AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ವಿಡಿಯೋದಲ್ಲಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ

ಮಹಿಳೆ ಸಾನಿಯಾ, ಆಕೆಯ ಪತಿ ರಫ್ಜಾನ್, ಶಾಬಾಜ್ ಈಗ ಪೊಲೀಸರ ವಶದಲ್ಲಿದ್ದಾರೆ. ಬಂಧಿತ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದ್ದರು. ದುಷ್ಕೃತ್ಯ ಬಯಲಾದ ಬಳಿಕ ನಾಪತ್ತೆಯಾಗಿದ್ದರು.

ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣ: ವಿಡಿಯೋದಲ್ಲಿದ್ದ ಮೂವರು ಆರೋಪಿಗಳು ಪೊಲೀಸರ ವಶಕ್ಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 01, 2021 | 8:48 PM

Share

ಬೆಂಗಳೂರು: ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ವಿಡಿಯೋದಲ್ಲಿದ್ದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚೆನ್ನೈನಲ್ಲಿ ತಲೆ ಮರೆಸಿಕೊಂಡಿದ್ದ ಮೂವರು ಆರೋಪಿಗಳ ಸೆರೆ ಸಿಕ್ಕಿದ್ದಾರೆ. ಆರೋಪಿಗಳು ರಾಮಮೂರ್ತಿನಗರ ಠಾಣೆ ಪೊಲೀಸರ ವಶದಲ್ಲಿದ್ದಾರೆ.

ಮಹಿಳೆ ಸಾನಿಯಾ, ಆಕೆಯ ಪತಿ ರಫ್ಜಾನ್, ಶಾಬಾಜ್ ಈಗ ಪೊಲೀಸರ ವಶದಲ್ಲಿದ್ದಾರೆ. ಬಂಧಿತ ಆರೋಪಿಗಳು ಸಂತ್ರಸ್ತೆಯ ಮೇಲೆ ಹಲ್ಲೆ ಮಾಡಿದ್ದರು. ದುಷ್ಕೃತ್ಯ ಬಯಲಾದ ಬಳಿಕ ನಾಪತ್ತೆಯಾಗಿದ್ದರು. ಚೆನೈನಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಂಗ್ಲಾ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣ ತನಿಖೆಯ ವೇಳೆ ಬೃಹತ್​ ಮಾನವ ಕಳ್ಳಸಾಗಣೆ ವಿಚಾರ ಪತ್ತೆಯಾಗಿದೆ. ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೇಸ್ ವಿಚಾರಣೆ ಸಂದರ್ಭ ಮಾನವ ಕಳ್ಳಸಾಗಣೆ ವಿಚಾರ ಬೆಳಕಿಗೆ ಬಂದಿದೆ. ಯಾವುದೇ ವೀಸಾ, ಪಾಸ್​ಪೋರ್ಟ್​ ಇಲ್ಲದೆ ಮಾನವ ಕಳ್ಳಸಾಗಣೆ ಮಾಡಲಾಗುತ್ತದೆ. ದಲ್ಲಾಳಿಗಳು ಜನರನ್ನು ಬಾಂಗ್ಲಾದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಾರೆ ಎಂದು ತಿಳಿದುಬಂದಿದೆ.

ಮಾನವ ಕಳ್ಳಸಾಗಣೆಗೆ ಕೆಲಸ ಮಾಡುವ ದಲ್ಲಾಳಿಗಳು ಭಾರತಕ್ಕೆ ಬರಲು ಇಷ್ಟಪಡುವವರನ್ನು ಸಂಪರ್ಕಿಸುತ್ತಿದ್ದರು. ಬಳಿಕ, ರಾತ್ರಿ ವೇಳೆ ಭಾರತದ ಗಡಿಗೆ ನಡೆದುಕೊಂಡು ಬರುವಂತೆ ಹೇಳುತ್ತಿದ್ದರು. ನಂತರ, ಪಶ್ಚಿಮ ಬಂಗಾಳಕ್ಕೆ ನುಸುಳಿ ಕೆಲವು ದಿನ ಅಲ್ಲೇ ಇರುತ್ತಿದ್ದರು. ಹೀಗೆ ಭಾರತದ ಗಡಿ ತಲುಪಿಸಿದ ಅಲ್ಲಿನ ದಲ್ಲಾಳಿಗೆ 30ರಿಂದ 50 ಸಾವಿರ ರೂಪಾಯಿ ಹಣ ನೀಡಲಾಗುತ್ತಿತ್ತು. ಆಮೇಲೆ, ಮತ್ತೋರ್ವ ದಲ್ಲಾಳಿ ಜೊತೆ ಭಾರತಕ್ಕೆ ಕಳುಹಿಸಿಕೊಡಲಾಗುತ್ತಿತ್ತು ಎಂಬ ಅಂಶ ತಿಳಿದುಬಂದಿದೆ.

ಕಳ್ಳಸಾಗಣೆ ಮೂಲಕ ಭಾರತಕ್ಕೆ ಬಂದ ಜನರಿಗೆ ಪಶ್ಚಿಮ ಬಂಗಾಳದಲ್ಲಿ ದಲ್ಲಾಳಿ ಆಧಾರ್ ಕಾರ್ಡ್​ ಮಾಡಿಕೊಡುತ್ತಿದ್ದ. ಆಧಾರ್ ಕಾರ್ಡ್ ಮಾಡಿಸಿದ ನಂತರ ಅವರನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುತ್ತಿತ್ತು. ಬೆಂಗಳೂರು, ಹೈದರಾಬಾದ್ ಸೇರಿದಂತೆ ಬೇರೆ ನಗರಗಳಿಗೆ ಕಳುಹಿಸಲಾಗುತ್ತಿತ್ತು. ದೇಶದ ದೊಡ್ಡ ದೊಡ್ಡ ನಗರಗಳಿಗೆ ಯುವತಿಯರ ಸ್ಥಳಾಂತರ ಮಾಡಲಾಗುತ್ತಿತ್ತು ಎಂಬ ಮಾಹಿತಿ ಹೊರಬಿದ್ದಿದೆ.

ಇದನ್ನೂ ಓದಿ: ನಾಪತ್ತೆಯಾದ ಬಾಂಗ್ಲಾ ಯುವತಿಯ ಮೇಲೆ ಅತ್ಯಾಚಾರ ಪ್ರಕರಣದ ಪ್ರಮುಖ 3 ಆರೋಪಿಗಳು

ಬಾಂಗ್ಲಾ ಯುವತಿ ಅತ್ಯಾಚಾರ ಪ್ರಕರಣ: ತನಿಖೆ ವೇಳೆ ಹೊರಬಿತ್ತು ಬೃಹತ್ ಮಾನವ ಕಳ್ಳಸಾಗಣೆ ಜಾಲದ ಕರಾಳ ಮುಖ

Published On - 8:46 pm, Tue, 1 June 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ