AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ

ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಆಗಮಿಸಿದ್ದಕ್ಕೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಟ್ವೀಟ್​ ಮೂಲಕ ಸರ್ಕಾರದ ವಿರುದ್ಧ​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ
ಬಸನಗೌಡ ಪಾಟೀಲ್​ ಯತ್ನಾಳ್
ಪ್ರಸನ್ನ ಗಾಂವ್ಕರ್​
| Edited By: |

Updated on: Aug 06, 2024 | 3:01 PM

Share

ಬೆಂಗಳೂರು, ಆಗಸ್ಟ್​ 06: ಬೆಂಗಳೂರಿನ (Bengaluru) ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಮುಸ್ಲಿಂ ಮೌಲ್ವಿ ಬಂದಿದ್ದು, ಇದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ (Sheikh Abubakar Ahmed) ಸರ್ಕಾರದ “ಜಿ” ಸಿರೀಸ್​ನ ಕಾರಿನಲ್ಲಿ ಪೊಲೀಸ್​ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ ಕಾರಿನಲ್ಲಿ ಬಂದಿರುವ ವಿಡಿಯೋವನ್ನು ಶಾಸಕ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ಪೊಲೀಸ್ ಭದ್ರತೆ ಹಾಗೂ ಪೊಲೀಸ್​ ಭದ್ರತೆ ಮತ್ತು ಪ್ರೊಟೋಕಾಲ್​​ ಅನ್ನು ನೀಡಲಾಗಿದೆ. ಅಲ್ಲದೆ, “ಜಿ” ಸಿರಿಸ್​ನ ಸರ್ಕಾರಿ ಕಾರಿನಲ್ಲಿ ಏಕೆ ಬಂದರು? ಇದು ಶಿಷ್ಟಾಚಾರದ ನಿಯಮಗಳ ಉಲ್ಲಂಘನೆಯಲ್ಲವೇ? ಎಂದು ಸರ್ಕಾರಕ್ಕೆ ಯತ್ನಾಳ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅನುಮಾನಾಸ್ಪದ ಸಾವು: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್

ಅಲ್ಪಸಂಖ್ಯಾತರ ಮತಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ಮುಖಂಡರಿಗೆ ಅನುಕೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ನಿಯಮಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ತೆರಿಗೆದಾರರ ಹಣ ವ್ಯರ್ಥವೂ ಆಗಿದೆ. ರಾಜ್ಯವು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಸಂದರ್ಭದಲ್ಲಿ ಸರ್ಕಾರ ಈ ರೀತಿ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು