AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯ ಪರ್ವತ ದಾಟಿ ಕಬಿನಿಗೆ ಬರುತ್ತವೆ ಈ ಹೆಬ್ಬಾತುಗಳು; ಆಹಾರಕ್ಕಾಗಿ 8 ಸಾವಿರ ಕಿ.ಮೀ ಸಂಚಾರ

ಮೈಸೂರಿನ ಕಬಿನಿ ಹಿನ್ನೀರು, ಹದಿನಾರು ಕೆರೆ ಹಾಗೂ ಗದಗ ಜಿಲ್ಲೆಯ ಮಾಗಡಿ ಕೆರೆಯಲ್ಲಿ ಇವುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ‌. ಇವುಗಳು ವಲಸೆ ಬರುವಾಗಲು ಸಾವಿರಾರು ಸಂಖ್ಯೆಯಲ್ಲಿ ವಲಸೆ ಬರುತ್ತವೆ.

ಹಿಮಾಲಯ ಪರ್ವತ ದಾಟಿ ಕಬಿನಿಗೆ ಬರುತ್ತವೆ ಈ ಹೆಬ್ಬಾತುಗಳು; ಆಹಾರಕ್ಕಾಗಿ 8 ಸಾವಿರ ಕಿ.ಮೀ ಸಂಚಾರ
ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಬಾರ್ ಹೆಡ್ ಗೂಸ್ ಪಕ್ಷಿಗಳ ವಿಹಾರ
ರಾಜೇಶ್ ದುಗ್ಗುಮನೆ
| Edited By: |

Updated on: Dec 10, 2020 | 7:35 AM

Share

ಮೈಸೂರು: ಪ್ರತಿ ವರ್ಷ ಆಹಾರಕ್ಕಾಗಿ ದೂರದ ಮಂಗೋಲಿಯಾದಿಂದ ದಕ್ಷಿಣ ಭಾರತಕ್ಕೆ ಬಾರ್ ಹೆಡೆಡ್ ಗೂಸ್ (ಹೆಬ್ಬಾತು) ಹಕ್ಕಿಗಳು ವಲಸೆ ಬರುತ್ತವೆ. ಈ ವರ್ಷ ಕೂಡ ಮೈಸೂರಿನ ಹೆಚ್.ಡಿ.ಕೋಟೆಯ ಕಬಿನಿಯ ಹಿನ್ನೀರಿನಲ್ಲಿ ಹೆಬ್ಬಾತುವಿನ ತಂಡವೊಂದು ಬೀಡು ಬಿಟ್ಟಿದ್ದು, ಪಕ್ಷಿಗಳ ಕಲರವ ಜೋರಾಗಿದೆ.

ಈ ಪಕ್ಷಿಗಳು ನವೆಂಬರ್ ಕೊನೆಯ ವಾರದಲ್ಲಿ ಅಥವಾ ಡಿಸೆಂಬರ್​​ನಲ್ಲಿ ವಲಸೆ ಬಂದು‌ ಮೂರು ತಿಂಗಳ ಕಾಲ ಇಲ್ಲೇ ಇರುತ್ತವೆ. ನಂತರ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ಮರಳಿ ತೆರಳುತ್ತವೆ. ಇವು ಹಿಮಾಲಯ ಪರ್ವತ ದಾಟಿಕೊಂಡು ದಕ್ಷಿಣ ಭಾರತದ ಕಡೆ ವಲಸೆ ಬರುತ್ತವೆ ಅನ್ನೋದು ವಿಶೇಷ.

ಮೈಸೂರಿನ ಕಬಿನಿ ಹಿನ್ನೀರು, ಹದಿನಾರು ಕೆರೆ ಹಾಗೂ ಗದಗ ಜಿಲ್ಲೆಯ ಮಾಗಡಿ ಕೆರೆಯಲ್ಲಿ ಇವುಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ‌. ಇವುಗಳು ವಲಸೆ ಬರುವಾಗಲು ಸಾವಿರಾರು ಸಂಖ್ಯೆಯಲ್ಲಿ ವಲಸೆ ಬರುತ್ತವೆ. ಪ್ರಯಾಣದಲ್ಲಿ ಸಿಗುವ ಮರಳುಗಾಡು, ಸಮುದ್ರ, ಎತ್ತರದ ಬೆಟ್ಟ ಗುಡ್ಡ ಪರ್ವತಗಳನ್ನ ದಾಟಿ ಇವು ಬರಬೇಕಾಗುತ್ತದೆ.

ವಲಸೆಗೆ ಕಾರಣವೇನು? ಬಾರ್ ಹೆಡೆಡ್ ಗೂಸ್​​ಗಳು ಮೈಸೂರಿಗೆ ಬರೋಕೆ ಮುಖ್ಯ ಕಾರಣ ಆಹಾರ. ಇದಕ್ಕಾಗಿ ಇವು ಸುಮಾರು ಎಂಟು ಸಾವಿರ ಕಿ.ಮೀ ದೂರ ಬರುತ್ತವೆ. 18 ಸಾವಿರ ಅಡಿಗಳ ಎತ್ತರದಲ್ಲಿರುವ ಹಿಮಾಲಯ ಪರ್ವತವನ್ನು ಹಾರಿ ಭಾರತ ತಲುಪುತ್ತವೆ. ಇದರಿಂದ ಇವುಗಳನ್ನು ಪರ್ವತ ಹಕ್ಕಿಗಳು ಎಂದು ಕರೆಯುವುದುಂಟು. ಮಂಗೋಲಿಯಾ ಈ ಸಂದರ್ಭದಲ್ಲಿ ಹಿಮದಿಂದ ಆವೃತ್ತವಾಗಿರುತ್ತದೆ. ಹೀಗಾಗಿ ಅವುಗಳಿಗೆ ಆಹಾರದ ಕೊರತೆ ಉಂಟಾಗುತ್ತವೆ. ಹೀಗಾಗಿ ಇವುಗಳು ಆಹಾರಕ್ಕಾಗಿ ಸುರಕ್ಷಿತ ಸ್ಥಳವನ್ನು ಹುಡುಕಿಕೊಂಡು ದಕ್ಷಿಣ ಭಾರತದ ಕಡೆ ವಲಸೆ ಬರುತ್ತವೆ.

ಸುರಕ್ಷತೆ ಬಗ್ಗೆ ಗಮನ ಹರಿಸುವ ಹಕ್ಕಿಗಳು ನಿಶಾಚಾರಿ ಹಕ್ಕಿಗಳಾಗಿರುವ ಹೆಬ್ಬಾತುಗಳು ರಾತ್ರಿಯ ವೇಳೆ ಆಹಾರಕ್ಕಾಗಿ ಹುಡುಕಾಟ ನಡೆಸುತ್ತವೆ. ಹಗಲಿನ ವೇಳೆ ಬೇಟೆಗಾರರು ಹಾಗೂ ಇತರೆ ಪ್ರಾಣಿಗಳ ಅಪಾಯದಿಂದ ತಪ್ಪಿಸಿಕೊಳ್ಳಲು ನೀರಿನ ಮಧ್ಯದಲ್ಲಿ ತೇಲುತ್ತಿರುತ್ತವೆ. ಅಪಾಯ ಉಂಟಾದ ಸ್ಥಳಕ್ಕೆ ಮರಳಿ ಬರುವುದು ತುಂಬಾನೇ ಅಪರೂಪ. ಒಂದು ವೇಳೆ ಅಪಾಯ ಆಗದಿದ್ದರೆ,  ಆ ಸ್ಥಳಗಳ ಕಡೆ ಮತ್ತೆ ವಲಸೆ ಬರುತ್ತವೆ.

ಅಧ್ಯಾಯನಕ್ಕಾಗಿ ಕೊರಳು ಪಟ್ಟಿ ಪಕ್ಷಿಗಳ ಸಂಶೋಧನಾ ದೃಷ್ಟಿಯಿಂದ ವಿಜ್ಞಾನಿಗಳು ಈ ಬಾರ್ ಹೆಡೆಡ್ ಗೂಸ್ ಪಕ್ಷಿಯ ಕತ್ತಿನ ಭಾಗಕ್ಕೆ ಅಥವ ಕಾಲಿಗೆ ಪಟ್ಟಿಯನ್ನು ಹಾಕಿ ಕಳುಹಿಸುತ್ತಾರೆ. ಗುಂಪಾಗಿ ವಲಸೆ ಹೋಗುವ ಕಾರಣ ಗುಂಪಿನ ಒಂದೆರಡು ಪಕ್ಷಿಗಳಿಗೆ ಕೊರಳ ಪಟ್ಟಿಯಲ್ಲಿ ಸಂಖ್ಯೆಯನ್ನು ನಮೂದಿಸಿ ಹಾಕಲಾಗುತ್ತದೆ. ಇದರಿಂದ ಈ ಹಕ್ಕಿಗಳು ಎಲ್ಲಿಗೆ ವಲಸೆ ಹೋಗಿದ್ದವು, ಎಷ್ಟು ದೂರು ಕ್ರಮಿಸಿದವು ಎನ್ನುವ ಮಾಹಿತಿಯನ್ನು ಸಂಗ್ರಹಿಸಲು ಸಹಕಾರಿಯಾಗುತ್ತದೆ. ಇನ್ನು ಕೊರಳಿಗೆ ಹಾಕುವ ಪಟ್ಟಿಗಳು ಮೃದುವಾಗಿರುವುದರಿಂದ ಪಕ್ಷಿಗಳ ಪ್ರಾಣಕ್ಕೆ ಯಾವುದೇ ತೊಂದರೆ ಇರುವುದಿಲ್ಲ.

ಮೈಸೂರಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಬಾರ್ ಹೆಡ್ ಗೂಸ್ ಪಕ್ಷಿಗಳ ವಿಹಾರ

ವಿದ್ಯಾಕಾಶಿಯಲ್ಲಿ ಹಕ್ಕಿಗಳ ಮಾರಣಹೋಮ: ಔಷಧಕ್ಕೆಂದು ಸದ್ದಿಲ್ಲದೆ ಮಾಯವಾಗ್ತಿದೆ ಪಕ್ಷಿ ಸಂಕುಲ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು