AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲದ ನಗರವಾಗಲಿದೆ

ಮೆಟ್ರೋ ಪಾಲಿಟನ್ ನಗರಗಳಲ್ಲಿ ಬೆಂಗಳೂರು ಒಂದು. ಐಟಿ ಬಿಟಿ ಕಂಪನಿಗಳ ನಗರವಾಗಿದ್ದರಿಂದ ದೇಶದ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ಬರುತ್ತಿದ್ದಾರೆ. ಆದರೆ ಇದೀಗ ಸುಂದರ ನಗರ ಬೆಂಗಳೂರಿನ ಸ್ಥಾನಮಾನ ಕುಸಿಯುತ್ತಿದೆಯೇ? ವಾಸಕ್ಕೆ ಯೋಗ್ಯವಲ್ಲದ ಭಾರತದ ನಗರಗಳಲ್ಲಿ ಕೆಂಪೇಗೌಡರು ಕಟ್ಟಿದ ಉದ್ಯಾನನಗರಿ ಸೇರುತ್ತಿದೆಯೇ? ಹೀಗೊಂದು ಚರ್ಚೆ ಹುಟ್ಟುಹಾಕಿದ್ದು, ಮದ್ರಾಸ್​ ಐಐಟಿಯ ಹಳೆಯ ವಿದ್ಯಾರ್ಥಿ ಟ್ವೀಟ್​ ವೈರಲ್​ ಆಗಿದೆ.

ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲದ ನಗರವಾಗಲಿದೆ
ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲದ ನಗರವಾಗಲಿದೆ
ಗಂಗಾಧರ​ ಬ. ಸಾಬೋಜಿ
|

Updated on: May 17, 2024 | 7:13 PM

Share

ಬೆಂಗಳೂರು, ಮೇ 17: ರಾಜ್ಯ ರಾಜಧಾನಿ ಬೆಂಗಳೂರು (Bangaluru) ಹಲವಾರು ವಿಚಾರಗಳಿಗೆ ಸಾಕಷ್ಟು ಫೇಮಸ್. ಹೀಗಾಗಿ ಸಿಲಿಕಾನ್​ ಸಿಟಿಯನ್ನು ಎಲ್ಲರೂ ಇಷ್ಟ ಪಡುತ್ತಾರೆ. ಬೇರೆ ಬೇರೆ ರಾಜ್ಯಗಳಿಂದ ಬಂದ ಜನರು ಇಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆದರೆ ಇಂತಹ ಉದ್ಯಾನ ನಗರಿ ಬೆಂಗಳೂರು ಬದುಕಲು ಯೋಗ್ಯವಲ್ಲದ ಪಟ್ಟಿಗೆ ಸೇರಿಕೊಳ್ಳುತ್ತಿದೆ ಎಂದರೆ ನೀವು ನಂಬಲೇ ಬೇಕು. ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲದ ನಗರವಾಗಲಿದೆ ಎಂಬ ಆಘಾತಕಾರಿ ವಿಚಾರವೊಂದು ಇದೀಗ ಚರ್ಚೆ ಹುಟ್ಟುಹಾಕಿದೆ.

ಐಐಟಿ ಮದ್ರಾಸ್​ನ ಹಳೆಯ ವಿದ್ಯಾರ್ಥಿನಿ ಅಂಜಲಿ ಲಾಲ್ ಎಂಬುವವರು ಈ ಕುರಿತಾಗಿ ಟ್ವೀಟ್​ ಮಾಡಿದ್ದು, ಸಾಕಷ್ಟು ವೈರಲ್ ಆಗುತ್ತಿದೆ. ಬೆಂಗಳೂರು ಮುಂದಿನ ಐದು ವರ್ಷಗಳಲ್ಲಿ ದೆಹಲಿಯಂತೆ ಬದುಕಲು ಯೋಗ್ಯವಾಗಿರುವುದಿಲ್ಲ. ಹಾಗಾದರೆ ಜನರೇ, ನಾವೆಲ್ಲರೂ ಯಾವ ನಗರಕ್ಕೆ ಹೋಗಲು ಸಿದ್ದರಾಗುತ್ತಿದ್ದೇವೆ ಮತ್ತು ಅಲ್ಲಿ ಕೂಡ ಬದುಕಲು ಸಾಧ್ಯವಿಲ್ಲ? ಎಂದು ಬರೆದುಕೊಂಡಿದ್ದಾರೆ.

ಅಂಜಲಿ ಲಾಲ್ ಟ್ವೀಟ್​ 

ಭಾರತದ ಬಹುತೇಕ ಮೆಟ್ರೋ ಪಾಲಿಟನ್ ನಗರಗಳಲ್ಲಿ ಮಾಲಿನ್ಯ, ಸಂಚಾರ ದಟ್ಟಣೆ, ಜನಸಂಖ್ಯೆ ಮತ್ತು ನೀರಿನ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಂದು ತುಂಬಿತುಳುಕುತ್ತಿವೆ. ಇದೆಲ್ಲದರ ಮಧ್ಯೆ ಇದೀಗ ಮುಂದಿನ 5 ವರ್ಷದಲ್ಲಿ ಬೆಂಗಳೂರು ವಾಸಕ್ಕೆ ಯೋಗ್ಯವಲ್ಲ ಎಂಬ ಐಐಟಿ ವಿದ್ಯಾರ್ಥಿನಿಯ ಟ್ವೀಟ್​ಗೆ ಸೋಶಿಯಲ್​ ಮೀಡಿಯಾದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ.

ಇದನ್ನೂ ಓದಿ: ವಾರದ ನಂತರ ಮತ್ತೆ ಓಪನ್ ಆದ ಮಂತ್ರಿ ಮಾಲ್; ಕೋರ್ಟ್​ ಸೂಚನೆಯಂತೆ ಬೀಗ ತೆಗೆದ ಬಿಬಿಎಂಪಿ

ನೀವು ಮುಂಬೈಯಂತಹ ನಗರಗಳಲ್ಲಿ ನಿಮ್ಮ ಜೀವನದ ಬಹುಪಾಲು ಅಲ್ಲಿಯೇ ವಾಸವಾಗಿದ್ದರೆ, ಬೆಂಗಳೂರು ನಿಮಗೆ ವಾಸಕ್ಕೆ ಯೋಗ್ಯ ನಗರವಾಗಿ ಕಾಣಿಸುವುದಿಲ್ಲ ಎಂದು ಎಕ್ಸ್ ಬಳಕೆದಾರರೊಬ್ಬರು ಕಿಡಿಕಾರಿದ್ದಾರೆ.

ಉತ್ತರ ಭಾಗದವರು ಬೆಂಗಳೂರನ್ನು ಯಾವಾಗಲು ದೂರುತ್ತಾರೆ. ಇದು ಎಂದಿಗೂ ಮುಗಿಯುದಿಲ್ಲ. ಮತ್ತೊಬ್ಬರು ದೆಹಲಿ ಸಂಪೂರ್ಣವಾಗಿ ವಾಸಕ್ಕೆ ಯೋಗ್ಯವಾಗಿದೆ. ಆದರೆ 2 ತಿಂಗಳು ಮಾತ್ರ ಹೊರಗಿನ ಗಾಳಿಯನ್ನು ಉಸಿರಾಡಬೇಡಿ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸೀಟ್ ಬೆಲ್ಟ್ ಧರಿಸದೇ ಪ್ರಯಾಣಿಸಿದರೆ ಫೈನ್ ಪಕ್ಕ; 16 ದಿನದಲ್ಲಿ 12 ಸಾವಿರ ಕೇಸ್

ಬೆಂಗಳೂರು ಮತ್ತು ದೆಹಲಿಯ ಸಮಸ್ಯೆಗಳು ನಾಗರಿಕ ಪ್ರಜ್ಞೆಗೆ ಬಿಟ್ಟಿದ್ದು. ಪ್ರತಿ ವ್ಯಕ್ತಿಗೆ ಅತ್ಯುನ್ನತ ಶಿಕ್ಷಣವಾಗಿರುವ ಬೆಂಗಳೂರು ನಾಗರಿಕ ಪ್ರಜ್ಞೆಯಲ್ಲಿ ದೆಹಲಿಗೆ ಸರಿಸಮಾನವಾಗಿದೆ. ದುರದೃಷ್ಟವಶಾತ್ ಮುಂಬೈ ವ್ಯವಸ್ಥಿತ ಭ್ರಷ್ಟಾಚಾರದಿಂದ ಕುಡಿದೆ ಎಂದು ಮತ್ತೊಬ್ಬರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ