AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ನೇ ವರ್ಷದ ಕೊನೆಯ ದಿನದಂದು ದಾಖಲೆಯ ಮದ್ಯ ಮಾರಾಟ: 18.85 ಕೋಟಿ ರೂ.‌ ಮದ್ಯ ಬಿಕರಿ

2024ರ ಹೊಸ ವರ್ಷವನ್ನ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. 2023ನೇ ವರ್ಷದ ಕೊನೆಯ ದಿನದಂದು ದಾಖಲೆ ಪ್ರಮಾಣದಲ್ಲಿ ಮದ್ಯ ವಹಿವಾಟು ಮಾಡಲಾಗಿದೆ. ರಾಜ್ಯದ 1031 ಎಂಎಸ್ಐಎಲ್​ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ 18.85 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 4.34 ಕೋಟಿ ರೂ. ಹೆಚ್ಚಳವಾಗಿದೆ.

2023ನೇ ವರ್ಷದ ಕೊನೆಯ ದಿನದಂದು ದಾಖಲೆಯ ಮದ್ಯ ಮಾರಾಟ: 18.85 ಕೋಟಿ ರೂ.‌ ಮದ್ಯ ಬಿಕರಿ
ಪ್ರಾತಿನಿಧಿಕ ಚಿತ್ರ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 01, 2024 | 8:02 PM

Share

ಬೆಂಗಳೂರು, ಜನವರಿ 01: 2024ರ ಹೊಸ ವರ್ಷವನ್ನ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗಿದೆ. 2023ನೇ ವರ್ಷದ ಕೊನೆಯ ದಿನದಂದು ದಾಖಲೆ ಪ್ರಮಾಣದಲ್ಲಿ ಮದ್ಯ (liquor) ವಹಿವಾಟು ಮಾಡಲಾಗಿದೆ. ಡಿ.31 ರಂದು ರಾಜ್ಯದ 1031 ಎಂಎಸ್ಐಎಲ್​ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ 18.85 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ 4.34 ಕೋಟಿ ರೂ. ಹೆಚ್ಚಳವಾಗಿದೆ.

2022ರ ಡಿ. 31ರಂದು 14.51 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಆಗಿತ್ತು. 2022ರ ಡಿ. 31 ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ 1.35 ಕೋಟಿ ರೂ. ಮೊತ್ತದ ಮದ್ಯ ಮಾರಾಟವಾಗಿತ್ತು. ಬೇರೆ ರಾಜ್ಯದ ಎಲ್ಲಾ ಎಂಎಸ್ಐಎಲ್ ಮಳಿಗೆಗಳಿಂದ ಮದ್ಯ ಮಾರಾಟದ ವಹಿವಾಟು 8 ಕೋಟಿ‌ ರೂ. ಆಗಿತ್ತದೆ. ಈ ಭಾರಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರಂದು 18.8 ಕೋಟಿ ರೂ.ಗೆ ಏರಿಕೆ ಆಗಿದೆ.

ಇದನ್ನೂ ಓದಿ: ಗ್ಯಾರಂಟಿ ನಷ್ಟ ಭರಿಸೋಕ್ಕೆ ಸರ್ಕಾರದಿಂದ ಹೊಸ ಪ್ಲಾನ್‌; ಮಾಲ್‌, ಸೂಪರ್‌ ಮಾರ್ಕೆಟ್‌ನಲ್ಲೂ ಮದ್ಯ ಮಾರಾಟ

ರಾಯಚೂರಿನ ರೈಲ್ವೆ ನಿಲ್ದಾಣದ ಬಳಿ ಇರುವ ಎಂಎಸ್​ಐಎಲ್ ಮಳಿಗೆಯಲ್ಲಿ ಅತ್ಯಂತ ಹೆಚ್ಚು ಅಂದರೆ 11.66 ಲಕ್ಷ ರೂ. ಮದ್ಯ ಮಾರಾಟ ಮಾಡಲಾಗಿದೆ. ರಾಯಚೂರು ನಗರದ ಗಂಝ್ ರಸ್ತೆಯ ಮಳಿಗೆಯಲ್ಲಿ 9.96 ಲಕ್ಷ ರೂ. ಮೊತ್ತದ ಮದ್ಯ ಬಿಕರಿ ಆಗಿದ್ದು, ಜಿಲ್ಲಾವಾರು ಮಾರಾಟದಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಅಂದರೆ 1.82 ಕೋಟಿ ರೂ. ಮೊತ್ತದ ಮದ್ಯ ಮಾರಾಟ ಮಾಡಲಾಗಿದೆ.

ಇದನ್ನೂ ಓದಿ: ಹೊಸ ವರ್ಷಾಚರಣೆ: ಬೆಂಗಳೂರು ಎಂಜಿ ರಸ್ತೆ ಬಂದ್, ಪಬ್​ಗಳ ಮುಂದೆ ಕ್ಯೂನಿಂತ ಜನರು

ನಿನ್ನೆ ಹೊಸ ವರ್ಷಾಚರಣೆ ಹಿನ್ನೆಲೆ ಚರ್ಚ್​ಸ್ಟ್ರೀಟ್​ನ ಬಹುತೇಕ ಪಬ್​ಗಳು ಹೌಸ್​ಫುಲ್​ ಆಗಿದ್ದವು. ಪಬ್​ಗಳ  ಮುಂದೆ ಗ್ರಾಹಕರು ಕ್ಯೂನಿಂತಿದ್ದರು. ಮಾಸ್ಕ್ ಧರಿಸಿ, ಮುಖ ಮುಚ್ಚಿಕೊಂಡು ಕೆಲವರು ಓಡಾಡುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ