AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ತಿಂಗಳ ತನಕ 2ಎ ಮೀಸಲಾತಿ ಹೋರಾಟ ಸ್ಥಗಿತಗೊಳಿಸಿ: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ ಯತ್ನಾಳ್​ ಮನವಿ

ಮೀಸಲಾತಿ ವಿಚಾರವಾಗಿ ಆರೇಳು ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ಕೊಡಲು ಹೇಳುತ್ತೇವೆ, ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಆರು ತಿಂಗಳ ತನಕ 2ಎ ಮೀಸಲಾತಿ ಹೋರಾಟ ಸ್ಥಗಿತಗೊಳಿಸಿ: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ ಯತ್ನಾಳ್​ ಮನವಿ
ಬಸನಗೌಡ ಪಾಟೀಲ್​ ಯತ್ನಾಳ್​ ಮತ್ತು ಬಿ.ಎಸ್​.ಯಡಿಯೂರಪ್ಪ
Follow us
Skanda
|

Updated on: Mar 15, 2021 | 11:41 AM

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಬಸನಗೌಡ ಪಾಟೀಲ್ ಯತ್ನಾಳ್ ಸದನದಲ್ಲಿ ಮಾತನಾಡುತ್ತಾ ಮನವಿ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಅವಧಿಯ ನಡುವೆಯೂ ಪಂಚಮಸಾಲಿ ಸಮುದಾಯದ ವಿಚಾರವನ್ನು ಪ್ರಸ್ತಾಪಿಸಿದ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿಗಳಿಂದ ಉತ್ತರ ಅಪೇಕ್ಷಿಸಿದರು. ಈ ವೇಳೆ ಪ್ರತ್ಯುತ್ತರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೀಸಲಾತಿ ವಿಚಾರವಾಗಿ ಆರೇಳು ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ಕೊಡಲು ಹೇಳುತ್ತೇವೆ, ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಸ್ವಾಮೀಜಿಗಳು ಧರಣಿ ವಾಪಸ್ ಪಡೆಯಬೇಕು ಎಂದು ಕೇಳಿಕೊಂಡರು.

ಮುಖ್ಯಮಂತ್ರಿಗಳು ಭರವಸೆ ನೀಡಿದ ನಂತರ ಆರಂಭದಲ್ಲಿ ಅದನ್ನು ಒಪ್ಪಿಕೊಳ್ಳದ ಬಸನಗೌಡ ಪಾಟೀಲ್​ ಯತ್ನಾಳ್, ಆರು ತಿಂಗಳ ಒಳಗೆ ಕ್ರಮ ಕೈಗೊಳ್ಳುವ ಭರವಸೆ ಅಷ್ಟೇ ನಾವು ಕೇಳುತ್ತಿದ್ದೇವೆ. ಅಷ್ಟರಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ ತರಿಸಿ ಕ್ರಮ ಕೈಗೊಳ್ಳಲೇಬೇಕು ಒಂದು ಒತ್ತಾಯಿಸಿದರು. ನಂತರ ಮತ್ತೆ ಭರವಸೆಯ ಮಾತುಗಳನ್ನಾಡಿದ ಯಡಿಯೂರಪ್ಪ, ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದಾಗ ಅದರಿಂದ ಸಮಾಧಾನಗೊಂಡ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿಗಳಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸಿ, ಹೋರಾಟ 6ತಿಂಗಳ ತನಕ ಮೊಟಕುಗೊಳಿಸೋಣ. ನಂತರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ನೀಡಲು ಪೂರಕ ದಾಖಲೆ ಸಲ್ಲಿಸಬೇಕು: ಹಿಂದುಳಿದ ವರ್ಗಗಳ ಆಯೋಗದಿಂದ ಸ್ವಾಮೀಜಿಗೆ ನೋಟಿಸ್ 

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಯಾವುದೇ ಕ್ಷಣದಲ್ಲಿ ಕೆಆರ್​ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬಾಲ್ಯವಿವಾಹದಲ್ಲಿ ಭಾಗಿಯಾಗುವುದೂ ಶಿಕ್ಷಾರ್ಹ ಅಪರಾಧವಾಗಿದೆ!
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಬ್ಯಾಚುಲರ್ಸ್ ವೇದಿಕೆ ಮೇಲೆ ಡ್ಯಾನ್ಸ್; ಎಲ್ಲರನ್ನೂ ಮೀರಿಸಿದ ರವಿಚಂದ್ರನ್
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಪೊಲೀಸ್ ವಾಹನದ ಬಾನೆಟ್​ ಮೇಲೆ ಕೇಕ್ ಕತ್ತರಿಸಿದ ಪೊಲೀಸ್ ಅಧಿಕಾರಿ ಪತ್ನಿ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
ಬೆಂಗಳೂರಿಗೆ ಬಂದ ಅಮಿತ್ ಶಾಗೆ ಬಿವೈವಿ, ಯಡಿಯೂರಪ್ಪ ಸ್ವಾಗತ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್