AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಬ್ಯಾಂಕ್​ಗೆ ವಂಚನೆ ಸಂಬಂಧ ಬೆಂಗಳೂರಿನ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಬ್ಯಾಂಕ್​ಗೆ ವಂಚನೆ: ಬೆಂಗಳೂರಿನ ಕಂಪನಿಯೊಂದರ 105.5 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
ಇಡಿ (ಸಂಗ್ರಹ ಚಿತ್ರ)
ಶಿವಪ್ರಸಾದ್​ ಬಿ.
| Edited By: |

Updated on: Sep 05, 2023 | 9:00 AM

Share

ಬೆಂಗಳೂರು, (ಸೆಪ್ಟೆಂಬರ್ 05): ಬೆಂಗಳೂರಿನ(Bengaluru) ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿಯ ನೂರಾರು ಕೋಟಿ ರೂ. ಮೌಲ್ಯದ ಆಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಬ್ಯಾಂಕ್​ಗೆ ವಂಚನೆ ಸಂಬಂಧ ಕಂಪನಿಯ ಸ್ಥಿರ ಮತ್ತು ಚರಾಸ್ತಿ ಸೇರಿದಂತೆ ಬರೋಬ್ಬರಿ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ED) ಮುಟ್ಟುಗೋಲು ಹಾಕಿದೆ. ಬೆಂಗಳೂರು ನಗರದಲ್ಲಿರುವ ರೆಸಿಡೆನ್ಷಿಯಲ್ ನಿವೇಶನಗಳು, ಕಮರ್ಷಿಯಲ್ ಪ್ರಾಪರ್ಟಿ, ಫಾರ್ಮ್​ಹೌಸ್ ಸೇರಿದಂತೆ 104.90 ಕೋಟಿ ಮೌಲ್ಯದ ಆಸ್ತಿ ಹಾಗೂ 14.5 ಲಕ್ಷ ನಗದು ಜಪ್ತಿ ಮಾಡಲಾಗಿದೆ.

ಸ್ಟೇಟ್ ಬ್ಯಾಂಕ್ ಆಫ್​ ಇಂಡಿಯಾಗೆ 113.38 ಕೋಟಿ ರೂಪಾಯಿ ಸಾಲ ಉಳಿಸಿಕೊಂಡ ಆರೋಪ ಹಾಗೂ ಸಾಲದ ಹಣಕ್ಕಾಗಿ ಸುಳ್ಳು ದಾಖಲೆಗಳನ್ನು ನೀಡಿದ ಆರೋಪ ಭಾರತ್ ಇನ್ಫ್ರಾ ಎಕ್ಸ್​ಪೋರ್ಟ್ಸ್​​ ಆ್ಯಂಡ್ ಇಂಪೋರ್ಟ್ಸ್​ ಕಂಪನಿ ಮೇಲೆ ಕೇಳಿಬಂದಿತ್ತು. ಈ ಸಂಬಂಧ ಕಂಪನಿ, ಪ್ರಮೋಟರ್ಸ್ ಮತ್ತು ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಈ ಪ್ರಕರಣದಲ್ಲಿ ಪ್ರವೇಶಿಸಿದ್ದ ಇಡಿ, ಕಳೆದ ಜೂನ್​ನಲ್ಲಿ ಕಂಪನಿಗೆ ಸೇರಿದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಇದೀಗ ಕಂಪನಿಗೆ ಸೇರಿದ ಸ್ಥಿರ ಮತ್ತು ಚರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!