AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್: ಸೆಗಣಿಗೆ ಕಲ್ಲು ಹಾಕಲ್ಲವೆಂದು ಡಿಕೆಶಿ ತಿರುಗೇಟು

ಡಿಸಿಎಂ ಡಿಕೆ ಶಿವಕುಮಾರ್ ಬಿಜೆಪಿ ಸೇರಲು ಯತ್ನಿಸುತ್ತಿದ್ದಾರೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ದೆಹಲಿಯಲ್ಲಿ ಚರ್ಚೆ ನಡೆದಿತ್ತು. ಶಾಸಕರ ಬೆಂಬಲದ ಕೊರತೆಯಿಂದ ಡಿಕೆ ಶಿವಕುಮಾರ್ ಯತ್ನ ಸಫಲವಾಗಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಆದರೆ, ಡಿಕೆ ಶಿವಕುಮಾರ್ ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

ಡಿಕೆ ಶಿವಕುಮಾರ್ ಒಂದು ಕಾಲು ಬಿಜೆಪಿಯಲ್ಲಿಟ್ಟಿದ್ದಾರೆ ಎಂದ ಬಸನಗೌಡ ಪಾಟೀಲ್ ಯತ್ನಾಳ್: ಸೆಗಣಿಗೆ ಕಲ್ಲು ಹಾಕಲ್ಲವೆಂದು ಡಿಕೆಶಿ ತಿರುಗೇಟು
ಡಿಕೆ ಶಿವಕುಮಾರ್ & ಬಸನಗೌಡ ಪಾಟೀಲ್ ಯತ್ನಾಳ್
Ganapathi Sharma
|

Updated on: Aug 31, 2025 | 4:07 PM

Share

ಬೆಂಗಳೂರು, ಆಗಸ್ಟ್ 31: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಒಂದು ಕಾಲು ಬಿಜೆಪಿಯಲ್ಲಿ (BJP ಇಟ್ಟಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Bsanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ. ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆಸಿದ್ದಾರೆ. ಆದರೆ ಅವರಿಗೆ ಶಾಸಕರ ಬೆಂಬಲ ಕಡಿಮೆ ಇದೆ ಎಂಬ ಕಾರಣಕ್ಕೆ ಅದು ಮುಂದುವರಿಯಲಿಲ್ಲ ಎಂದು ಯತ್ನಾಳ್ ಹೇಳಿದ್ದಾರೆ. ಆದರೆ ಇದಕ್ಕೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಆ ಸೆಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದು ಹೇಳಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?

‘‘ಡಿಕೆ ಶಿವಕುಮಾರ್ ಈಗಾಗಲೇ ಬಿಜೆಪಿಯಲ್ಲಿ ಒಂದು ಕಾಲು ಇಟ್ಟಾಗಿದೆ. ನಮ್ಮ ಮಹಾಮಹಿಮ ರಾಜ್ಯಾಧ್ಯಕ್ಷರ ಜೊತೆ ದೆಹಲಿಯಲ್ಲಿ ಒಂದು ಸುತ್ತಿನ ಚರ್ಚೆ ನಡೆದಿದೆ. ಸುಮಾರು 60 ರಿಂದ 70 ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಬಿಜೆಪಿಗೆ ಬಂದು ‘‘ನಮಸ್ತೇ ಸದಾ ವತ್ಸಲೇ’’ ಎಂದು ಹೇಳುವ ಯೋಜನೆಯನ್ನೂ ಅವರು ಹಾಕಿಕೊಂಡಿದ್ದರು. ಆದರೆ 12 ರಿಂದ 13 ಮಂದಿ ಶಾಸಕರ ಬೆಂಬಲವುಯವೂ ಅವರಿಗಿಲ್ಲ, ಎಲ್ಲರೂ ಸಿಎಂ ಸಿದ್ದರಾಮಯ್ಯ ಕಡೆ ಇದ್ದಾರೆ ಎಂಬುದು ಇಂಟಲಿಜೆನ್ಸ್ ಮಾಹಿತಿಯಿಂದ ತಿಳಿದು ಬಂದಿತ್ತು. ಈ ಬಗ್ಗೆ ನಮ್ಮ ಹೈಕಮಾಂಡ್ ನಾಯಕರೇ ಒಬ್ಬರು ನನ್ನ ಬಳಿ ಕೇಳಿದ್ದರು. ಡಿಕೆ ಶಿವಕುಮಾರ್ ಬಳಿ ಎಷ್ಟು ಕಾಂಗ್ರೆಸ್ ಶಾಸಕರಿದ್ದಾರೆ ಎಂದು ಕೇಳಿದ್ದರು. ಒಂದು ಹತ್ತು ಮಂದಿ ಇರಬಹುದು. ಬಿಜೆಪಿಗೆ ಬರುತ್ತಾರೆಂದು ಗೊತ್ತಾದರೆ ಅವರು ಕೂಡ ಇರಲಿಕ್ಕಿಲ್ಲ ಎಂದು ಹೇಳಿದ್ದೆ’’ ಎಂದು ಯತ್ನಾಳ್ ಹೇಳಿದ್ದಾರೆ.

ಯತ್ನಾಳ್ ಹೇಳಿಕೆಯ ವಿಡಿಯೋ

ಸಿದ್ದರಾಮಯ್ಯ ಮುಸ್ಲಿಂ ಓಲೈಕೆ ಮಾಡುತ್ತಾರೆ. ಆದರೂ ಒಂದೆರಡು ವರ್ಷ ಅವರೇ ಸರ್ಕಾರ ಮುನ್ನಡೆಸಲಿ. ಇವರಿಬ್ಬರು (ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ) ಭ್ರಷ್ಟರು ಸೇರಿದರೆ ಕರ್ನಾಟಕವನ್ನೇ ಮಾರಾಟ ಮಾಡಿಬಿಟ್ಟಾರು ಎಂದು ಯತ್ನಾಳ್ ವ್ಯಂಗ್ಯವಾಡಿದ್ದಾರೆ.

ಸಗಣಿ ಮೇಲೆ ಕಲ್ಲು ಹಾಕಲು ಇಷ್ಟ ಇಲ್ಲ: ಡಿಕೆ ಶಿವಕುಮಾರ್ ತಿರುಗೇಟು

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ತಿರುಗೇಟು ನೀಡಿರುವ ಡಿಕೆ ಶಿವಕುಮಾರ್, ಸಗಣಿ ಮೇಲೆ ಕಲ್ಲು ಹಾಕಲು ಇಷ್ಟ ಇಲ್ಲ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರು ಹೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನೋಡಿ ಆ ಕಸ, ಸಗಣಿ ಮೇಲೆ ಕಲ್ಲು ಹಾಕಲು ನನಗೆ ಇಷ್ಟವಿಲ್ಲ ಎಂದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿಕೆ ಶಿವಕುಮಾರ್

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​