AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರ ವಕೀಲಿಕೆಯ ಸನ್ನದು ಅಮಾನತುಪಡಿಸಲು ಶಿಫಾರಸು

ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್​​ಗೆ ವಿಚಾರಣಾ ವರದಿ ಸಲ್ಲಿಕೆಯಾಗಿದೆ. ವರದಿಯಲ್ಲಿ ವಕೀಲೆ ವಿರುದ್ಧ ದುರ್ನಡತೆಯ ಆರೋಪ ಉಲ್ಲೇಖಿಸಲಾಗಿದೆ.

ಪ್ರೊ.ಕೆ.ಎಸ್. ಭಗವಾನ್ ಮುಖಕ್ಕೆ ಮಸಿ ಬಳಿದ ಮೀರಾ ರಾಘವೇಂದ್ರ ವಕೀಲಿಕೆಯ ಸನ್ನದು ಅಮಾನತುಪಡಿಸಲು ಶಿಫಾರಸು
K.S.ಭಗವಾನ್ (ಎಡ); ವಕೀಲೆ ಮೀರಾ (ಬಲ)
KUSHAL V
|

Updated on:Feb 26, 2021 | 6:02 PM

Share

ಬೆಂಗಳೂರು: ಪ್ರೊ.ಕೆ.ಎಸ್.ಭಗವಾನ್ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲೆ ಮೀರಾ ರಾಘವೇಂದ್ರ ವಿರುದ್ಧ ಕರ್ನಾಟಕ ಬಾರ್ ಕೌನ್ಸಿಲ್​​ಗೆ ವಿಚಾರಣಾ ವರದಿ ಸಲ್ಲಿಕೆಯಾಗಿದೆ. ವರದಿಯಲ್ಲಿ ವಕೀಲೆ ವಿರುದ್ಧ ದುರ್ನಡತೆಯ ಆರೋಪ ಉಲ್ಲೇಖಿಸಲಾಗಿದೆ. ಜೊತೆಗೆ, ಮೀರಾ ರಾಘವೇಂದ್ರ ಅವರ ವಕೀಲಿಕೆಯ ಸನ್ನದು ಅಮಾನತುಪಡಿಸಲು ಶಿಫಾರಸು ಮಾಡಲಾಗಿದೆ. ಬಾರ್ ಕೌನ್ಸಿಲ್ ಉಪಸಮಿತಿಯಿಂದ ಶಿಫಾರಸು ಮಾಡಲಾಗಿದೆ.

ಬಾರ್​ ಕೌನ್ಸಿಲ್​ ಸದಸ್ಯರಾದ ಎನ್.ಶಿವಕುಮಾರ್, ಎಂ.ದೇವರಾಜ ಹಾಗೂ M.N.ಮಧುಸೂದನ್​ರೊಳಗೊಂಡ ಉಪಸಮಿತಿ ವಿಚಾರಣೆ ನಡೆಸಲಿದೆ. ಹಾಗಾಗಿ, ಶಿಸ್ತು ವಿಚಾರಣೆ ಮುಗಿಯುವವರೆಗೆ ಮೀರಾ ರಾಘವೇಂದ್ರ ಅವರ ವಕೀಲಿಕೆಯ ಸನ್ನದು ಅಮಾನತಿಗೆ ಶಿಫಾರಸು ಮಾಡಲಾಗಿದೆ.

ಏನಿದು ಪ್ರಕರಣ? ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಸಾಹಿತಿ ಭಗವಾನ್‌ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಸಿ ಬಳಿದಿದ್ದರು. ಇಷ್ಟು ವಯಸ್ಸಾಗಿದೆ. ಇನ್ನೂ  ನಾಚಿಕೆಯಾಗಲ್ವಾ? ರಾಮನ ಬಗ್ಗೆ ಧರ್ಮದ ಬಗ್ಗೆ ಮಾತಾನಾಡ್ತೀರಾ ಎಂದು ವಕೀಲೆ ಮೀರಾ, ಭಗವಾನ್ ಅವರಿಗೆ ಆವಾಜ್ ಹಾಕಿ ಮುಖಕ್ಕೆ ಮಸಿ ಬಳಿದಿದ್ದರು.

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟ ಹಿನ್ನೆಲೆಯಲ್ಲಿ ಸಾಹಿತಿ ಕೆ.ಎಸ್​.ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ಇಬ್ಬರ ವಿರುದ್ಧ ಕೇಸ್‌ ದಾಖಲಾಗಿತ್ತು. ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು.

ಭಗವಾನ್​ ಮುಖಕ್ಕೆ ಮಸಿ ಬಳಿಸಿದ್ದ ವಕೀಲೆ ಮೀರಾ ಮತ್ತು ಅವರ ಪತಿ ರಾಘವೇಂದ್ರ ವಿರುದ್ಧ ಮೊಕದ್ದಮೆ ದಾಖಲಾಗಿತ್ತು. ಕೋರ್ಟ್‌ ಆವರಣದಲ್ಲೇ ಹಲ್ಲೆ ಹಾಗೂ ಬೆದರಿಕೆ ಹಾಕಿದ ಆರೋಪದಡಿ ಇಬ್ಬರ ವಿರುದ್ಧ ಮೊಕದ್ದಮೆ ದಾಖಲಾಗಿತ್ತು.

ಮೈಸೂರಿಗೆ ಹೋಗುವಷ್ಟರಲ್ಲಿ ನಮ್ಮ ಹುಡುಗರು ನಿನ್ನನ್ನು ಕೊಲ್ಲಲಿದ್ದಾರೆ. ಗೌರಿ ಲಂಕೇಶ್, ಎಂ.ಎಂ.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ ಎಂದು ವಕೀಲೆ ಪ್ರೊ.ಕೆ.ಎಸ್. ಭಗವಾನ್‌ಗೆ ಕೊಲೆ ಬೆದರಿಕೆ ಒಡ್ಡಿದ್ದಾರೆ ಎಂಬ ಆರೋಪದಡಿ ಐಪಿಸಿ ಸೆಕ್ಷನ್ 506, 341, 34 ಹಾಗೂ 504ರಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಗೌರಿ ಲಂಕೇಶ್, M.M.ಕಲಬುರ್ಗಿ ಜೊತೆಗೆ ನಿನ್ನನ್ನೂ ಕಳಿಸ್ತೇವೆ -ಭಗವಾನ್ ಮುಖಕ್ಕೆ ಮಸಿ ಬಳಿದಿದ್ದ ವಕೀಲೆ ವಿರುದ್ಧ ಕೇಸ್‌ ದಾಖಲು

ಇದನ್ನೂ ಓದಿ: ಭಗವಾನ್ ಮೇಲೆ ವಕೀಲೆ ಮೀರಾ ಮಸಿ ಬಳಿದಿದ್ದು ಸರಿ ಅಲ್ಲ, ಆದರೆ.. -ಸಚಿವ ಸುರೇಶ್ ಕುಮಾರ್

Published On - 6:00 pm, Fri, 26 February 21

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ