ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ

ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್ ಸರ್ಕಾರದ ಕಾರಿನಲ್ಲಿ ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಆಗಮಿಸಿದ್ದಕ್ಕೆ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಟ್ವೀಟ್​ ಮೂಲಕ ಸರ್ಕಾರದ ವಿರುದ್ಧ​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ಕಾರಿನಲ್ಲಿ ಬಂದ ಮೌಲ್ವಿ: ಬಸನಗೌಡ ಪಾಟೀಲ್​ ಯತ್ನಾಳ್​ ಆಕ್ರೋಶ
ಬಸನಗೌಡ ಪಾಟೀಲ್​ ಯತ್ನಾಳ್
Edited By: ವಿವೇಕ ಬಿರಾದಾರ

Updated on: Aug 06, 2024 | 3:01 PM

ಬೆಂಗಳೂರು, ಆಗಸ್ಟ್​ 06: ಬೆಂಗಳೂರಿನ (Bengaluru) ಸಿಎಂ ಕಾನ್ವೆನ್ಶನ್​​ನಲ್ಲಿ ನಡೆದ ಸುನ್ನಿ ಕೋಆರ್ಡಿನೇಷನ್​ ಕಾರ್ಯಕ್ರಮಕ್ಕೆ ಮುಸ್ಲಿಂ ಮೌಲ್ವಿ ಬಂದಿದ್ದು, ಇದಕ್ಕೆ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (Basangouda Patil Yatnal)​ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ (Sheikh Abubakar Ahmed) ಸರ್ಕಾರದ “ಜಿ” ಸಿರೀಸ್​ನ ಕಾರಿನಲ್ಲಿ ಪೊಲೀಸ್​ ಭದ್ರತೆಯಲ್ಲಿ ಬಂದಿದ್ದರು. ಮೌಲ್ವಿ ಶೇಖ್ ಅಬೂಬಕರ್ ಅಹ್ಮದ್​​ ಸರ್ಕಾರದ ಕಾರಿನಲ್ಲಿ ಬಂದಿರುವ ವಿಡಿಯೋವನ್ನು ಶಾಸಕ ಯತ್ನಾಳ್​ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಪೋಸ್ಟ್​ ಮಾಡಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರಕ್ಕೆ ಸಂಬಂಧವಿಲ್ಲದ ವ್ಯಕ್ತಿಗೆ ಪೊಲೀಸ್ ಭದ್ರತೆ ಹಾಗೂ ಪೊಲೀಸ್​ ಭದ್ರತೆ ಮತ್ತು ಪ್ರೊಟೋಕಾಲ್​​ ಅನ್ನು ನೀಡಲಾಗಿದೆ. ಅಲ್ಲದೆ, “ಜಿ” ಸಿರಿಸ್​ನ ಸರ್ಕಾರಿ ಕಾರಿನಲ್ಲಿ ಏಕೆ ಬಂದರು? ಇದು ಶಿಷ್ಟಾಚಾರದ ನಿಯಮಗಳ ಉಲ್ಲಂಘನೆಯಲ್ಲವೇ? ಎಂದು ಸರ್ಕಾರಕ್ಕೆ ಯತ್ನಾಳ್​ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಿಎಸ್​ಐ ಅನುಮಾನಾಸ್ಪದ ಸಾವು: ಸಿದ್ದರಾಮಯ್ಯ ವಿರುದ್ಧ ರೊಚ್ಚಿಗೆದ್ದ ಶಾಸಕ ಯತ್ನಾಳ್

ಅಲ್ಪಸಂಖ್ಯಾತರ ಮತಗಳನ್ನು ಗಮನದಲ್ಲಿಟ್ಟುಕೊಂಡು ಧಾರ್ಮಿಕ ಮುಖಂಡರಿಗೆ ಅನುಕೂಲಗಳು ಮತ್ತು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಇದು ನಿಯಮಗಳಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ತೆರಿಗೆದಾರರ ಹಣ ವ್ಯರ್ಥವೂ ಆಗಿದೆ. ರಾಜ್ಯವು ಮಳೆಯ ಅಬ್ಬರಕ್ಕೆ ತತ್ತರಿಸಿರುವ ಸಂದರ್ಭದಲ್ಲಿ ಸರ್ಕಾರ ಈ ರೀತಿ ಮಾಡುವುದು ಸರಿಯಲ್ಲ ಎಂದು ವಾಗ್ದಾಳಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us