AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಮನಿಸಿ: ಹಬ್ಬ, ಭಾನುವಾರ, ಮುಷ್ಕರ ಸೇರಿ ಬ್ಯಾಂಕ್​ಗೆ ಸಾಲು ಸಾಲು ರಜೆ, ಅತಿ ಮುಖ್ಯ ಕೆಲಸವಿದ್ದರೆ ಈಗಲೇ ಮುಗಿಸಿಕೊಳ್ಳಿ

ಕೆಲ ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ ಮಾರ್ಚ್ 15, ಸೋಮವಾರ ಮತ್ತು ಮಾರ್ಚ್ 16ರ ಮಂಗಳವಾರದಂದು ಹಲವು ಬ್ಯಾಂಕ್‌ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಹಲವು ಬ್ಯಾಂಕ್‌ಗಳು ಬಂದ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ, ದೀರ್ಘ ರಜಾದಿನಗಳಿಂದಾಗಿ ಅನೇಕ ಬ್ಯಾಂಕ್ ಉದ್ಯೋಗಿಗಳು ಸಹ ರಜೆಯಲ್ಲಿರಬಹುದು.

ಗಮನಿಸಿ: ಹಬ್ಬ, ಭಾನುವಾರ, ಮುಷ್ಕರ ಸೇರಿ ಬ್ಯಾಂಕ್​ಗೆ ಸಾಲು ಸಾಲು ರಜೆ, ಅತಿ ಮುಖ್ಯ ಕೆಲಸವಿದ್ದರೆ ಈಗಲೇ ಮುಗಿಸಿಕೊಳ್ಳಿ
ಪ್ರಾತಿನಿಧಿಕ ಚಿತ್ರ
Skanda
|

Updated on:Mar 10, 2021 | 12:59 PM

Share

ಜನಸಾಮಾನ್ಯರಿಗೆ ಹಬ್ಬ ಹರಿದಿನಗಳನ್ನು ತಿಳಿಸುವ ಕ್ಯಾಲೆಂಡರ್​ ಎಷ್ಟು ಮುಖ್ಯವೋ, ಬ್ಯಾಂಕ್​ ರಜೆಗಳ ಪಟ್ಟಿಯೂ ಅಷ್ಟೇ ಮುಖ್ಯ. ವ್ಯವಹಾರ ಕಾರಣಗಳಿಗಾಗಿ ತುರ್ತು ಸಂದರ್ಭದಲ್ಲಿ ಬ್ಯಾಂಕ್​ಗೆ ತೆರಳಿದಾಗ ಅಪ್ಪಿತಪ್ಪಿ ಅಂದು ಬ್ಯಾಂಕ್​ಗೆ ರಜೆಯಿದ್ದರೆ ಭಾರೀ ಕಷ್ಟವಾಗಿಬಿಡುತ್ತದೆ. ಹಾಗಾಗಿ, ಹೆಚ್ಚಿನವರು ಹೊಸ ತಿಂಗಳು ಹತ್ತಿರವಾಗುತ್ತಿದ್ದಂತೆಯೇ ಯಾವ್ಯಾವ ದಿನ ಬ್ಯಾಂಕ್​ಗಳಿಗೆ ರಜೆ ಎಂದು ತಿಳಿದುಕೊಳ್ಳಲು ಇಷ್ಟಪಡುತ್ತಾರೆ. ಈ ಬಾರಿ ಮಾರ್ಚ್​ನಲ್ಲಿ ಒಟ್ಟು 7 ರಜೆಗಳಿದ್ದವು. ಜನರು ಸಹ ಯಾವ ಯಾವ ದಿನ ರಜೆ ಎಂಬುದನ್ನು ಗೊತ್ತು ಮಾಡಿಟ್ಟುಕೊಂಡಿದ್ದರು. ಆದರೀಗ ಬ್ಯಾಂಕ್​ ರಜೆಯಲ್ಲಿ ಒಮ್ಮೆಲೆ ಏರುಪೇರುಗಳಾಗಿವೆ. ಹೀಗಾಗಿ ಈಗಾಗಲೇ ಮಾಡಿಕೊಂಡಿರುವ ಯೋಜನೆಗಳ ಲೆಕ್ಕಾಚಾರವೂ ತಲೆಕೆಳಗಾಗುವ ಸಾಧ್ಯತೆ ಇದೆ.

ಮಾರ್ಚ್​ನಲ್ಲಿ ಶಿವರಾತ್ರಿ ಹೊರತುಪಡಿಸಿದರೆ ಬೇರೆ ಯಾವುದೇ ದೊಡ್ಡ ಹಬ್ಬ ಅಥವಾ ಸರ್ಕಾರಿ ದಿನಾಚರಣೆಗಳಿಲ್ಲ. ಸಾಧಾರಣವಾಗಿ ಮಾರ್ಚ್​ ತಿಂಗಳಲ್ಲಿ ಎಲ್ಲಾ ವಹಿವಾಟುದಾರರಿಗೂ ತುಸು ಹೆಚ್ಚೇ ಒತ್ತಡವಿದ್ದು, ಬ್ಯಾಂಕ್​ಗೆ ಯಾವ ಸಂದರ್ಭದಲ್ಲಿ ಹೋಗಬೇಕಾಗಿ ಬರಬಹುದು ಎಂದು ಹೇಳಲಾಗುವುದಿಲ್ಲ. ಕಳೆದ ಭಾನುವಾರದ ರಜೆ ಸೇರಿ ಈ ತಿಂಗಳಲ್ಲಿ ಮಾರ್ಚ್​ 11 (ಶಿವರಾತ್ರಿ), ಮಾರ್ಚ್​ 13(ಎರಡನೇ ಶನಿವಾರ), ಮಾರ್ಚ್​ 14 (ಭಾನುವಾರ), ಮಾರ್ಚ್​ 21 (ಭಾನುವಾರ), ಮಾರ್ಚ್​ 27 (ನಾಲ್ಕನೇ ಶನಿವಾರ), ಮಾರ್ಚ್​ 28 (ಭಾನುವಾರ) ಹೀಗೆ ಒಟ್ಟು 7 ದಿನಗಳು ರಜೆ ನಿಗದಿಯಾಗಿತ್ತು. ಮಾರ್ಚ್​ 12ರ ಶುಕ್ರವಾರ ಒಂದು ರಜೆ ಹಾಕಿದರೆ ಬ್ಯಾಂಕ್​ ಉದ್ಯೋಗಿಗಳಿಗೆ ಸತತ ನಾಲ್ಕು ದಿನಗಳ ರಜೆ ಸಿಗಲಿದೆ ಎಂಬ ಕಾರಣಕ್ಕೆ ಜನರು ಸಹ 15ನೇ ತಾರೀಖಿಗೆ ಬ್ಯಾಂಕ್​ಗೆ ಹೋಗುವುದು ಉತ್ತಮ ಎಂದು ಯೋಚಿಸಿದ್ದರು.

ಆದರೆ, ಈಗ ಕೆಲ ಅನಿರೀಕ್ಷಿತ ಬೆಳವಣಿಗೆಗಳಿಂದಾಗಿ ಮಾರ್ಚ್ 15, ಸೋಮವಾರ ಮತ್ತು ಮಾರ್ಚ್ 16ರ ಮಂಗಳವಾರದಂದು ಹಲವು ಬ್ಯಾಂಕ್‌ ಯೂನಿಯನ್‌ಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಹಲವು ಬ್ಯಾಂಕ್‌ಗಳು ಬಂದ್‌ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೇ, ದೀರ್ಘ ರಜಾದಿನಗಳಿಂದಾಗಿ ಅನೇಕ ಬ್ಯಾಂಕ್ ಉದ್ಯೋಗಿಗಳು ಸಹ ರಜೆಯಲ್ಲಿರಬಹುದು. ಹೀಗಾಗಿ ನಿಮಗೆ ಬ್ಯಾಂಕ್​ನಲ್ಲಿ ಮುಖ್ಯ ಕೆಲಸವೇನಾದರೂ ಇದ್ದರೆ ಇಂದು ಮುಗಿಸಿಕೊಳ್ಳುವುದೇ ಒಳಿತು.

ಬ್ಯಾಂಕ್ ರಜೆ ಮತ್ತು ಮುಷ್ಕರದ ನಡುವೆ ಶುಕ್ರವಾರವೇನೋ ಬ್ಯಾಂಕ್​ ತೆರೆದಿರುತ್ತದೆ. ಹಾಗಂತ ಅಂದಿಗೆ ಕೆಲಸ ಬಾಕಿ ಉಳಿಸಿಕೊಳ್ಳುವುದು ಅಷ್ಟು ಸೂಕ್ತವಲ್ಲ. ಕೇವಲ ಒಂದು ದಿನ ಮಾತ್ರ ಬ್ಯಾಂಕ್ ತೆರೆಯುವುದರಿಂದ ಶಾಖೆಯಲ್ಲಿ ಶುಕ್ರವಾರ ಹೆಚ್ಚು ಜನ ಬರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆ ನಿಮ್ಮ ಬ್ಯಾಂಕ್‌ ಕೆಲಸ ಇದ್ದರೆ, ಇಂದೇ ಹೋಗುವುದು ಒಳಿತು.

ಇದನ್ನೂ ಓದಿ: ಮಾರ್ಚ್​ ತಿಂಗಳಲ್ಲಿ ಬ್ಯಾಂಕ್​ಗೆ ಎಷ್ಟೆಲ್ಲಾ ದಿನ ರಜೆ ಇದೆ ಎಂಬ ಮಾಹಿತಿ ಇಲ್ಲಿದೆ

ಪಿಎಂ ಸ್ವನಿಧಿ ಯೋಜನೆ ಪ್ರಗತಿ ಪರಿಶೀಲನೆ: ಬ್ಯಾಂಕ್ ಅಧಿಕಾರಿಗಳಿಗೆ ಚಳಿ ಬಿಡಿಸಿದ ಸಿಎಂ

Published On - 12:57 pm, Wed, 10 March 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!