AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಚುನಾವಣೆ ಬಳಿಕ ದೊಡ್ಡ ಬದಲಾವಣೆ: ಅಪ್ಪ ಮಕ್ಕಳ ವಿರುದ್ಧ ಯತ್ನಾಳ್ ಮತ್ತೆ​ ವಾಗ್ದಾಳಿ

ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬಿಎಸ್​ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಮತ್ತೆ​ ವಾಗ್ದಾಳಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಬಳಿಕ ದೊಡ್ಡ ಬದಲಾವಣೆ: ಅಪ್ಪ ಮಕ್ಕಳ ವಿರುದ್ಧ ಯತ್ನಾಳ್ ಮತ್ತೆ​ ವಾಗ್ದಾಳಿ
ಶಾಸಕ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 29, 2024 | 7:33 PM

Share

ವಿಜಯಪುರ, ಮಾರ್ಚ್​​ 29: ಲೋಕಸಭೆ ಚುನಾವಣೆ ಬಳಿಕ ಬಹಳ ದೊಡ್ಡ ಬದಲಾವಣೆಯಾಗುತ್ತದೆ. ಬದಲಾವಣೆಯಾಗಬೇಕೆಂಬ ಕೂಗು ಕರ್ನಾಟಕ ಬಿಜೆಪಿಯಲ್ಲಿ ಏಳುತ್ತೆ. ನಾಯಕರು, ಕಾರ್ಯಕರ್ತರ ಜತೆ ನಡೆದುಕೊಂಡ ರೀತಿ ಸರಿಯಲ್ಲ ಎಂದು ಬಿಎಸ್​ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತೆ​ ವಾಗ್ದಾಳಿ ಮಾಡಿದ್ದಾರೆ. ವಿಜಯಪುರ ತಾಲೂಕಿನ ತೊರವಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್​ ಯಡಿಯೂರಪ್ಪ ಬಿಟ್ಟರೆ ಬಿಜೆಪಿ ಮುಳುಗಿ ಹೋಗುತ್ತೆ ಎಂದುಕೊಂಡಿರಬಹುದು. ನಾವಂತೂ ಯಡಿಯೂರಪ್ಪ ನಾಯಕತ್ವ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ಮೊದಲಿನಿಂದಲೂ ಬಿಎಸ್ ಯಡಿಯೂರಪ್ಪ ಜೊತೆಗೆ ಯಾವ ಸಮುದಾಯಗಳು ಇಲ್ಲ. ಪ್ರಮುಖವಾಗಿ ನಮ್ಮ ಪಂಚಮಸಾಲಿ ಸಮುದಾಯ ಜೊತೆಗಿಲ್ಲ. ನಮ್ಮ ಸಮುದಾಯಕ್ಕೆ ಬಿ.ಎಸ್.ಯಡಿಯೂರಪ್ಪ ಮೋಸ ಮಾಡಿದ್ದಾರೆ. ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಅಡ್ಡಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಸರ್ಕಾರದಲ್ಲಿ ಶೆ.50ರಷ್ಟು ಕಮಿಷನ್​: ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ

BJP ಟಿಕೆಟ್ ಹಂಚಿಕೆ ವಿಚಾರವಾಗಿ ನಾಯಕರ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಟಿಕೆಟ್ ಹಂಚಿಕೆಯ ವಿಚಾರವಾಗಿ ಭಿನ್ನಮತ ಅವರಿಂದಲೇ ಆಗುತ್ತಿದೆ. ತುಮಕೂರಿನಲ್ಲಿ ಬಿ.ಎಸ್​.ಯಡಿಯೂರಪ್ಪ ಶಿಷ್ಯ ಜೆ.ಸಿ.ಮಾಧುಸ್ವಾಮಿ. ಯಡಿಯೂರಪ್ಪ ಕೆಜೆಪಿ ಮಾಡಿದಾಗ ಚಂದ್ರಪ್ಪ ರಾಜೀನಾಮೆ ನೀಡಿ ಹೋಗಿದ್ದರು. ಈಗ ಅವರನ್ನು ಕರೆದು ಮಾತನಾಡಿಸದೆ ಟಿಕೆಟ್ ಘೋಷಣೆ ಮಾಡಿದ್ದಾರೆ ಎಂದಿದ್ದಾರೆ.

ಚಿತ್ರದುರ್ಗದಲ್ಲಿ ಕಾರಜೋಳಗೆ ಕೊಡದಿದ್ದರೆ ಪ್ರಚಾರ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಯಡಿಯೂರಪ್ಪ ಬ್ಲಾಕ್​ಮೇಲ್ ಮಾಡಿ ಕಾರಜೋಳಗೆ ಟಿಕೆಟ್ ಕೊಡಿಸಿದ್ದಾರೆ. ಈ ವಿಚಾರವನ್ನು ಶಾಸಕ ಚಂದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ರೇಣುಕಾಚಾರ್ಯ ಇದೇ ಯಡಿಯೂರಪ್ಪ ಶಿಷ್ಯ. ನನಗೂ ಬೇರೆ ಜಿಲ್ಲೆಗೆ ಹೋಗಿ ಲೋಕಸಭೆಗೆ ನಿಲ್ಲುವಂತೆ ಸೂಚಿಸಿದ್ದರು. ನಾವು ಬೇರೆ ಜಿಲ್ಲೆಗೆ ಹೋಗಿ ಅಲ್ಲಿಯ ಕಾರ್ಯಕರ್ತರಿಗೆ ತೊಂದರೆ ಕೊಡಬಾರದು.

ಇದನ್ನೂ ಓದಿ: ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟವನ್ನು ಭಜರಂಗದಳದ ಮೇಲೆ ಹಾಕುವವರಿದ್ದರು ಅಯೋಗ್ಯ ನನ್ಮಕ್ಕಳು: ಯತ್ನಾಳ್​​

ಶೆಟ್ಟರ್ ಬಲಿಕೊಡ್ತಾರೋ, ಹೆಬ್ಬಾಳ್ಕರ್ ಜತೆ ಒಳ ಒಪ್ಪಂದವಿದೆಯೋ ಗೊತ್ತಿಲ್ಲ. ಸಚಿವೆ ಹೆಬ್ಬಾಳ್ಕರ್​ಗೆ ಅನುಕೂಲ ಆಗುವಂತಹ ಕುತಂತ್ರವಿರಬಹುದು. ಇದನ್ನೆಲ್ಲ ಮಾಡುತ್ತಿರುವವರು ಅದೇ ಅಪ್ಪ ಮಕ್ಕಳು. ಅಪ್ಪ ಮಕ್ಕಳಿಗೆ ಕಳಕಳಿ ಇದ್ದರೆ ಕೆ.ಎಸ್.ಈಶ್ವರಪ್ಪಗೆ ಟಿಕೆಟ್​ ಕೊಡಬೇಕಿತ್ತು. ಮತ್ತೊಬ್ಬರಿಗೆ ತ್ಯಾಗ ಮಾಡುವ ಕಥೆ ಹೇಳುವ ನೀವು ತ್ಯಾಗ ಮಾಡಿ. ನಮ್ಮಲ್ಲ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ಕೊಟ್ಟಿಲ್ಲ. ಕೆ.ಎಸ್.ಈಶ್ವರಪ್ಪ ಟಿಕೆಟ್​ ಕೇಳಿರುವುದರಲ್ಲಿ ಯಾವ ತಪ್ಪಿಲ್ಲ ಎಂದು ಹೇಳಿದ್ದಾರೆ.

ದಿಂಗಾಲೇಶ್ವರ ಸ್ವಾಮೀಜಿ ಯಡಿಯೂರಪ್ಪ ಚೇಲಾ

ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ ಯತ್ನಾಳ್​, ಸಿಎಂ ಸ್ಥಾನದಿಂದ ಇಳಿಸುವಾಗ ಬಿಜೆಪಿ ನಾಯಕರನ್ನು ಹೆದರಿಸಿದರು. ದಿಂಗಾಲೇಶ್ವರಶ್ರೀ ಸೇರಿ ಇತರೆ ಶ್ರೀಗಳು ನಾಯಕರನ್ನು ಅಂಜಿಸಿದರು. ದೇಶದಲ್ಲಿ ಹಿಂದುತ್ವ ಉಳಿಯಬೇಕು, ಭಾರತ ಜಗತ್ತಿನ ಗುರುವಾಗಬೇಕು. ಯಾರು ಏನೇ ಅಂದರೂ ಪ್ರಲ್ಹಾದ್​ ಜೋಶಿ ಗೆಲ್ಲುತ್ತಾರೆ. ಇಂತಹದ್ದನ್ನೆಲ್ಲಾ ಮಾಡುವರು ಅಪ್ಪ ಮಕ್ಕಳೇ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ