AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಮಿನಲ್ ವ್ಯಕ್ತಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮಾಡಿತೇ ಸರ್ಕಾರ?: ಸಿಡಿದೆದ್ದ ಯತ್ನಾಳ್

ವಿಜಯಪುರ ಜಿಲ್ಲೆಗೆ ಪಬ್ಲಿಕ್ ಪ್ರಾಸಿಕ್ಯೂಟರ್ (ಪಿಪಿ) ಆಗಿ ಸೈಯದ್ ಬಾಷಾ ಖಾದ್ರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈ ನೇಮಕಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಪಿಪಿ ಆಗಿ ಸೈಯದ್ ಬಾಷಾ ಖಾದ್ರಿ ಅವರನ್ನು ನೇಮಕ ಮಾಡಿರುವುದನ್ನು ಸರ್ಕಾರ ಹಿಂಪಡೆಯಬೇಕು. ಸೈಯದ್ ಬಾಷಾ ಖಾದ್ರಿ ಕ್ರಿಮಿನಲ್​ ಹಿನ್ನೆಲೆ ಹೊಂದಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದರು.

ಕ್ರಿಮಿನಲ್ ವ್ಯಕ್ತಿಯನ್ನು ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಮಾಡಿತೇ ಸರ್ಕಾರ?: ಸಿಡಿದೆದ್ದ ಯತ್ನಾಳ್
ಬಸನಗೌಡ ಪಾಟೀಲ್​ ಯತ್ನಾಳ್​, ಸೈಯದ್ ಬಾಷಾ ಖಾದ್ರಿ
Sunil MH
| Edited By: |

Updated on:Aug 13, 2025 | 9:55 PM

Share

ಬೆಂಗಳೂರು, ಆಗಸ್ಟ್​ 13: ವಿಜಯಪುರ (Vijayapura) ಜಿಲ್ಲೆಗೆ ಸರ್ಕಾರಿ ಅಭಿಯೋಜಕರಾಗಿ (Public Prosecutor) ಸರ್ಕಾರಿ ವಕೀಲ ಸೈಯದ್ ಬಾಷಾ ಖಾದ್ರಿ ಅವರನ್ನು ನೇಮಕ ಮಾಡಿದಕ್ಕೆ ವಿಧಾನಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆಕ್ಷೇಪ ವ್ಯಕ್ತಪಡಿಸಿದರು. “ಸೈಯದ್ ಬಾಷಾ ಖಾದ್ರಿ ಓರ್ವ ಕ್ರಿಮಿನಲ್, ಕೊಲೆಗಡುಕ. ಸೈಯದ್ ಕ್ರಿಮಿನಲ್ ಶಿಕ್ಷೆಗೆ ಗುರಿಯಾಗಿ ಗಡಿಪಾರು ಶಿಕ್ಷೆಗೂ ಗುರಿಯಾಗಿದ್ದನು. ಇಂತಹ ಕ್ರಿಮಿನಲ್ ವ್ಯಕ್ತಿಯನ್ನು ಸರ್ಕಾರಿ ಅಭಿಯೋಜಕರಾಗಿ ಸರ್ಕಾರ ನೇಮಿಸಿದೆ. ಇದು ಸರ್ಕಾರದಿಂದ ಓಲೈಕೆಯ ಅತಿರೇಕತನ, ತಕ್ಷಣ ವಜಾಮಾಡಬೇಕೆಂದು ವಿಧಾನಸಭೆಯಲ್ಲಿ ಆಗ್ರಹಿಸಿದರು.

ಇದಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಉತ್ತರ ನೀಡಿದರು. ಸೈಯದ್ ಬಾಷಾ ಖಾದ್ರಿಯನ್ನು ಒಂದು ವರ್ಷದ ಅವಧಿಗೆ ಆಯ್ಕೆ ಮಾಡಲಾಗಿದೆ. ಗಡಿಪಾರಾದ ವಕೀಲ ಕೋರ್ಟ್​ಗೆ ಬಂದು ವಕಾಲತ್ತು ಮಾಡಲು ಆಗುವುದಿಲ್ಲ. ಖಾದ್ರಿಯ ಪೊಲೀಸ್ ದಾಖಲೆಯನ್ನು ಸರ್ಕಾರ ಪರಿಶೀಲಿಸಿಲ್ಲ ಎಂದು ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್: ಸೈಯದ್ ಬಾಷಾ ಖಾದ್ರಿ ವಜಾಮಾಡದಿದ್ದರೇ ಧರಣಿ ಕೂರುವುದಾಗಿ ಎಚ್ಚರಿಕೆ ಎಚ್ಚರಿಕೆ ನೀಡಿದರು.

ಹೆಚ್​ಕೆ ಪಾಟೀಲ್​: ಸರ್ಕಾರದ ಹಂತದಲ್ಲಿ ಪರಿಶೀಲಿಸುತ್ತೇವೆ. ಚರ್ಚೆ ನಡೆಸಿ ಕ್ರಮಕೈಗೊಳ್ಳುತ್ತೇವೆ ಎಂದು ಉತ್ತರಿಸಿದರು.

ಈ ವೇಳೆ ಮಧ್ಯ ಪ್ರವೇಶಿಸಿದ ಸ್ಪೀಕರ್ ಯು ಟಿ ಖಾದರ್, ಸೋಮವಾರ ಇದಕ್ಕೆ ಉತ್ತರ ಕೊಡಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಧರಣಿ ಕೈಬಿಟ್ಟರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:54 pm, Wed, 13 August 25

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ