AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ತಿಂಗಳ ತನಕ 2ಎ ಮೀಸಲಾತಿ ಹೋರಾಟ ಸ್ಥಗಿತಗೊಳಿಸಿ: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ ಯತ್ನಾಳ್​ ಮನವಿ

ಮೀಸಲಾತಿ ವಿಚಾರವಾಗಿ ಆರೇಳು ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ಕೊಡಲು ಹೇಳುತ್ತೇವೆ, ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ ಹಿನ್ನೆಲೆಯಲ್ಲಿ ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಬಸನಗೌಡ ಪಾಟೀಲ್ ಯತ್ನಾಳ್ ಮನವಿ ಮಾಡಿದ್ದಾರೆ.

ಆರು ತಿಂಗಳ ತನಕ 2ಎ ಮೀಸಲಾತಿ ಹೋರಾಟ ಸ್ಥಗಿತಗೊಳಿಸಿ: ಪಂಚಮಸಾಲಿ ಸಮುದಾಯದ ಸ್ವಾಮೀಜಿಗಳಿಗೆ ಯತ್ನಾಳ್​ ಮನವಿ
ಬಸನಗೌಡ ಪಾಟೀಲ್​ ಯತ್ನಾಳ್​ ಮತ್ತು ಬಿ.ಎಸ್​.ಯಡಿಯೂರಪ್ಪ
Skanda
|

Updated on: Mar 15, 2021 | 11:41 AM

Share

ಬೆಂಗಳೂರು: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಒದಗಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಮುದಾಯದ ಸ್ವಾಮೀಜಿಗಳು ಆರು ತಿಂಗಳ ಕಾಲ ಹೋರಾಟವನ್ನು ಸ್ಥಗಿತಗೊಳಿಸಬೇಕೆಂದು ಬಸನಗೌಡ ಪಾಟೀಲ್ ಯತ್ನಾಳ್ ಸದನದಲ್ಲಿ ಮಾತನಾಡುತ್ತಾ ಮನವಿ ಮಾಡಿದ್ದಾರೆ. ಸದನ ಆರಂಭವಾಗುತ್ತಿದ್ದಂತೆಯೇ ಪ್ರಶ್ನೋತ್ತರ ಅವಧಿಯ ನಡುವೆಯೂ ಪಂಚಮಸಾಲಿ ಸಮುದಾಯದ ವಿಚಾರವನ್ನು ಪ್ರಸ್ತಾಪಿಸಿದ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿಗಳಿಂದ ಉತ್ತರ ಅಪೇಕ್ಷಿಸಿದರು. ಈ ವೇಳೆ ಪ್ರತ್ಯುತ್ತರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮೀಸಲಾತಿ ವಿಚಾರವಾಗಿ ಆರೇಳು ತಿಂಗಳಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ, ಸಮಿತಿ ವರದಿ ಕೊಡಲು ಹೇಳುತ್ತೇವೆ, ನಂತರ ಸೂಕ್ತ ಕ್ರಮ ಕೈಗೊಳ್ಳುತ್ತೇವೆ. ಸ್ವಾಮೀಜಿಗಳು ಧರಣಿ ವಾಪಸ್ ಪಡೆಯಬೇಕು ಎಂದು ಕೇಳಿಕೊಂಡರು.

ಮುಖ್ಯಮಂತ್ರಿಗಳು ಭರವಸೆ ನೀಡಿದ ನಂತರ ಆರಂಭದಲ್ಲಿ ಅದನ್ನು ಒಪ್ಪಿಕೊಳ್ಳದ ಬಸನಗೌಡ ಪಾಟೀಲ್​ ಯತ್ನಾಳ್, ಆರು ತಿಂಗಳ ಒಳಗೆ ಕ್ರಮ ಕೈಗೊಳ್ಳುವ ಭರವಸೆ ಅಷ್ಟೇ ನಾವು ಕೇಳುತ್ತಿದ್ದೇವೆ. ಅಷ್ಟರಲ್ಲಿ ಹಿಂದುಳಿದ ವರ್ಗದ ಆಯೋಗದ ವರದಿ ತರಿಸಿ ಕ್ರಮ ಕೈಗೊಳ್ಳಲೇಬೇಕು ಒಂದು ಒತ್ತಾಯಿಸಿದರು. ನಂತರ ಮತ್ತೆ ಭರವಸೆಯ ಮಾತುಗಳನ್ನಾಡಿದ ಯಡಿಯೂರಪ್ಪ, ವರದಿ ಬಂದ ಕೂಡಲೇ ಕ್ರಮ ಕೈಗೊಳ್ಳುವುದಾಗಿ ತಿಳಿಸಿದಾಗ ಅದರಿಂದ ಸಮಾಧಾನಗೊಂಡ ಬಸನಗೌಡ ಪಾಟೀಲ್​ ಯತ್ನಾಳ್​ ಮುಖ್ಯಮಂತ್ರಿಗಳಿಗೆ ಸದನದಲ್ಲಿ ಅಭಿನಂದನೆ ಸಲ್ಲಿಸಿ, ಹೋರಾಟ 6ತಿಂಗಳ ತನಕ ಮೊಟಕುಗೊಳಿಸೋಣ. ನಂತರ ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ನಾವು ನಿಮ್ಮೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿ ನೀಡಲು ಪೂರಕ ದಾಖಲೆ ಸಲ್ಲಿಸಬೇಕು: ಹಿಂದುಳಿದ ವರ್ಗಗಳ ಆಯೋಗದಿಂದ ಸ್ವಾಮೀಜಿಗೆ ನೋಟಿಸ್ 

ಇನ್ನೂ ಹಲವರ ಸಿಡಿಗಳಿವೆ, ಎಸ್​ಐಟಿ ಬದಲು ಸಿಬಿಐ ತನಿಖೆ ಒಳ್ಳೇದು: ಬಸನಗೌಡ ಪಾಟೀಲ್ ಯತ್ನಾಳ್

Follow Us
Skanda
Skanda
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ