AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ

ಸರ್, ನಾವೆಲ್ಲಾ ಬಾಂಗ್ಲಾದವರು. ನಾವೂ ಯಾವುದೇ ಪಾಸ್ ಪೋರ್ಟ್ ಮತ್ತು ವೀಸಾ ಹೊಂದಿಲ್ಲ. ಯಾವುದೇ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಬಾಂಗ್ಲಾದಿಂದ ಭಾರತಕ್ಕೆ ಅತಿಕ್ರಮವಾಗಿ ನುಸುಳಿದ್ದೇವೆ. ನಂತರ ಬೆಂಗಳೂರಿಗೆ ಬಂದು, ಇಲ್ಲಿ ವಿವಿಧ ಕಡೆಗಳಲ್ಲಿ ವಾಸಿಸುತ್ತಿದ್ದೇವೆ ಎಂದು ಬಂಧಿತರು ಮಾಹಿತಿ ನೀಡಿದ್ದಾರೆ.

ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣ; ಆರೋಪಿಗಳಿಂದ ತಪ್ಪೊಪ್ಪಿಗೆ
ಆರೋಪಿಗಳಾದ ರಿದಾಯ್ ಬಾಬು ಮತ್ತು ಸಾಗರ್‌
sandhya thejappa
|

Updated on: May 30, 2021 | 3:49 PM

Share

ಬೆಂಗಳೂರು: ಬಾಂಗ್ಲಾ ಯುವತಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ತಮ್ಮ ತಪ್ಪನ್ನು ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ. ‘ತಾವೂ ಅಕ್ರಮ ನುಸುಳುಕೋರರು’ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಬಂಧಿತ ಆರು ಆರೋಪಿಗಳ ಹೇಳಿಕೆಯನ್ನು ರಾಮಮೂರ್ತಿನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ತಮ್ಮ ಹಿನ್ನೆಲೆ ಕುರಿತು ಇಂಚಿಂಚು ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ.

ಸರ್, ನಾವೆಲ್ಲಾ ಬಾಂಗ್ಲಾದವರು. ನಾವೂ ಯಾವುದೇ ಪಾಸ್ ಪೋರ್ಟ್ ಮತ್ತು ವೀಸಾ ಹೊಂದಿಲ್ಲ. ಯಾವುದೇ ದಾಖಲೆಗಳಿಲ್ಲದೆ ಕಾನೂನು ಬಾಹಿರವಾಗಿ ಬಾಂಗ್ಲಾದಿಂದ ಭಾರತಕ್ಕೆ ಅತಿಕ್ರಮವಾಗಿ ನುಸುಳಿದ್ದೇವೆ. ನಂತರ ಬೆಂಗಳೂರಿಗೆ ಬಂದು, ಇಲ್ಲಿ ವಿವಿಧ ಕಡೆಗಳಲ್ಲಿ ವಾಸಿಸುತ್ತಿದ್ದೇವೆ ಎಂದು ಬಂಧಿತರು ಮಾಹಿತಿ ನೀಡಿದ್ದಾರೆ. ವಿಡಿಯೋದಲ್ಲಿರುವ ಯುವತಿ ಕೂಡ ಬಾಂಗ್ಲಾದವಳು. ಆಕೆ ನಮಗೆ ಪರಿಚಿತೆ. ಆಕೆಗೂ ಹಾಗೂ ನಮಗೂ ವ್ಯವಹಾರಿಕ ವಿಚಾರದಲ್ಲಿ ಗಲಾಟೆಯಾಗಿತ್ತು. ಇದೇ ಕಾರಣಕ್ಕೆ ನಾವೂ 6 ಜನರು ಈ ಕೃತ್ಯ ಎಸಗಿದ್ದೇವೆ. ಕೃತ್ಯವನ್ನು ರಾಮಮೂರ್ತಿನಗರದ ಮನೆಯಲ್ಲಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮುಂದುವರೆದಿದೆ.

ಘಟನೆ ಏನು? ಬೆಂಗಳೂರಿನಲ್ಲಿ ಬಾಂಗ್ಲಾ ದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿತ್ತು. ಈ ಕೇಸ್ನಲ್ಲಿ ಶಾಮೀಲಾದವರೆಲ್ಲ ಬಾಂಗ್ಲಾ ದೇಶದ ಮೂಲದವರು. ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನ ರಾಮಮೂರ್ತಿ ನಗರದ ಎನ್ಆರ್ಐ ಕಾಲೋನಿಯಲ್ಲಿ ವಾಸವಾಗಿದ್ದರು. ಇಷ್ಟು ದಿನ ಸೈಲೆಂಟಾಗಿ ವೇಶ್ಯಾವಾಟಿಕೆ ಮಾಡಿಕೊಂಡು ದುಡ್ ಮಾಡುತ್ತಿದ್ದರು. ಎಲ್ಲರೂ ಖುಷಿಯಾಗೆ ಲೈಫ್ ಎಂಜಾಯ್ ಮಾಡುತ್ತಿದ್ದರು. ಆದರೆ, ಸ್ನೇಹಿತರ ಮಧ್ಯೆ ಅದು ಏನ್ ದ್ವೇಷ ಇತ್ತೋ ಗೊತ್ತಿಲ್ಲ. ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿ ಮೇಲೆ ಯುವಕರು ಎಸಗಿದ್ದಾರೆ. ಅದು ಕೂಡ ಇಬ್ಬರು ಯುವಕರು ಯುವತಿಯ ಕೈ, ಬಾಯಿ ಗಟ್ಟಿಯಾಗಿ ಮುಚ್ಚಿಕೊಂಡಿದ್ರೆ, ಉಳಿದವರು ಅಟ್ಟಹಾಸ ಮೆರೆದಿದ್ದಾರೆ. ಎಲ್ಲವನ್ನೂ ಮೊಬೈಲ್ನಲ್ಲಿ ದೃಶ್ಯ ಸೆರೆ ಹಿಡಿದು, ವೈರಲ್ ಮಾಡಿದ್ದಾರೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಬಾಂಗ್ಲಾ ಯುವತಿ ಮೇಲೆ ಅತ್ಯಾಚಾರ ಪ್ರಕರಣದ ಬಂಧಿತರಿಗೆ ಆಧಾರ್ ಕಾರ್ಡ್ ಸಿಕ್ಕಿದ್ದೇಗೆ?

ಬಾಂಗ್ಲಾ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ; ಸಂತ್ರಸ್ತೆ ಹೇಳಿಕೆ ಪಡೆಯುಲು ಪೊಲೀಸರಿಂದ ಸಿದ್ಧತೆ

(Bangladesh youth gang rape accused have pleaded guilty with benagaluru police)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!