AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ.

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ
ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ
TV9 Web
| Edited By: |

Updated on: Jul 14, 2021 | 11:04 AM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಶುರುಮಾಡಿದೆ. ಆದರೆ ಪಬ್​ಗಳಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿಲ್ಲ. ಹೀಗಾಗಿ ಜುಲೈ 19ರ ನಂತರವಾದರೂ ಪಬ್​ಗಳನ್ನ ತೆರೆಯಲು ಅನುಮತಿ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ ಮಾಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗಿದೆ. 10 ತಿಂಗಳಿನಿಂದ ಪಬ್​ಗಳು ಸಂಪೂರ್ಣವಾಗಿ ಮುಚ್ಚಿವೆ. ಸರ್ಕಾರ ಈಗ ನಮ್ಮ ಗಾಯದ ಮೇಲೆ ಬರೆ ಎಳೆದಿದೆ ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಅಭಿಪ್ರಾಯಪಟ್ಟಿದ್ದಾರೆ.

ಕಳೆದ 10 ತಿಂಗಳಿನಿಂದ ಪಬ್ಗಳು ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಇಂಥಾ ದಯನೀಯ ಸ್ಥಿತಿಯಲ್ಲಿ ಪಬ್ ವ್ಯಾಪಾರ ಇರಲಿಲ್ಲ. ಸುಮಾರು 9.50 ಲಕ್ಷ ಲೈಸೆನ್ಸ್ ರಿನೀವಲ್ ಮೊತ್ತವನ್ನೂ ಪಬ್ ಮಾಲೀಕರಿಂದ ಕಟ್ಟಿಸಿಕೊಂಡಿದೆ. ವ್ಯಾಪಾರ ಇಲ್ಲದ ಮಾಲೀಕರಿಂದ ಇಷ್ಟು ಮೊತ್ತ ಕಟ್ಟಿಸಿಕೊಳ್ಳುವುದು ಸರಿಯೇ? ಎಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಪ್ರಶ್ನಿಸಿದ್ದಾರೆ.

ಪಬ್ ವ್ಯಾಪರ ಕೋಟಿ ಕೋಟಿ ಬಂಡವಾಳ ಹೂಡಿಕೆಯಿಂದ ಆರಂಭಿಸುವುದು. ಆದರೆ ಕಳೆದ ಒಂದು ವರ್ಷದಲ್ಲಿ ವ್ಯಾಪಾರ ಇಲ್ಲದೆ ಪಬ್ ಕ್ಷೇತ್ರ ಮುಳುಗಿ ಹೋಗಿದೆ. ಬೆಂಗಳೂರಿನಲ್ಲಿ ಸುಮಾರು 300 ಪಬ್ಗಳ ಸ್ಥಿತಿ ದಯನೀಯ ಸ್ಥಿತಿಯಲ್ಲಿದೆ. ಜುಲೈ 19ರ ನಂತರ ಎಲ್ಲಾ ಕ್ಷೇತ್ರಗಳಂತೆ ಪಬ್​ಗಳನ್ನು ತೆರೆಯುವುದಕ್ಕೆ ಅನುಮತಿ ನೀಡಬೇಕೆಂದು ಅಸೋಸಿಯೇಷನ್ ಅಧ್ಯಕ್ಷ ಕರುಣಾಕರ ಹೆಗ್ಡೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ

Karnataka Rain: ಕೊಡಗಿನಲ್ಲಿ ಮುಂದುವರಿದ ವರುಣ; ಕಾವೇರಿ, ಲಕ್ಷ್ಮಣ ತೀರ್ಥ ನದಿಗಳ ನೀರಿನ ಮಟ್ಟ ಏರಿಕೆ

ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಮೈನಿಂಗ್ ಕಾಲೇಜು; ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಸಕಲ ಸಿದ್ಧತೆ

(Bar and Pub Association has appealed to the Karnataka government to open the pubs from July 19)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?