಡೀಟೇಲ್ಸ್​ ಇಲ್ಲಿದೆ

ಮಾರ್ಚ್ ಒಂದರಂದು ನಡೆದಿದ್ದ ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣದ ತನಿಖೆ ಚುರುಕಾಗಿತ್ತು. ಟೋಪಿವಾಲನ ಬೆನ್ನತ್ತಿರುವ ಎನ್​ಐಎ, ದಿಕ್ಕು ದಿಕ್ಕಿನಲ್ಲೂ ತಲಾಶ್ ನಡೆಸಿದ್ದರು. ತನಿಖೆ ವೇಳೆ ಮುಸಾವಿರ್ ಹುಸೇನ್ ಶಾಜೀಬ್ ಎಂಬಾತ ಬಾಂಬ್ ಇಟ್ಟಿರಬಹುದು. ಆತನಿಗೆ ಅಬ್ದುಲ್ ಮತೀನ್ ತಾಹ ಸಹಾಯ ಮಾಡಿರುವ ಶಂಕೆ ವ್ಯಕ್ತ ವ್ಯಕ್ತವಾಗಿತ್ತು. ಈ ಇಬ್ಬರು ಐಸಿಸ್ ಹಾಗೂ ಅಲ್ ಹಿಂದ್ ಗ್ರೂಪ್​ನ ಘೋಷಿತ ಉಗ್ರರು. ಕ್ರಿಮಿಗಳ ಜತೆ ಇವ್ರಿಗೆ ಕನೆಕ್ಷನ್​ ಇರಬಹುದೆಂದು ಇಬ್ಬರನ್ನೂ ಎನ್​ಐಎ ವಶಕ್ಕೆ ಪಡೆದಿತ್ತು.

ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಗ್ರಾಹಕರು ಬಿಸಿಬಿಸಿಯಾದ ಊಟವನ್ನ ಸವಿಯುತ್ತಿದ್ದರು. ಆದರೆ ಏಕಾಏಕಿ ಹೋಟೆಲ್​ನಲ್ಲಿ ಬಾಂಬ್​ ಸ್ಫೋಟಗೊಂಡಿತ್ತು. ಊಟ ಮಾಡ್ತಿದ್ದವರು ಬಿಟ್ಟು ಓಡಿದ್ದರು. ಹೋಟೆಲ್ ಸಿಬ್ಬಂದಿ ಫಾರುಖ್, ಅಮೇಜನ್ ಕಂಪನಿಯ ಸಿಬ್ಬಂದಿ ದೀಪಾಂಶು, ಸ್ವರ್ಣಾಂಬ, ಮೋಹನ್, ನಾಗಶ್ರೀ, ಮೋಮಿ, ಬಲರಾಮ್ ಕೃಷ್ಣನ್, ನವ್ಯಾ, ಶ್ರೀನಿವಾಸ್ ಗಾಯಗೊಂಡಿದ್ದರು.

ಇದನ್ನೂ ಓದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಪೊಲೀಸ್ ಬಿಗಿ ಬಂದೋಬಸ್ತ್​; ಎನ್​ಐಎ ತಂಡದಿಂದ ಸ್ಥಳ ಮಹಜರು

ಇದ್ರಲ್ಲಿ ಸ್ವರ್ಣಾಂಬಗೆ 40 ಪರ್ಸೆಂಟ್ ಸುಟ್ಟಗಾಯಗಳಾಗಿದ್ದವು. ಸ್ಫೋಟದ ತೀವ್ರತೆಗೆ ಮಹಿಳೆ ವಿಲವಿಲ ಒದ್ದಾಡಿದ್ದರು. ಜೊತೆಗೆ 8ರಿಂದ 9 ಮಂದಿಗೆ ಗಂಭೀರಗಾಯವಾಗಿತ್ತು. ತಕ್ಷಣವೇ ಎಲ್ಲರನ್ನೂ ಆಸ್ಪತ್ರೆಗೆ ರವಾನಿಸಲಾಯ್ತು. ಓರ್ವನ ಸ್ಥಿತಿ ಚಿಂತಾಜನಕವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:46 pm, Mon, 9 September 24

Follow Us
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಏರ್ ಇಂಡಿಯಾ ವಿಮಾನ ಹಾರ್ಡ್​ ಲ್ಯಾಂಡಿಂಗ್, ಪುಡಿ ಪುಡಿಯಾದ ಚಕ್ರ
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಗ್ಯಾಸ್ ನೋ ಸ್ಟಾಕ್: ಬೆಂಗಳೂರಿನಲ್ಲಿ ಬಂಕ್ ಬಂದ್, ಆಟೋದವರ ದುಡಿಮೆಗೂ ಕುತ್ತು
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ
ಯುಗಾದಿ ವರ್ಷ ಭವಿಷ್ಯ; ಈ ರಾಶಿಯವರು ಆರೋಗ್ಯದ ಬಗ್ಗೆ ಅತ್ಯಂತ ಜಾಗರೂಕರಾಗಿರಿ