ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ. ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. […]

ಬೆಂಗಳೂರಿನಲ್ಲೇ ನೆಲೆಸಿದ್ದರಂತೆ ಬಾಂಗ್ಲಾ ಮೂಲದ ಉಗ್ರರು!
ಸಾಧು ಶ್ರೀನಾಥ್​

Updated on: Nov 22, 2019 | 4:37 PM

ಬೆಂಗಳೂರು ಗ್ರಾಮಾಂತರ: ನಗರದಲ್ಲೇ ಬಾಂಗ್ಲಾ ಮೂಲದ ಉಗ್ರ ಸಂಘಟನೆ ಸದಸ್ಯರು ತಂಗಿದ್ದರು ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.

ಮೇಘಾಲಯದಲ್ಲಿ ನಿಷೇಧಿತ ಬಾಂಗ್ಲಾ ಮೂಲದ ಅನ್ಸರುಲ್ಲಾ ಬಾಂಗ್ಲಾ ಟೀಮ್​ನ ಫರ್ಹಾನ್​ನನ್ನು ಕೋಲ್ಕತ್ತಾ ಎನ್​ಐಎ ಟೀಮ್ ಬಂಧಿಸಿತ್ತು. ವಿಚಾರಣೆ ವೇಳೆ ಬೆಂಗಳೂರಿನಲ್ಲಿ ವಾಸವಿದ್ದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾನೆ. ಹೀಗಾಗಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದವರು ತಪಾಸಣೆ ನಡೆಸಿದ್ದಾರೆ.

ವಿದ್ಯಾರ್ಥಿ ಸೋಗಿನಲ್ಲಿ ಸೋಲದೇವನಹಳ್ಳಿಯ ಪಿಜಿಯೊಂದರಲ್ಲಿ ವಾಸವಿದ್ದೆವು ಎಂದು  ಎಂಬ ಮಾಹಿತಿಯನ್ನು ಎನ್​ಐಎ ಅಧಿಕಾರಿಗಳಿಗೆ ಫರ್ಹಾನ್ ಹೇಳಿದ್ದಾನೆ. ಹಾಗಾಗಿ ಆರೋಪಿಗಳು ಬೆಂಗಳೂರಿನಲ್ಲಿ ತಂಗಿದ್ದ ಪಿ.ಜಿಯಲ್ಲಿ ಎನ್​ಐಎ ಟೀಂ ತಪಾಸಣೆ ನಡೆಸಿದ್ದಾರೆ. ಆದ್ರೆ ಫರ್ಹಾನ್ ಬಂಧನದ ಬೆನ್ನಲ್ಲೇ ಮತ್ತೊಬ್ಬ ಉಗ್ರ ನಾಪತ್ತೆಯಾಗಿದ್ದಾನೆ. ಎನ್‌ಐಎ ಅಧಿಕಾರಿಗಳು ಉಗ್ರರ ಅಡಗುತಾಣಗಳ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದಾರೆ.

Published On - 4:32 pm, Fri, 22 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us