AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಮತ್ತು ನಾಳೆ ಬ್ಯಾಂಕ್ ಸೇವೆ ಸಂಪೂರ್ಣ ಸ್ಥಗಿತ

ಬೆಂಗಳೂರು: ಹಣ.. ದುಡ್ಡು.. ಮನಿ.. ಎಲ್ಲದ್ದಕ್ಕೂ ಕ್ಯಾಶ್ ಇರಲೇಬೇಕು. ದುಡ್ಡಿರಲ್ಲ ಅಂದ್ರೆ ಯಾವ ಕೆಲಸವೂ ನಡೆಯಲ್ಲ. ಕೈ ಕಾಲೂ ಆಡಲ್ಲ. ಹೌದು, ಇವತ್ತು ಹಣ ಡ್ರಾ ಮಾಡೋದಕ್ಕೆ ಎಟಿಎಂಗಳಲ್ಲಿ ಹಣ ಇರಲ್ಲ. ಬ್ಯಾಂಕ್​ಗೇ ಹೋಗಿ ಹಣ ಡ್ರಾ ಮಾಡೋಣ ಅಂದ್ರೆ ಬ್ಯಾಂಕ್​ಗಳಿರಲ್ಲ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ! ಹಲವು ಬೇಡಿಗೆ ಈಡೇರಿಕೆಗೆ ಒತ್ತಾಯಿಸಿ ಆಲ್ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಇಂದಿನಿಂದ ಎರಡು ದಿನಗಳ ಕಾಲ ಬಂದ್​ಗೆ ಕರೆ ನೀಡಿದೆ. ಹೀಗಾಗಿ ಇವತ್ತು ಮತ್ತು ನಾಳೆ […]

ಇಂದು ಮತ್ತು ನಾಳೆ ಬ್ಯಾಂಕ್ ಸೇವೆ ಸಂಪೂರ್ಣ ಸ್ಥಗಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 31, 2020 | 7:26 AM

Share

ಬೆಂಗಳೂರು: ಹಣ.. ದುಡ್ಡು.. ಮನಿ.. ಎಲ್ಲದ್ದಕ್ಕೂ ಕ್ಯಾಶ್ ಇರಲೇಬೇಕು. ದುಡ್ಡಿರಲ್ಲ ಅಂದ್ರೆ ಯಾವ ಕೆಲಸವೂ ನಡೆಯಲ್ಲ. ಕೈ ಕಾಲೂ ಆಡಲ್ಲ. ಹೌದು, ಇವತ್ತು ಹಣ ಡ್ರಾ ಮಾಡೋದಕ್ಕೆ ಎಟಿಎಂಗಳಲ್ಲಿ ಹಣ ಇರಲ್ಲ. ಬ್ಯಾಂಕ್​ಗೇ ಹೋಗಿ ಹಣ ಡ್ರಾ ಮಾಡೋಣ ಅಂದ್ರೆ ಬ್ಯಾಂಕ್​ಗಳಿರಲ್ಲ.

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಬ್ಯಾಂಕ್ ಸಿಬ್ಬಂದಿ ಪ್ರತಿಭಟನೆ! ಹಲವು ಬೇಡಿಗೆ ಈಡೇರಿಕೆಗೆ ಒತ್ತಾಯಿಸಿ ಆಲ್ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಇಂದಿನಿಂದ ಎರಡು ದಿನಗಳ ಕಾಲ ಬಂದ್​ಗೆ ಕರೆ ನೀಡಿದೆ. ಹೀಗಾಗಿ ಇವತ್ತು ಮತ್ತು ನಾಳೆ ಬ್ಯಾಂಕಿಂಗ್ ವಹಿವಾಟು ಬಂದ್ ಆಗಲಿದೆ. ಬ್ಯಾಂಕ್ ನೌಕರರ ಬೇಡಿಕೆಗಳು: ಕಳೆದೆರಡು ವರ್ಷಗಳಿಂದ ವೇತನ ಪರಿಷ್ಕರಣೆಯಾಗಿಲ್ಲ, 2017ರಿಂದ ವೇತನ ಹೆಚ್ಚಳವಾಗಿಲ್ಲ ಅಂತಾ ಬ್ಯಾಂಕ್ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಬ್ಯಾಂಕ್ ನೌಕರರು 5 ದಿನಗಳ ಬ್ಯಾಂಕಿಂಗ್ ಸೇವೆ ನೀಡಬೇಕು. ಪಿಂಚಣಿ ಪರಿಷ್ಕರಣೆ ಮಾಡಬೇಕು. ಅಧಿಕಾರಿಗಳ ಕೆಲಸಕ್ಕೆ ನಿಗದಿತ ಅವಧಿ ನೀಡಬೇಕು ಎಂಬಿತ್ಯಾದಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೇಡಿಕೆ ಮುಂದಿಟ್ಟಿದ್ದಾರೆ. ಈ ನಿಟ್ಟಿನಲ್ಲಿ ಇಂದಿನ ಮುಷ್ಕರದಲ್ಲಿ AIBEA , NCBE, INBOC, BEFI, NOBW, ಸೇರಿದಂತೆ ಹಲವು ಬ್ಯಾಂಕ್ ನೌಕರರ ಸಂಘಟನೆಗಳು ಭಾಗಿಯಾಗಲಿವೆ.

ಪ್ರಮುಖ 12 ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಇಂದು ಮತ್ತು ಫೆಬ್ರವರಿ 1 ರಂದು ಬ್ಯಾಂಕ್ ಬಂದ್ ಇರಲಿದೆ. ಇನ್ನು ಫೆ.2 ಭಾನುವಾರವಾಗಿರೋದ್ರಿಂದ ಮೂರು ದಿನ ಸರಣಿ ರಜೆ ಇದ್ದು, ಬ್ಯಾಂಕ್ ಸೇವೆ ಇರಲ್ಲ. ಆದ್ರೆ, ಕೆಲವೆಡೆ ಎಟಿಎಂ ಸೇವೆ ಮತ್ತು ಎಂದಿನಂತೆ ಆನ್ಲೈನ್ ಸೇವೆ ಇರಲಿದೆಯಂತೆ. ಆದ್ರೆ, 2ದಿನಗಳಲ್ಲೇ ಎಟಿಎಮ್ ಹಣ ಕೂಡಾ ಖಾಲಿಯಾಗೋದ್ರಿಂದ ರವಿವಾರ ಎಟಿಎಮ್​ಗಳಲ್ಲೂ ಹಣದ ಸಮಸ್ಯೆ ಎದುರಾಗೋ ಸಾಧ್ಯತೆಗಳಿವೆ. ಬ್ಯಾಂಕ್ ಕರೆ ನೀಡಿರೋ ಮುಷ್ಕರದ ಬಗ್ಗೆ ‌ಸಾರ್ವಜನಿಕರು ಬೇಸರ ಹೊರ ಹಾಕ್ತಾರೆ.

ಒಟ್ನಲ್ಲಿ ಬ್ಯಾಂಕಿಂಗ್ ಕ್ಷೇತ್ರದ ನೌಕರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿದ್ದು, ಇಂದು ಬ್ಯಾಂಕ್ ಸಂಪೂರ್ಣವಾಗಿ ಬಂದ್ ಆಗಲಿದೆ. ಹೀಗಾಗಿ, ಸಾರ್ವಜನಿಕರಿಗೆ ಬ್ಯಾಂಕ್ ಬಂದ್ ಬಿಸಿ ತಟ್ಟೋದು ಪಕ್ಕಾ.

Published On - 7:26 am, Fri, 31 January 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ