AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾನ್ಮಾರ್‌, ಬ್ಯಾಂಕಾಕ್​ ಭೂಕಂಪ: ಕನ್ನಡಿಗರ ಪರಿಸ್ಥಿತಿ ಹೇಗಿದೆ? ಮಾಹಿತಿ ಪಡೆದ ಸಿಎಂ

ಮ್ಯಾನ್ಮಾರ್ ಮತ್ತು ಬ್ಯಾಂಕಾಕ್‌ನಲ್ಲಿ ಸಂಭವಿಸಿದ ಪ್ರಬಲ ಭೂಕಂಪ ಸಂಭವಿಸಿದೆ. ಪ್ರವಾಸಕ್ಕೆ ತೆರಳಿರುವ ಹಾವೇರಿ ಮತ್ತು ಹಾಸನ ಜಿಲ್ಲೆಯ ಪ್ರವಾಸಿಗರು ಸುರಕ್ಷಿತರಾಗಿದ್ದಾರೆ.ಹಾವೇರಿಯ 22 ಜನರು ಮತ್ತು ಹಾಸನದ ರಾಜಶೇಖರ್ ಸೇರಿದಂತೆ ಇತರರು ಬ್ಯಾಂಕಾಕ್‌ನಲ್ಲಿ ಸುರಕ್ಷಿತವಾಗಿದ್ದಾರೆ. ಭೂಕಂಪದ ತೀವ್ರತೆ 7.7 ಆಗಿತ್ತು ಮತ್ತು ಮ್ಯಾನ್ಮಾರ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಕರ್ನಾಟಕ ಸರ್ಕಾರ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಮ್ಯಾನ್ಮಾರ್‌, ಬ್ಯಾಂಕಾಕ್​ ಭೂಕಂಪ: ಕನ್ನಡಿಗರ ಪರಿಸ್ಥಿತಿ ಹೇಗಿದೆ? ಮಾಹಿತಿ ಪಡೆದ ಸಿಎಂ
ಬ್ಯಾಂಕಾಕ್​ ಭೂಕಂಪನ ಕನ್ನಡಿಗರು ಸುರಕ್ಷೀತ
ಮಂಜುನಾಥ ಕೆಬಿ
| Edited By: |

Updated on:Mar 28, 2025 | 8:51 PM

Share

ಬೆಂಗಳೂರು, ಮಾರ್ಚ್​ 28: ಮ್ಯಾನ್ಮಾರ್‌ (Myanmar) ಹಾಗೂ ಬ್ಯಾಂಕಾಕ್​ನಲ್ಲಿ (Bangkok) ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಹಲವರು ಮೃತಪಟ್ಟಿದ್ದಾರೆ. ಬ್ಯಾಂಕ್​ಗೆ ಪ್ರವಾಸಕ್ಕೆ ತೆರಳಿರುವ ಮತ್ತು ಕೆಲಸದ ನಿಮಿತ್ಯ ತೆರಳಿರುವ ಕನ್ನಡಿಗರು ಸುರಕ್ಷಿತವಾಗಿದ್ದಾರೆ. ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕೆಲಸದ ನಿಮಿತ್ಯ ಬ್ಯಾಂಕಾಕ್​ಗೆ 42 ಮಂದಿ ಕನ್ನಡಿಗರು ತೆರಳಿದ್ದಾರೆ. ಇವರು, ಅನಂತಾರಾ ಮತ್ತು ಅವನಿ ಹೊಟೆಲ್​ನಲ್ಲಿ ವಾಸವಾಗಿದ್ದಾರೆ.

ಭೂಕಂಪನಕ್ಕೆ ಅವನಿ ಹೊಟೆಲ್​ ಸ್ವಲ್ಪ ಬಿರುಕು ಬಿಟ್ಟಿದೆ. ಬಿರುಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಟೇಲ್​ ಸಿಬ್ಬಂದಿ ಕನ್ನಡಿಗರನ್ನು ಬೇರೆಡೆ ಸ್ಥಳಾಂತರಿಸಿದ್ದಾರೆ. ಕನ್ನಡಿಗರು 42 ಜನ ಹಾಗೂ ಬೇರೆ ರಾಜ್ಯದ 600 ಕ್ಕೂ ಹೆಚ್ಚು ಜನ ಈ ಹೊಟೇಲ್​ಗಳಲ್ಲಿ ವಾಸ್ತವ್ಯ ಹೋಡಿದ್ದರು. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. ಯಾರಿಗೂ ತೊಂದರೆ ಇಲ್ಲ.  ನಾಳೆ‌ ನಾವು ಬೆಂಗಳೂರಿಗೆ ಬರುತ್ತವೆ ಎಂದು ತಿಳಸಿದ್ದಾರೆ.

ಇದನ್ನೂ ಓದಿ
Image
ಭೂ ಒತ್ತುವರಿ ಆರೋಪ: ನೋಟಿಸ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಎಚ್​ಡಿಕೆ
Image
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
Image
ಕಾನೂನು ಬಾಹಿರವಾಗಿ ಭೂಮಿ ಇದ್ರೆ ವಶಪಡಿಸಿಕೊಳ್ಳಿ: ಕುಮಾರಸ್ವಾಮಿ ಪತ್ರ
Image
ಡಿನೋಟಿಫಿಕೇಷನ್‌ ಪ್ರಕರಣ: ಕುಮಾರಸ್ವಾಮಿ ಅರ್ಜಿ ವಜಾ ಮಾಡಿದ ಸುಪ್ರೀಂ

ಹಾವೇರಿಯ 22 ಜನ ಕನ್ನಡಿಗರು ಸುರಕ್ಷಿತ

ಐದು ದಿನಗಳ ಹಿಂದೆ ಹಾವೇರಿ ಜಿಲ್ಲೆಯ 22 ಜನರು ಬೆಂಗಳೂರಿನಿಂದ ಬ್ಯಾಂಕಾಕ್​ಗೆ ತೆರಳಿದ್ದರು. ಶುಕ್ರವಾರ (ಮಾ.28) ಸಫಾರಿ ವರ್ಡ್​ಗೆ ಹೋಗಿದ್ದ ವೇಳೆ ಭೂಕಂಪನದ ಅನುಭವವಾಗಿದೆ. ಬಳಿಕ, ಕನ್ನಡಿಗರು ಸುವರ್ಣ ಭೂಮಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಬ್ಯಾಂಕಾಕ್​ನಲ್ಲಿ ಎಲ್ಲರೂ ಸುರಕ್ಷಿತವಾಗಿದ್ದೇವೆ. ವಿಮಾನಗಳನ್ನು ಬಿಡುವ ಸಮಯದಲ್ಲಿ ಸ್ವಲ್ಪ ವ್ಯತ್ಯಾಸವಾಗಿದೆ ಎಂದು ವಿಮಾನ ನಿಲ್ದಾಣದಿಂದ ಐವರು ಕನ್ನಡಿಗರು ವಿಡಿಯೋ ಮಾಡಿ ಪೋಷಕರಿಗೆ ಕಳುಹಿಸಿದ್ದಾರೆ.

ಹಾಸನದವರು ಸುರಕ್ಷಿತ

ಇನ್ನು, ಹಾಸನದಿಂದ ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿರುವ ರಾಜಶೇಖರ್ ಎಂಬುವರು ಕೂಡ ಸುರಕ್ಷಿತವಾಗಿದ್ದಾರೆ. ಭೂಕಂಪನದ ಸಮಯದಲ್ಲಿ ರಾಜಶೇಖರ್ ಬ್ಯಾಂಕಾಕ್​ನ ಹಳೇ ವಿಮಾನ ನಿಲ್ದಾಣಕ್ಕೆ ತೆರಳಿದ ಹಿನ್ನೆಲೆಯಲ್ಲಿ ಸುರಕ್ಷಿತವಾಗಿದ್ದಾರೆ. ರಾಜಶೇಖರ್ ರಾಜಶೇಖರ್ ಜೊತೆಗಿರುವ ಇತರೆ ನಾಲ್ವರು ಕನ್ನಡಿಗರೂ ಸಹಿತ ಸುರಕ್ಷಿತವಾಗಿದ್ದಾರೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಮಾಹಿತಿ ಪಡೆದ ಸಿಎಂ

ಮ್ಯಾನ್ಮಾರ್‌ ಹಾಗೂ ಥಾಯ್ಲೆಂಡ್​ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದಿದ್ದಾರೆ. ಇನ್ನು, ಪ್ರವಾಸಕ್ಕೆ ತೆರಳಿರುವ ಕನ್ನಡಿಗರ ಬಗ್ಗೆ ಸರ್ಕಾರ ಮಾಹಿತಿ ಕಲೆ ಹಾಕುತ್ತಿದ್ದು, ಸುರಕ್ಷತೆಗೆ ಗಮನಹರಿಸಿದೆ.

ಇದನ್ನೂ ಓದಿ: ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ

ಬಾಂಕಾಕ್​ ಭೂಕಂಪನದ ವಿಡಿಯೋ ನೋಡಿ

ಭೂಕಂಪನದ ತೀವ್ರತೆ 7.7ರಷ್ಟು ದಾಖಲು

ಮ್ಯಾನ್ಮಾರ್‌ ಹಾಗೂ ಥಾಯ್ಲೆಂಡ್​ನಲ್ಲಿ ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 7.7ರಷ್ಟು ದಾಖಲಾಗಿದೆ. ಭೂಕಂಪದ ತೀರ್ವತೆಗೆ ಮ್ಯಾನ್ಮಾರ್‌ನ ಮಂಡಲೇಯಲ್ಲಿನ ಐಕಾನಿಕ್ ಅವಾ ಸೇತುವೆ ಕುಸಿದಿದೆ. ಮಧ್ಯಾಹ್ನ 12.50ಕ್ಕೆ ಉಭಯ ಭೂಮಿ ಕಂಪಿಸಿದೆ. ಮುಂದಿನ 24 ಗಂಟೆಗಳಲ್ಲಿ ಇನ್ನಷ್ಟು ಭೂಕಂಪ ಸಂಭವಿಸುವ ಸಾಧ್ಯತೆ ಇದೆ ಎಂದು ಅಲ್ಲಿನ ಸರ್ಕಾರ ಎಚ್ಚರಿಕೆ ನೀಡಿದೆ. ಬ್ಯಾಂಕಾಕ್‌ನಲ್ಲಿ ವಿಮಾನ ಸೇವೆ, ರೈಲು ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ. ಭೂಕಂಪ ಹಿನ್ನೆಲೆಯಲ್ಲಿ ಮ್ಯಾನ್ಮಾರ್​ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Fri, 28 March 25