AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ನೇ ವರ್ಷದ ಕೊನೆಯ ದಿನದಂದು ದಾಖಲೆಯ ಮದ್ಯ ಮಾರಾಟ: 18.85 ಕೋಟಿ ರೂ.‌ ಮದ್ಯ ಬಿಕರಿ

2024ರ ಹೊಸ ವರ್ಷವನ್ನ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. 2023ನೇ ವರ್ಷದ ಕೊನೆಯ ದಿನದಂದು ದಾಖಲೆ ಪ್ರಮಾಣದಲ್ಲಿ ಮದ್ಯ ವಹಿವಾಟು ಮಾಡಲಾಗಿದೆ. ರಾಜ್ಯದ 1031 ಎಂಎಸ್ಐಎಲ್​ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ 18.85 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 4.34 ಕೋಟಿ ರೂ. ಹೆಚ್ಚಳವಾಗಿದೆ.

2023ನೇ ವರ್ಷದ ಕೊನೆಯ ದಿನದಂದು ದಾಖಲೆಯ ಮದ್ಯ ಮಾರಾಟ: 18.85 ಕೋಟಿ ರೂ.‌ ಮದ್ಯ ಬಿಕರಿ
ಪ್ರಾತಿನಿಧಿಕ ಚಿತ್ರ
ಕಿರಣ್​ ಹನಿಯಡ್ಕ
| Edited By: |

Updated on: Jan 01, 2024 | 8:02 PM

Share

ಬೆಂಗಳೂರು, ಜನವರಿ 01: 2024ರ ಹೊಸ ವರ್ಷವನ್ನ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. 2023ನೇ ವರ್ಷದ ಕೊನೆಯ ದಿನದಂದು ದಾಖಲೆ ಪ್ರಮಾಣದಲ್ಲಿ ಮದ್ಯ (liquor) ವಹಿವಾಟು ಮಾಡಲಾಗಿದೆ. ಡಿ.31 ರಂದು ರಾಜ್ಯದ 1031 ಎಂಎಸ್ಐಎಲ್​ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ 18.85 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 4.34 ಕೋಟಿ ರೂ. ಹೆಚ್ಚಳವಾಗಿದೆ.

2022ರ ಡಿ. 31ರಂದು 14.51 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಆಗಿತ್ತು. 2022ರ ಡಿ. 31 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 1.35 ಕೋಟಿ ರೂ. ಮೊತ್ತದ ಮದ್ಯ ಮಾರಾಟವಾಗಿತ್ತು. ಬೇರೆ ರಾಜ್ಯದ ಎಲ್ಲಾ ಎಂಎಸ್ಐಎಲ್ ಮಳಿಗೆಗಳಿಂದ ಮದ್ಯ ಮಾರಾಟದ ವಹಿವಾಟು 8 ಕೋಟಿ‌ ರೂ. ಆಗಿತ್ತದೆ. ಈ ಭಾರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು 18.8 ಕೋಟಿ ರೂ.ಗೆ ಏರಿಕೆ ಆಗಿದೆ.

ಇದನ್ನೂ ಓದಿ: ಗ್ಯಾರಂಟಿ ನಷ್ಟ ಭರಿಸೋಕ್ಕೆ ಸರ್ಕಾರದಿಂದ ಹೊಸ ಪ್ಲಾನ್‌; ಮಾಲ್‌, ಸೂಪರ್‌ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟ

ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಎಂಎಸ್​ಐಎಲ್ ಮಳಿಗೆಯಲ್ಲಿ ಅತ್ಯಂತ ಹೆಚ್ಚು ಅಂದರೆ 11.66 ಲಕ್ಷ ರೂ. ಮದ್ಯ ಮಾರಾಟ ಮಾಡಲಾಗಿದೆ. ರಾಯಚೂರು ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ 9.96 ಲಕ್ಷ ರೂ. ಮೊತ್ತದ ಮದ್ಯ ಬಿಕರಿ ಆಗಿದ್ದು, ಜಿಲ್ಲಾವಾರು ಮಾರಾಟದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಅಂದರೆ 1.82 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ಬೆಂಗಳೂರು ಎಂಜಿ ರಸ್ತೆ ಬಂದ್, ಪಬ್​ಗಳ ಮುಂದೆ ಕ್ಯೂನಿಂತ ಜನರು

ನಿನ್ನೆ ಹೊಸ ವರ್ಷಾಚರಣೆ ಹಿನ್ನೆಲೆ ಚರ್ಚ್​ಸ್ಟ್ರೀಟ್​ನ ಬಹುತೇಕ ಪಬ್​ಗಳು ಹೌಸ್​ಫುಲ್​ ಆಗಿದ್ದವು. ಪಬ್​ಗಳ  ಮುಂದೆ ಗ್ರಾಹಕರು ಕ್ಯೂನಿಂತಿದ್ದರು. ಮಾಸ್ಕ್ ಧರಿಸಿ, ಮುಖ ಮುಚ್ಚಿಕೊಂಡು ಕೆಲವರು ಓಡಾಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Kiran Haniyadka
Kiran Haniyadka
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ